ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ. ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬುದಾಗಿ ಅದರಲ್ಲಿ ಬರೆಸಿ ಹಾಕುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಅದರಲ್ಲಿ ಜಗಜ್ಯೋತಿ ಬಸವೇಶ್ವರ ಎಂದು ಪ್ರಖ್ಯಾತರಾಗಿರುವ ಬಸವಣ್ಣನವರು 12ನೇ ಶತಮಾನದ ವಚನ ಚಳುವಳಿಯ ಹಾಗೂ ಸಾಮಾಜಿಕ ನ್ಯಾಯದ ನಾಯಕತ್ವ ವಹಿಸಿದ್ದರು. ಮನುಧರ್ಮಶಾಸ್ತ್ರವು ಶ್ರೇಣೀಕೃತ ಸಮಾಜವನ್ನು ನಿರ್ಮಾಣ ಮಾಡಿ ಅಸಮಾನತೆಯನ್ನು ಸೃಷ್ಟಿ ಮಾಡಿತ್ತು. ಹುಟ್ಟಿನ ಆಧಾರದ ಮೇಲೆ ಮೇಲು-ಕೀಳು ಎಂದು ಸಮುದಾಯಗಳನ್ನು ಶಾಶ್ವತವಾಗಿ ವಿಭಜಿಸಿ ಕತ್ತಲ ಕೂಪಕ್ಕೆ ತಳ್ಳಲಾಗಿತ್ತು. ದುಡಿಯುವ ವರ್ಗಗಳು ಕ್ರಿಯಾಶೀಲ ಸಮಾಜಗಳ ಸೃಜನಶೀಲ ಶಕ್ತಿಗಳಾಗಿರುತ್ತವೆ. ಆದರೆ ಜಾತಿಯ ಹೆಸರಿನಲ್ಲಿ ಈ ಸಮುದಾಯಗಳ ಚೈತನ್ಯವನ್ನ ಕಿತ್ತುಕೊಳ್ಳಲಾಗಿತ್ತು ಎಂದಿದ್ದಾರೆ.

ಇಂತಹ ಉಸಿರುಗಟ್ಟುವ ನಿಯಮಗಳ ವಿರುದ್ಧ ವಚನ ಚಳುವಳಿಯು ಅತ್ಯಂತ ಪ್ರಬುದ್ಧವಾದ ಹೋರಾಟವನ್ನು ರೂಪಿಸಿತ್ತು, 12ನೇ ಶತಮಾನದಲ್ಲಿ ದೇಶದ ಅನೇಕ ಭಾಗಗಳಿಂದ ಬಂದ ಚಿಂತಕರು, ಹೋರಾಟಗಾರರು ಒಟ್ಟುಗೂಡಿ ಸಮಾನತೆಯ ಚಳುವಳಿಯನ್ನು ಮುನ್ನಡೆಸಿದ್ದರ ಕುರಿತು ಇತಿಹಾಸಕಾರರು ಪ್ರಸ್ತಾಪಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡ ನಮ್ಮ ವ್ಯವಸ್ಥೆಯಂಥದೇ ಕಲ್ಪನೆಯನ್ನು ಬಸವಣ್ಣನವರಾದಿಯಾಗಿ ವಚನಕಾರರು ಮಂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ನಮ್ಮ ಸರ್ಕಾರವು ಬಸವಣ್ಣನವರನ್ನು ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂದು ಘೋಷಣೆ ಮಾಡಿದೆ. ನಮ್ಮ ನಡೆ-ನುಡಿಗಳಲ್ಲಿ ಭಿನ್ನತೆ ಇರಬಾರದು ಎಂಬುದನ್ನು ಬಸವಣ್ಣನವರು ವಚನವಂಬ ಮಾಧ್ಯಮದ ಮೂಲಕ ವ್ಯಕ್ತಪಡಿಸಿದ್ದಾರೆ. ಕಳ್ಳತನ ಮಾಡಬಾರದು, ಕೊಲೆ ಸುಲಿಗೆಗಳಲ್ಲಿ ತೊಡಗಬಾರದು, ಸುಳ್ಳು ಹೇಳಬಾರದು, ಸಿಟ್ಟು ಮಾಡಿಕೊಳ್ಳಬಾರದು, ತನ್ನನ್ನು ಶ್ರೇಷ್ಠ ಎಂದು ಭಾವಿಸಿ ಹೊಗಳಿಕೊಳ್ಳಬಾರದು, ಹುಟ್ಟಿನ ಆಧಾರದ ಮೇಲಾಗಲಿ ಅಥವಾ ಇನ್ನಿತರ
ಕಾರಣಗಳಿಗಾಲಿ ಇತರರ ಕುರಿತು ಅಸಹ್ಯ ಪಟ್ಟುಕೊಳ್ಳಬಾರದು, ತನ್ನೆದುರು ನಿಂತವರನ್ನು ನಿಂದಿಸಬಾರದು, ಇವನ್ಯಾರು ಎನ್ನದೆ ಇವ ನಮ್ಮವನು ಎಂಬ ಒಳಗೊಳ್ಳುವ ನೀತಿ ನಮ್ಮದಾಗಬೇಕು ಎಂಬುದ ವಿಶ್ವ ಸಂಸ್ಕೃತಿಯ ನಿಯಮ. ಇಂಥ ಉದಾತ್ತ ತತ್ವಗಳನ್ನು ಪ್ರತಿಪಾದಿಸಿದ ಬಸವಣ್ಣನವರ ನಮ್ಮ ನಿಜವಾದ ವಿಶ್ವಗುರುಗಳು, ನಾಡಿನ ಸಾಂಸ್ಕೃತಿಕ ನಾಯಕರು ಎಂದಿದ್ದಾರೆ.

ಆದ್ದರಿಂದ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿರುವ, ಸರ್ಕಾರವು ಅನುಮೋದಿಸಿರುವ ಬಸವಣ್ಣನವರ ಭಾವಚಿತ್ರಗಳಲ್ಲಿ “ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ” ಎಂದು ಮುದ್ರಿಸಿ ಅಳವಡಿಸಲು ಕ್ರಮ ವಹಿಸುವುದು. ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿ ಬಸವಣ್ಣನವರ ಚಿಂತನೆಗಳು ಹಾಗೂ ಸರ್ಕಾರದ ಉದ್ದೇಶಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸೂಕ್ತ ನಿರ್ದೇಶನಗಳನ್ನು ಹೊರಡಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

BREAKING: ‘ಶ್ರೀಲಂಕಾ, ಮಾರಿಷಸ್’ನಲ್ಲಿ ‘UPI ಪಾವತಿ ಸೇವೆ’ ಆರಂಭಿಸಿದ ‘ಭಾರತ’ | UPI Services Launched In Sri Lanka, Mauritius

ಲೋಕಸಭೆ ಚುನಾವಣೆ: ಐದು ವರ್ಷಗಳಲ್ಲಿ ಮತದಾರರ ‘ಲಿಂಗ ಅನುಪಾತ’ 928 ರಿಂದ 948 ಕ್ಕೆ ಏರಿಕೆ

Share.
Exit mobile version