Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪೋಷಕರೇ ಎಚ್ಚರ : ಆಟ ಆಡುವಾಗ ಹೊಂಡಕ್ಕೆ ಬಿದ್ದು ಬಾಲಕ ಸಾವು.!

22/10/2025 6:11 AM

ರಾಜ್ಯದ ನಿವೃತ್ತ ಪೊಲೀಸ್ `ಆರೋಗ್ಯ ಯೋಜನೆ’ ಮರು ಪಾವತಿ ವೆಚ್ಚ 1.50 ಲಕ್ಷಕ್ಕೆ ಹೆಚ್ಚಳ : CM ಸಿದ್ದರಾಮಯ್ಯ

22/10/2025 6:07 AM

ಇಂದು ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ `ಗೋಪೂಜೆ’ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

22/10/2025 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ, ಹೊಸನಗರ, ಸೊರಬ ವ್ಯಾಪ್ತಿಯಲ್ಲಿ ‘ಗಣೇಶೋತ್ಸವ’ದ ವೇಳೆ ಈ ಸುಕ್ಷತಾ ನಿಯಮ ಪಾಲನೆ ಕಡ್ಡಾಯ: ಮೆಸ್ಕಾಂ ಇಇ
KARNATAKA

ಸಾಗರ, ಹೊಸನಗರ, ಸೊರಬ ವ್ಯಾಪ್ತಿಯಲ್ಲಿ ‘ಗಣೇಶೋತ್ಸವ’ದ ವೇಳೆ ಈ ಸುಕ್ಷತಾ ನಿಯಮ ಪಾಲನೆ ಕಡ್ಡಾಯ: ಮೆಸ್ಕಾಂ ಇಇ

By kannadanewsnow0906/09/2024 7:32 PM

ಶಿವಮೊಗ್ಗ: ಜಿಲ್ಲೆಯ ಸಾಗರ, ಹೊಸನಗರ, ಸೊರಬ ತಾಲ್ಲೂಕಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದಂತ ವೆಂಕಟೇಶ ತಿಳಿಸಿದ್ದಾರೆ.

ಈ ಸಂಬಂಧ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಮೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ ಎಂದು ಸಾಗರ, ಸೊರಬ ಹಾಗೂ ಹೊಸನಗರ ತಾಲ್ಲೂಕು ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಾದಂತ ವೆಂಕಟೇಶ ಮನವಿ ಮಾಡಿದ್ದಾರೆ.

ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ

* ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.
* ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
* ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.
* ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.
* ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.
* ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.
* ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

ಮೆಸ್ಕಾಂ ತಾತ್ಕಲಿಕ ಸಂಪರ್ಕದ ಮಾಹಿತಿ

* ತಾತ್ಕಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಮೆಸ್ಕಾ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.
* ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.
* ಅಗ್ನಿ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.
* ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು ಎಂದು ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಈಗ ಮಾಹಿತಿ ಹಕ್ಕು ಕಾಯ್ದೆಯಡಿ(RTI) ಅರ್ಜಿ ಸಲ್ಲಿಕೆ ಮತ್ತಷ್ಟು ಸರಳ: ಈ ವಿಧಾನ ಅನುಸರಿಸಿ ಆನ್ ಲೈನಲ್ಲೇ ಸಲ್ಲಿಸಿ | File RTI Online

Good News : ವಾಹನ ಸವಾರರಿಗೆ ಸಿಹಿ ಸುದ್ದಿ ; ‘ಕೇಂದ್ರ ಸರ್ಕಾರ’ದಿಂದ ಶೀಘ್ರ ‘ಪೆಟ್ರೋಲ್, ಡಿಸೇಲ್ ಬೆಲೆ’ ಇಳಿಕೆ ; ವರದಿ

ರಾಜ್ಯದಿಂದ 300 ಮೆಗಾವ್ಯಾಟ್ ಸೌರ ವಿದ್ಯುತ್‌ ಖರೀದಿಗೆ JSW ಸಹಿ: ಸಚಿವ ಕೆ.ಜೆ. ಜಾರ್ಜ್‌

Share. Facebook Twitter LinkedIn WhatsApp Email

Related Posts

SHOCKING : ಪೋಷಕರೇ ಎಚ್ಚರ : ಆಟ ಆಡುವಾಗ ಹೊಂಡಕ್ಕೆ ಬಿದ್ದು ಬಾಲಕ ಸಾವು.!

22/10/2025 6:11 AM1 Min Read

ರಾಜ್ಯದ ನಿವೃತ್ತ ಪೊಲೀಸ್ `ಆರೋಗ್ಯ ಯೋಜನೆ’ ಮರು ಪಾವತಿ ವೆಚ್ಚ 1.50 ಲಕ್ಷಕ್ಕೆ ಹೆಚ್ಚಳ : CM ಸಿದ್ದರಾಮಯ್ಯ

22/10/2025 6:07 AM1 Min Read

ಇಂದು ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ `ಗೋಪೂಜೆ’ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

22/10/2025 6:00 AM1 Min Read
Recent News

SHOCKING : ಪೋಷಕರೇ ಎಚ್ಚರ : ಆಟ ಆಡುವಾಗ ಹೊಂಡಕ್ಕೆ ಬಿದ್ದು ಬಾಲಕ ಸಾವು.!

22/10/2025 6:11 AM

ರಾಜ್ಯದ ನಿವೃತ್ತ ಪೊಲೀಸ್ `ಆರೋಗ್ಯ ಯೋಜನೆ’ ಮರು ಪಾವತಿ ವೆಚ್ಚ 1.50 ಲಕ್ಷಕ್ಕೆ ಹೆಚ್ಚಳ : CM ಸಿದ್ದರಾಮಯ್ಯ

22/10/2025 6:07 AM

ಇಂದು ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ `ಗೋಪೂಜೆ’ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

22/10/2025 6:00 AM

ರಾಜ್ಯದ ಜನತೆಯ ಗಮನಕ್ಕೆ : ಇನ್ಮುಂದೆ ಇವರು `BPL-ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.!

22/10/2025 5:59 AM
State News
KARNATAKA

SHOCKING : ಪೋಷಕರೇ ಎಚ್ಚರ : ಆಟ ಆಡುವಾಗ ಹೊಂಡಕ್ಕೆ ಬಿದ್ದು ಬಾಲಕ ಸಾವು.!

By kannadanewsnow5722/10/2025 6:11 AM KARNATAKA 1 Min Read

ಹಾವೇರಿ: ಆಟವಾಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ…

ರಾಜ್ಯದ ನಿವೃತ್ತ ಪೊಲೀಸ್ `ಆರೋಗ್ಯ ಯೋಜನೆ’ ಮರು ಪಾವತಿ ವೆಚ್ಚ 1.50 ಲಕ್ಷಕ್ಕೆ ಹೆಚ್ಚಳ : CM ಸಿದ್ದರಾಮಯ್ಯ

22/10/2025 6:07 AM

ಇಂದು ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ `ಗೋಪೂಜೆ’ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

22/10/2025 6:00 AM

ರಾಜ್ಯದ ಜನತೆಯ ಗಮನಕ್ಕೆ : ಇನ್ಮುಂದೆ ಇವರು `BPL-ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.!

22/10/2025 5:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.