Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಈರುಳ್ಳಿ’ಯಲ್ಲಿ ಇರುವ ವಿಟಮಿನ್ ಯಾವ್ದು.? ಪ್ರತಿದಿನ ತಿನ್ನುವುದ್ರಿಂದ ದೇಹದ ಮೇಲೆ ಯಾವ ಪರಿಣಾಮ ಬೀರುತ್ತೆ ಗೊತ್ತಾ.?

23/06/2025 8:47 PM

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

23/06/2025 8:39 PM

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

23/06/2025 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾವೇರಿ 2.0 ತಂತ್ರಾಂಶದಲ್ಲಿ ಬರುವಂತ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ
KARNATAKA

ಕಾವೇರಿ 2.0 ತಂತ್ರಾಂಶದಲ್ಲಿ ಬರುವಂತ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ

By kannadanewsnow0725/07/2024 10:17 AM

ಬೆಂಗಳೂರು: ಕಾವೇರಿ 2.0 ತಂತ್ರಾಂಶದಲ್ಲಿ ಬರುವಂತ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಚಿದಾನಂದ್ ಎಂ. ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ 2.0 ತಂತ್ರಂಶದಲ್ಲಿ ಸಿಟಿಜನ್ ಲಾಗಿನ್ ನಲ್ಲಿ ಸ್ವತ್ತು ಹಾಗೂ ಪಕ್ಷಕಾರರು ವಿವರಗಳನ್ನು ನಮೂದಿಸಿ ಸಂಬಂಧಿಸಿದ ದಾಖಲೆಗಳನ್ನು ಅಪ್ ಲೊಡ್ ಮಾಡಿ ಸಲ್ಲಿಸಬೇಕಾಗಿರುತ್ತದೆ. ಈ ಸಮಯದಲ್ಲಿ ಪಕ್ಷಕಾರರ ಪೋಟೋ ಅಪ್ ಲೋಡ್ ಮಾಡುವ ಅವಶ್ವಕತೆ ಇರುವುದಿಲ್ಲ. ವಿವಿರಗಳ ನಮೂದು ಸಮಯದಲ್ಲಿ ಸೆಷನ್ ಔಟ್ ಆದಲ್ಲಿ ಮತ್ತೊಮ್ಮೆ ಲಾಗಿನ್ ಆಗಿ ಮುಂದುವರೆಯಬಹುದಾಗಿದೆ. ಹಿಂದೆ ನಮೂದಿಸಲಾದ ಮಾಹಿತಿ ಸೇವ್ ಆಗಿರುತ್ತದೆ ಮತ್ತು ಹೊಸದಾಗಿ ಮಾಹಿತಿಯನ್ನು ನಮೂದಿಸುವ ಅವಶ್ಯಕತೆ ಇರುವುದಿಲ್ಲ.

ಸಿಟಿಜನ್ ಲಾಗ್ ಇನ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ ಯಾವುದೇ ಸಮಸ್ಯೆಗಳಿರುವುದಿಲ್ಲ. ತಪ್ಪಾದ ಪಾಸ್ ವರ್ಡ್ ನಮೂದಿಸಿ ಲಾಗಿನ್ ವಿಫಲವಾದಲ್ಲಿ ಪಾಸ್ ವರ್ಡ್ ನ್ನು ರಿಸೆಟ್ ಮಾಡಿ ಲಾಗಿನ್ ಆಗಲು ಅವಕಾಶ ಕಲ್ಪಿಸಲಾಗಿರುತ್ತದೆ. ಕಾವೇರಿ 2.0 ತಂತ್ರಂಶದಲ್ಲಿ ನೀಡಲಾಗಿರುವ ಋಣಭಾರ ಪ್ರಮಾಣ ಪತ್ರವನ್ನು ಪಡೆಯಲು ಪ್ರಸ್ತುತ ಯಾವುದೇ ತಾಂತ್ರಿಕ ಸಮಸ್ಯೆಗಳಿರುವುದಿಲ್ಲ ಎಂದು ತಿಳಿಸಿದರು.

ಕಾವೇರಿ 2.0 ತಂತ್ರಂಶವು ನೂತನ ತಂತ್ರಂಶವಾಗಿದ್ದು, ಇದನ್ನು ಜೂನ್ 2023ರ ಅಂತ್ಯಕ್ಕೆ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ಅಳವಡಿಸಲಾಗಿರುತ್ತದೆ. ಈ ತಂತ್ರಾಂಶದಲ್ಲಿ Public Interface ಇರುವುದರಿಂದ ಸಾರ್ವಜನಿಕರು ಆನ್ ಲೈನ್ ಮುಖಾಂತರ ದಸ್ತಾವೇಜಿನ ನೋಂದಣಿಗೆ ಸಂಬಂಧಿಸಿದ ಶೇಕಡ 90ರಷ್ಟು ಕೆಲಸವನ್ನು ಪೂರ್ಣಗೊಳಿಸಿರುತ್ತಾರೆ. ತಂತ್ರಾಂಶದ ಕಾರ್ಯಾಚರಣೆಯಲ್ಲಿ ಸಾರ್ವಜನಿಕರ ಪಾತ್ರ ಹೆಚ್ಚಾಗಿರುವುದರಿಂದ ಪ್ರಾರಂಭದ ದಿನಗಳಲ್ಲಿ ತಂತ್ರಾಂಶವನ್ನು ಉಪಯೋಗಿಸುವಲ್ಲಿ ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳು ಕಂಡು ಬಂದಿದ್ದು, ಅವುಗಳನ್ನು ಕಾಲಕ್ರಮೇಣ ಪರಿಹರಿಸಲಾಗಿರುತ್ತದೆ. ತಂತ್ರಾಂಶ ಬಳಕೆಯಲ್ಲಿ ಎದುರಿಸುವ ಸಮಸ್ಯೆ ಹಾಗೂ ಗೊಂದಲಗಳಿಗೆ ತಕ್ಷಣ ಪರಿಹಾರ ಒದಗಿಸಲು ಇಲಾಖೆಯು ಸಹಾಯವಾಣಿ : 080-68265316 ನ್ನು ಪ್ರಾರಂಭಿಸಿರುತ್ತದೆ. ಅದೇ ರೀತಿ ಟಿಕೇಟಿಂಗ್ ಟೂಲ್, ಸರ್ವೀಸ್ ಡೆಸ್ಕ್, ಅಪ್ಲೀಕೇಷನ್ ಸರ್ಪೋಟ್ ಇಂಜಿನಿಯರ್ ಹಾಗೂ ಸಿಸ್ಟಂ ಅಡ್ಮಿನ್, ಕಾವೇರಿ ಯೋಜನಾ ಉಸ್ತುವಾರಿ ಘಟಕ, ಯುಟ್ಯೂಬ್ ಚಾನಲ್, ಪೋಸ್ಟರ್, ತರಬೇತಿ ಇತ್ಯಾದಿಗಳನ್ನು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ತಿಳಿಸಿದರು.

Issues in Cauvery 2.0 software are being resolved from time to time: Minister Krishna Byre Gowda ಕಾವೇರಿ 2.0 ತಂತ್ರಾಂಶದಲ್ಲಿ ಬರುವಂತ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಲಾಗುತ್ತಿದೆ – ಸಚಿವ ಕೃಷ್ಣಬೈರೇಗೌಡ
Share. Facebook Twitter LinkedIn WhatsApp Email

Related Posts

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

23/06/2025 8:39 PM1 Min Read

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

23/06/2025 8:36 PM2 Mins Read

ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ, ಕುಡಿಯುವ ನೀರು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

23/06/2025 8:19 PM1 Min Read
Recent News

‘ಈರುಳ್ಳಿ’ಯಲ್ಲಿ ಇರುವ ವಿಟಮಿನ್ ಯಾವ್ದು.? ಪ್ರತಿದಿನ ತಿನ್ನುವುದ್ರಿಂದ ದೇಹದ ಮೇಲೆ ಯಾವ ಪರಿಣಾಮ ಬೀರುತ್ತೆ ಗೊತ್ತಾ.?

23/06/2025 8:47 PM

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

23/06/2025 8:39 PM

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

23/06/2025 8:36 PM

ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ, ಕುಡಿಯುವ ನೀರು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

23/06/2025 8:19 PM
State News
KARNATAKA

ಜು.11ರಂದು ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

By kannadanewsnow0923/06/2025 8:39 PM KARNATAKA 1 Min Read

ಹಾಸನ: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನವನ್ನು ಜುಲೈ 11ರಂದು…

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಸಿಎಂ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆರೋಪ

23/06/2025 8:36 PM

ರಾಯಚೂರು ಜಿಲ್ಲೆಯ 1406 ಗ್ರಾಮೀಣ ಜನವಸತಿಗಳಿಗೆ, ಕುಡಿಯುವ ನೀರು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

23/06/2025 8:19 PM

ಜೂನ್.30ರವರೆಗೆ ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ’ಯ ಅವಧಿ ವಿಸ್ತರಣೆ

23/06/2025 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.