Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

​ಹಿಮಾಚಲ ಪ್ರದೇಶದಲ್ಲಿ ಭೂಕಂಪದ ಆಘಾತ: ಕಂಗ್ರಾ-ಚಂಬಾ ಭಾಗದಲ್ಲಿ ನಡುಗಿದ ಭೂಮಿ, ಚಂಡೀಗಢ ಮತ್ತು ಪಂಜಾಬ್‌ನಲ್ಲೂ ಕಂಪನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಧರ್ಮಸ್ಥಳ ಮಂಜುನಾಥ’ ಹಿಂದೂ ದೇವಾಲಯನಾ? ಅಥವಾ ಜೈನ ದೇವಾಲಯನಾ? ಇಲ್ಲಿದೆ ಐತಿಹಾಸಿಕ ಮಾಹಿತಿ
KARNATAKA

‘ಧರ್ಮಸ್ಥಳ ಮಂಜುನಾಥ’ ಹಿಂದೂ ದೇವಾಲಯನಾ? ಅಥವಾ ಜೈನ ದೇವಾಲಯನಾ? ಇಲ್ಲಿದೆ ಐತಿಹಾಸಿಕ ಮಾಹಿತಿ

By ವಸಂತ ಬಿ ಈಶ್ವರಗೆರೆ

ಕೆಎನ್ಎನ್ ಡಿಜಿಟಲ್ ಡೆಸ್ಕ್: ಶ್ರೀ ಮಂಜುನಾಥನಿಗೆ ಅರ್ಪಿತವಾದ ಪುಣ್ಯಕ್ಷೇತ್ರ ಧರ್ಮಸ್ಥಳ ಹಿಂದೂ ದೇವಾಲಯನಾ? ಅಥವಾ ಜೈನ ದೇವಾಲಯನಾ? ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಪೋಟೋ ಒಂದು ಹರಿದಾಡುತ್ತಿದೆ. ಅದರಲ್ಲಿ ಏನಿದೆ ಎನ್ನುಬ ಬಗ್ಗೆ ಮುಂದೆ ಓದಿ.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳ. ಸುಮಾರು ಏಳರಿಂದ ಎಂಟು ನೂರು ವರುಷಗಳ ಇತಿಹಾಸ ಹೊಂದಿರುವ ಪವಿತ್ರ ಕ್ಷೇತ್ರ. ಜೈನ ಬಂಟ ಸಮುದಾಯ ಆರಂಭಿಸಿರುವ ಈ ದೇವಾಲಯ.

Dharmasthala Governing Religion: ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯನ್ನು ಆರಾಧನೆ ಮಾಡಲಾಗುತ್ತದೆ. ಪ್ರತಿನಿತ್ಯ ಸಾವಿರಾರು ಮಂದಿ, ಇನ್ನೂ ಕೆಲವೊಮ್ಮೆ ಲಕ್ಷಾಂತರ ಜನ ಸಮೂಹವೇ ಸೇರುವ ಈ ಪುಣ್ಯಕ್ಷೇತ್ರ ಒಂದಲ್ಲ, ಎರಡಲ್ಲ ಅದೆಷ್ಟೋ ದಾನ ಧರ್ಮಗಳನ್ನು ಮಾಡುತ್ತಾ ಸಮಾಜಕ್ಕೆ ಕೊಡುಗೆ ನೀಡುತ್ತಿದೆ.

ಸುಮಾರು ಏಳರಿಂದ ಎಂಟು ನೂರು ವರುಷಗಳ ಇತಿಹಾಸ ಹೊಂದಿರುವ ಈ ಪವಿತ್ರ ಕ್ಷೇತ್ರ ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ ಆರಾಧ್ಯ ದೈವ ಮಂಜುನಾಥ ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತಿಗಳಾದ ಶ್ರೀ ವಾದಿರಾಜರು ಪ್ರತಿಷ್ಠಾಪಿಸಿದರು ಎಂಬುದು ಪ್ರತೀತಿ
ಅಂದಹಾಗೆ ಇಂದಿನ ಧರ್ಮಸ್ಥಳದ ಹಿಂದಿನ ಹೆಸರು ‘ಕುಡುಮ’, ಸದ್ಯ ಈ ಕ್ಷೇತ್ರದ ಬಗ್ಗೆ ಕಳೆದ ಕೆಲದಿನಗಳಿಂದ ಭಾರೀ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಧರ್ಮಸ್ಥಳ ಕ್ಷೇತ್ರ ಹಿಂದೂ ದೇವಾಲಯವೇ? ಅಥವಾ ಜೈನ ಧರ್ಮಕ್ಕೆ ಸಂಬಂಧಪಟ್ಟ ಕ್ಷೇತ್ರವೇ? ಎಂಬ ಪ್ರಶ್ನೆ. ಸದ್ಯ ಉದ್ಭವವಾಗಿದೆ. ಈ ಗೊಂದಲಕ್ಕೆ ಈ ವರದಿಯಲ್ಲಿ ಉತ್ತರ ನೀಡಲಾಗಿದೆ.

ಇತಿಹಾಸದ ಪುಟಗಳಲ್ಲಿ ಉಲ್ಲೇಖಗೊಂಡ ಪ್ರಕಾರ, ಜೈನ ಧರ್ಮದ ಮುಖ್ಯಸ್ಥ ನೆಲ್ಯಾಡಿ ಬೀಡು ಎಂಬ ಮನೆಯಲ್ಲಿ ಧರ್ಮನಿಷ್ಠರಾಗಿ ವಾಸವಾಗಿದ್ದ ಬಿರ್ಮಣ್ಣ ಪೆರ್ಗಡೆ ಮತ್ತು ಅಮ್ಮು ಬಲ್ಲಾಳಿ ಎಂಬ ದಂಪತಿಯ ಮನೆಗೆ ಒಂದೊಮ್ಮೆ ನಾಲ್ವರು ಅತಿಥಿಗಳು ಆಗಮಿಸಿದ್ದರು. ಇವರನ್ನು ನಿಷ್ಠೆಯಿಂದ ಪೆರ್ಗಡೆ ದಂಪತಿ ಸತ್ಕಾರ ಮಾಡಿದ್ದರು.

ಅದೇ ದಿನ ರಾತ್ರಿ ಆ ನಾಲ್ವರು ಅತಿಥಿಗಳು ಧರ್ಮದೇವತೆಗಳ ರೂಪದಲ್ಲಿ ಬಿರ್ಮಣ್ಣ ಪೆರ್ಗಡೆಯವರ ಕನಸಿನಲ್ಲಿ ಕಾಣಿಸಿಕೊಂಡು, ತಾವೆಲ್ಲರೂ ಆ ಮನೆಯಲ್ಲಿ ನೆಲೆಸಲು ಇಚ್ಚಿಸಿರುವುದಾಗಿ ಹೇಳಿದರು. ಧರ್ಮದೇವತೆಗಳ ಅಣತಿಯಂತೆ ಪೆರ್ಗಡೆಯವರು ತಮ್ಮ ಮನೆ ಖಾಲಿ ಮಾಡಿ ದೈವಗಳಿಗೆ ಬಿಟ್ಟು ಕೊಟ್ಟರು. ಅಂದಿನಿಂದ ಕಾಳರಾಹು-ಪುರುಷದೈವ, ಕಳರ್ಕಾಯಿ ದೈವ, ಕುಮಾರಸ್ವಾಮಿ-ಪುರುಷದೈವ, ಹಾಗೂ ಕನ್ಯಾಕುಮಾರಿ ದೈವ ಆ ಮನೆಯಲ್ಲಿ ನೆಲೆನಿಂತರು. ಆ ನಂತರ ದೈವಗಳ ಆವಯಂಡ ಪರ್ಗಡೆಯವರು ದೈವಗಳಿಗೆ ಗುಡಿಕಟ್ಟಿಸಿ ಬ್ರಾಹ್ಮಣ ಅರ್ಚಕರ ಸಮ್ಮುಖದಲ್ಲಿ ನಿತ್ಯ ಪೂಜೆಗಳನ್ನು ನೆರವೇರಿಸಿದರು.

ಆದಾದ ಬಳಿಕ ಶಿವಯೋಗಿಗಳು ಈ ಪವಿತ್ರ ಸ್ಥಳದಲ್ಲಿ ಈಶ್ವರ ಲಿಂಗವನ್ನು ಸ್ಥಾಪಿಸುವಂತೆ ಸಲಹೆ ನೀಡಿದರು. ಅಷ್ಟೇ ಅಲ್ಲದೆ ಧರ್ಮದೇವತೆಗಳು ಕೂಡ ಇದನ್ನೇ ಹೇಳಿ ಕದ್ರಿಯಲ್ಲಿರುವ ಮಂಜುನಾಥನ ಲಿಂಗ ತರಲು ತಮ್ಮ ಪ್ರತಿನಿಧಿಯಾಗಿ ಅಣ್ಣಪ್ಪಸ್ವಾಮಿಯನ್ನು ಕಳುಹಿಸಿದರು. ಕುಡುಮಕ್ಕೆ (ಧರ್ಮಸ್ಥಳ) ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು ದೇವಾಲಯ ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.

ಧರ್ಮಸ್ಥಳ, ರಾಜ್ಯದ ಅತ್ಯಂತ ಪುರಾತನ ದೇವಾಲಯ. ಜೈನ ಬಂಟ ಸಮುದಾಯ ಆರಂಭಿಸಿರುವ ಈ ದೇವಾಲಯದ ಗರ್ಭಗುಡಿಯ ಒಳಗೆ ವೈಷ್ಣವ ಬ್ರಾಹ್ಮಣರಿಗೆ ಹೊರತುಪಡಿಸಿ ಇನ್ಯಾರಿಗೂ ಪ್ರವೇಶಕ್ಕೆ ಅವಕಾಶವಿಲ್ಲ. ಇನ್ನು ಅನೇಕರಿಗೆ ಧರ್ಮಸ್ಥಳ ಹಿಂದೂ ದೇವಾಲಯವಾ ಅಥವಾ ಜೈನ ದೇವಾಲಯವಾ ಎಂಬ ಪ್ರಶ್ನೆ ಇದೆ. ಈ ಕ್ಷೇತ್ರ ಜೈನ ಬಂಟ ಸಮುದಾಯ ನಿರ್ವಹಿಸಿಕೊಂಡು ಬರುತ್ತಿರುವ, ವೈಷ್ಣವ ಬ್ರಾಹ್ಮಣರು ಪೂಜಿಸುವ ಏಕೈಕ ಕ್ಷೇತ್ರ ಎಂದೇ ಹೇಳಬಹುದು.

ವೈಷ್ಣವರ ಪೂಜೆ, ಜೈನರ ಆಡಳಿತ ಮತ್ತು ಸರ್ವರ ದೇವರು.. ಲೋಕದಲ್ಲಿ ಬೇರೆಲ್ಲೂ ಕಾಣಸಿಗದ ಅಪರೂಪದ ಕ್ಷೇತ್ರ ಅಂದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ, ಈ ಸ್ಥಳವನ್ನು ವಿದನ ಅಚ್ಚುಮೆಚ್ಚಿನ ಸ್ಥಳ ಎಂದೂ ಸಹ ಕರೆಯಲಾಗುತ್ತದೆ.

(ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ಪೋಟೋ ಪ್ರತಿಯ ಮಾಹಿತಿಯಾಗಿದೆ. ಇದಕ್ಕೂ ಕನ್ನಡ ನ್ಯೂಸ್ ನೌಗೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಈ ಮೂಲಕ ಸ್ಪಷ್ಟಪಡಿಸಿದೆ. ವೈರಲ್ ಆಗಿರುವಂತ ಪೋಟೋ ಪ್ರತಿಯನ್ನು ಈ ಕೆಳಗೆ ಹಾಕಲಾಗಿದ್ದು, ಪರಿಶೀಲಿಸಬಹುದಾಗಿದೆ.)

‘ರಾಜ್ಯ ಸರ್ಕಾರಿ ನೌಕರ’ರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ | Karnataka Government Employees

ಹೊಸ ‘APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆ, ದಾಖಲೆಗಳೇನು.? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

1 Min Read

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read
Recent News

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

​ಹಿಮಾಚಲ ಪ್ರದೇಶದಲ್ಲಿ ಭೂಕಂಪದ ಆಘಾತ: ಕಂಗ್ರಾ-ಚಂಬಾ ಭಾಗದಲ್ಲಿ ನಡುಗಿದ ಭೂಮಿ, ಚಂಡೀಗಢ ಮತ್ತು ಪಂಜಾಬ್‌ನಲ್ಲೂ ಕಂಪನ

ದೇಶದ ಕರೆನ್ಸಿ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಗೆ `RBI’ ಸಿದ್ಧತೆ :ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು!

State News
KARNATAKA

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

By kannadanewsnow57 KARNATAKA 1 Min Read

ಬೆಂಗಳೂರು: ನಿಮ್ಮ ವಾಹನದ ಮೇಲೆ ಹಳೇ ಟ್ರಾಫಿಕ್ ಫೈನ್ ಬಾಕಿ ಉಳಿದಿದೆಯೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ! ನಿಯಮ ಉಲ್ಲಂಘನೆ…

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,395 ಸಿವಿಲ್ `ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Police Recruitment

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.