Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಹಮದಾಬಾದ್ ವಿಮಾನ ದುರಂತಕ್ಕೆ ಸ್ಪೋಟಕ ಟ್ವಿಸ್ಟ್ : ಪ್ರಾಥಮಿಕ ವರದಿಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

12/07/2025 6:01 AM

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಳೆ ಬರುವ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಪಾಲಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

12/07/2025 5:56 AM

ರಾಜ್ಯ ಸರ್ಕಾರದಿಂದ ಮಹಿಳೆಯರ ಕಿರುಕುಳ ತಡೆಗೆ ಮಹತ್ವದ ಕ್ರಮ : 1930 ಸಹಾಯವಾಣಿ ಸಂಖ್ಯೆ ಬಿಡುಗಡೆ.!

12/07/2025 5:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಳೆ ಬರುವ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಪಾಲಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ
KARNATAKA

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಳೆ ಬರುವ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಪಾಲಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

By kannadanewsnow5712/07/2025 5:56 AM

ಬೆಂಗಳೂರು : ಮಳೆ ಬರುವ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ  ಆದೇಶ ಹೊರಡಿಸಿದೆ.

2025-26ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ದಿನಾಂಕ 15.06.2024 ರ ಉಲ್ಲೇಖಿತ 1 ರ ಪತ್ರದಲ್ಲಿ, ಮಳೆಗಾಲದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪ್ರತಿ ಶಾಲೆಗಳಲ್ಲಿ ಪಾಲಿಸಬೇಕಾದ 7 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿರುತ್ತದೆ.

ಪ್ರಸ್ತುತ ರಾಜ್ಯದ ಬಹುತೇಕ ಕಡೆಗಳಲ್ಲಿ ತೀವ್ರವಾಗಿ ಮಳೆಯುಂಟಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಉಲ್ಲೇಖ(1)ರ ಪತ್ರದಲ್ಲಿ ತಿಳಿಸಲಾಗಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಪಾಲಿಸಲು ಸೂಚಿಸಿದೆ. ಮುಂದುವರೆದು, ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಶಾಲೆಗಳ ಕಟ್ಟಡಗಳಲ್ಲಿನ ಸಮಸ್ಯೆಗಳ ಬಗ್ಗೆ ಇತ್ತೀಚಿಗೆ ಪತ್ರಿಕೆಗಳು ಮತ್ತು ಸುದ್ದಿ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಿದ್ದು, ಈ ವಿಷಯವಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಈಗಾಗಲೇ ಸಾಕಷ್ಟು ನಿರ್ದೇಶನಗಳನ್ನು ಸರ್ಕಾರದಿಂದ ನೀಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಶಾಲೆಗಳ ಕಟ್ಟಡಗಳ ಸುರಕ್ಷತೆಯ ಬಗ್ಗೆ ಪರಿಶೀಲಿಸಿ ತುರ್ತು ದುರಸ್ತಿಗಾಗಿ ಶಿಕ್ಷಣ ಇಲಾಖೆಗೆ ನೀಡಿರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಅನುದಾನಗಳಿಂದ ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಲಭ್ಯವಿರುವ ಸ್ಥಳೀಯ ಸಂಪನ್ಮೂಲಗಳ ಅನುದಾನಗಳಿಂದ ಶೀಘ್ರ ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಕುರಿತು ಉಲ್ಲೇಖ(2)ರ ಸರ್ಕಾರದ ಪತ್ರದಲ್ಲಿ ಈ ಕೆಳಕಂಡ ಅಂಶಗಳಂತೆ ಕ್ರಮವಹಿಸಲು ಸೂಚಿಸಲಾಗಿದ್ದು ಈ ಕುರಿತು ತಮ್ಮ ಹಂತದಲ್ಲಿ ವೈಯಕ್ತಿಕ ಗಮನಹರಿಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ.

ಶಾಲಾ ಕಟ್ಟಡ ಮತ್ತು ಕೊಠಡಿಗಳ ಸದೃಡತೆಯ ಬಗ್ಗೆ ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಬಂಧಿಸಿದ ಅಭಿಯಂತರರ ಮೂಲಕ ಪರಿಶೀಲನೆ ನಡೆಸಿ ಸುರಕ್ಷತಾ ಪ್ರಮಾಣ ಪತ್ರ ಪಡೆಯಲು ಕ್ರಮವಹಿಸುವುದು.

ತಪಾಸಣೆ ಸಂದರ್ಭದಲ್ಲಿ ಯಾವುದೇ ಸರ್ಕಾರಿ ಶಾಲೆಯ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು ಬಳಕೆಗೆ ಯೋಗ್ಯವಲ್ಲವೆಂದು ಕಂಡು ಬಂದಲ್ಲಿ ಕೂಡಲೇ ಅಂತಹ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸದೇ ಸೂಕ್ತ ಬದಲಿ ವ್ಯವಸ್ಥೆಯನ್ನು ಮಾಡಲು ಕ್ರಮವಹಿಸುವುದು.

ಅಲ್ಲದೇ ಜಿಲ್ಲಾ, ಮತ್ತು ತಾಲ್ಲೂಕು ಮಟ್ಟದ ಶಾಲೆಗಳ ಕೊಠಡಿಗಳ ವಸ್ತುಸ್ಥಿತಿಯ ಬಗ್ಗೆ ಉಪ ನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ ಮತ್ತು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ನೈಜ ವರದಿಯನ್ನು ಪಡೆದು ಅದರಂತೆ ತುರ್ತು ಅಗತ್ಯವಿರುವ ದುರಸ್ಥಿ ಕಾರ್ಯಗಳನ್ನು ಆಧ್ಯತೆಯ ಮೇಲೆ ನಿರ್ವಹಿಸುವುದು.

ಈಗಾಗಲೇ ಕಟ್ಟಡ ಕಾಮಗಾರಿಗಳು ಶಾಲೆಯ ಆವರಣದಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಅಂತಹ ಕಡೆ ಶಾಲೆಯ ವಿದ್ಯಾರ್ಥಿಗಳು ಕಟ್ಟಡ ನಿರ್ಮಾಣ/ದುರಸ್ತಿ ಕೆಲಸ ನಡೆಯುತ್ತಿರುವ ಕಡೆ ಹೋಗದಿರುವ ರೀತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು.
ಶಿಥಿಲಗೊಂಡಿರುವ ಕೊಠಡಿಗಳು ಅಥವಾ ಕಟ್ಟಡಗಳು ಇದ್ದಲ್ಲಿ ಅಂತಹ ಕಡೆ ವಿದ್ಯಾರ್ಥಿಗಳು ಹೋಗದೇ ಇರುವ ರೀತಿಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳತಕ್ಕದ್ದು.

ಪ್ರತಿವಾರ ಸಂಬಂಧಿಸಿದ ಅಧಿಕಾರಿಗಳು ಸಭೆ ನಡೆಸಿ ವಸ್ತು ಸ್ಥಿತಿ ಮಾಹಿತಿಯನ್ನು ಪರಿಶೀಲಿಸಿ ಕೈಗೊಳ್ಳಬೇಕಾಗಿರುವ ತುರ್ತು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಅದರಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು.

ಈ ಮೇಲಿನ ಎಲ್ಲಾ ಅಂಶಗಳ ಬಗ್ಗೆ ಎಲ್ಲಾ ಉಪನಿರ್ದೇಶಕರು ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಈ ಪತ್ರದೊಂದಿಗೆ ಲಗತ್ತಿಸಿರುವ ದೃಡೀಕರಣ ಪತ್ರದ ನಮೂನೆಯಲ್ಲಿ ನೀಡುವಂತೆ ಸೂಚಿಸಿದೆ. ಹಾಗೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ಯಾವುದೇ ಅಹಿತಕರ ಘಟನೆ ಸಂಭವಿಸಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳು ನೇರ ಹೊಣೆಗಾರರಾಗಿರುತ್ತಾರೆ ಕ್ರಮವಹಿಸಲು ಸೂಚಿಸಿದೆ. ఎంబ ಅಂಶವನ್ನು ಸ್ಪಷ್ಟಪಡಿಸುತ್ತಾ ನಿಯಮಾನುಸಾರ

ಜಿಲ್ಲಾ ನೋಡಲ್ ಅಧಿಕಾರಿಗಳು, ತಮ್ಮ ಜಿಲ್ಲೆಗೆ ಭೇಟಿನೀಡಿ, ಶಾಲೆಗಳಲ್ಲಿ ಬೋಧನೆಗಾಗಿ ಸುರಕ್ಷಿತ ಕಟ್ಟಡವನ್ನು ಬಳಸುತ್ತಿರುವುದಾಗಿ ಹಾಗೂ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿರುವ ಬಗ್ಗೆ ತಮ್ಮ ವರದಿಯನ್ನು ದಿನಾಂಕ 14.07.2025ರೊಳಗೆ ಈ ಪತ್ರಕ್ಕೆ ಲಗತ್ತಿಸಿರುವ ನಮೂನೆಯಲ್ಲಿ ಸಲ್ಲಿಸಲು ಸೂಚಿಸಿದೆ.

It is mandatory to follow these necessary precautions during rain in all government schools in the state: Education Department orders
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಮಹಿಳೆಯರ ಕಿರುಕುಳ ತಡೆಗೆ ಮಹತ್ವದ ಕ್ರಮ : 1930 ಸಹಾಯವಾಣಿ ಸಂಖ್ಯೆ ಬಿಡುಗಡೆ.!

12/07/2025 5:52 AM1 Min Read

ಮೈಸೂರಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹ

11/07/2025 9:57 PM1 Min Read

‘ಶರಾವತಿ ಪಂಪ್ಡ್ ಸ್ಟೋರೇಜ್’ಗೆ ಸ್ಥಳೀಯ ರೈತರು ಭೂಮಿ ನೀಡಲು ಒಪ್ಪಿಗೆ: ಶಾಸಕ ಗೋಪಾಲಕೃಷ್ಣ ಬೇಳೂರು

11/07/2025 9:49 PM2 Mins Read
Recent News

BREAKING : ಅಹಮದಾಬಾದ್ ವಿಮಾನ ದುರಂತಕ್ಕೆ ಸ್ಪೋಟಕ ಟ್ವಿಸ್ಟ್ : ಪ್ರಾಥಮಿಕ ವರದಿಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

12/07/2025 6:01 AM

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಳೆ ಬರುವ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಪಾಲಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

12/07/2025 5:56 AM

ರಾಜ್ಯ ಸರ್ಕಾರದಿಂದ ಮಹಿಳೆಯರ ಕಿರುಕುಳ ತಡೆಗೆ ಮಹತ್ವದ ಕ್ರಮ : 1930 ಸಹಾಯವಾಣಿ ಸಂಖ್ಯೆ ಬಿಡುಗಡೆ.!

12/07/2025 5:52 AM

BREAKING : ತಡರಾತ್ರಿ ಏರ್ ಇಂಡಿಯಾ ವಿಮಾನ ದುರಂತ ತನಿಖಾ ವರದಿ ಬಹಿರಂಗ : ಇಂಧನ ಸ್ವಿಚ್ ಆಫ್ ಆಗಿದ್ದೇ 260 ಜನರ ಸಾವಿಗೆ ಕಾರಣ.!

12/07/2025 5:50 AM
State News
KARNATAKA

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಳೆ ಬರುವ ವೇಳೆ ಈ ಅಗತ್ಯ ಮುನ್ನೆಚ್ಚರಿಕೆ ಪಾಲಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

By kannadanewsnow5712/07/2025 5:56 AM KARNATAKA 2 Mins Read

ಬೆಂಗಳೂರು : ಮಳೆ ಬರುವ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಿಕ್ಷಣ ಇಲಾಖೆ…

ರಾಜ್ಯ ಸರ್ಕಾರದಿಂದ ಮಹಿಳೆಯರ ಕಿರುಕುಳ ತಡೆಗೆ ಮಹತ್ವದ ಕ್ರಮ : 1930 ಸಹಾಯವಾಣಿ ಸಂಖ್ಯೆ ಬಿಡುಗಡೆ.!

12/07/2025 5:52 AM

ಮೈಸೂರಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹ

11/07/2025 9:57 PM

‘ಶರಾವತಿ ಪಂಪ್ಡ್ ಸ್ಟೋರೇಜ್’ಗೆ ಸ್ಥಳೀಯ ರೈತರು ಭೂಮಿ ನೀಡಲು ಒಪ್ಪಿಗೆ: ಶಾಸಕ ಗೋಪಾಲಕೃಷ್ಣ ಬೇಳೂರು

11/07/2025 9:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.