Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/11/2025 5:11 PM
Victim Soni Himmat Rathod and accused Sajan Baraiya.

ಸೀರೆಗಾಗಿ ಜಗಳ, ಮದುವೆಗೆ ಒಂದು ಗಂಟೆ ಮೊದಲು ವಧುವನ್ನು ಕೊಂದ ವರ…!

16/11/2025 4:59 PM

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ವ್ಯಕ್ತಿಯೊಬ್ಬನ ಹಕ್ಕು : ಹೈಕೋರ್ಟ್
KARNATAKA

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ವ್ಯಕ್ತಿಯೊಬ್ಬನ ಹಕ್ಕು : ಹೈಕೋರ್ಟ್

By kannadanewsnow0506/07/2024 7:36 AM

ಬೆಂಗಳೂರು : ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ವ್ಯಕ್ತಿಯ ಬಹುಮುಖ್ಯ ಹಕ್ಕಾಗಿದೆ. ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕ ಹಾಗೂ ಸರ್ಕಾರದ ಆಸ್ತಿಪಾಸ್ತಿಗಳಿಗೆ ಹಾನಿಯಾಗುವುದು ಸಹಜ ಹಾಗಂತ ಪ್ರತಿಭಟನೆಗಳನ್ನು ಪ್ರಯೋಗ ಶಾಲೆಯಲ್ಲಿ ನಡೆಸಲು ಆಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿತು.

ಜೂನ್ 20ರಂದು ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಈ ವಿಚಾರಣೆ ನಡೆಸಿದ ಕೋರ್ಟ್ ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆ‌ರ್ ರದ್ದುಪಡಿಸಬೇಕು’ ಎಂದು ಕೋರಿ ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ಅರ್ಜಿದಾರರು ಕಾನೂನು ಪರಿಪಾಲಿಸುವ ನಾಗರಿಕರಾಗಿದ್ದಾರೆ. ಅನುಮತಿ ಪಡೆದೇ ಪ್ರತಿಭಟನೆ ನಡೆಸಿದ್ದಾರೆ. ಆದರೆ, ರಾಜಕೀಯ ಪ್ರೇರಿತವಾಗಿ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ದೂರು ದಾಖಲಿಸಲಾಗಿದ್ದು, ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿದರು.

ಇದನ್ನು ಆಕ್ಷೇಪಿಸಿದ ಎಸ್. ಪಿ ಪಿ ಬಿ.ಎ.ಬೆಳ್ಳಿಯಪ್ಪ, ಪ್ರತಿಭಟನೆಯನ್ನು ಶಾಂತಿಯಿಂದ ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಪ್ರತಿಭಟನೆ ನಡೆಸುವ ನೆಪದಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯಲ್ಲಿನ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದಾರೆ. ಇದರಿಂದ ಶ್ರೀಸಾಮಾನ್ಯರಿಗೆ ತೊಂದರೆಯಾಗಿದೆ. ಆದ್ದರಿಂದ, ಪ್ರಕರಣ ರದ್ದುಪಡಿಸಬಾರದು ಎಂದು ಮನವಿ ಮಾಡಿದರು.

ಇದನ್ನು ಒಪ್ಪದ ನ್ಯಾಯಪೀಠ, ‘ಮಹಜರು ವರದಿಯಲ್ಲಿ ಸಾರ್ವಜನಿಕ ಆಸ್ತಿಯ ಹಾನಿಯ ಕುರಿತಂತೆ ಉಲ್ಲೇಖವಿಲ್ಲ. ಈ ರೀತಿಯ ಸಣ್ಣ- ಪುಟ್ಟ ವಿಷಯಗಳಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಲಾಗುವುದಿಲ್ಲ’ ಎಂದು ಹೇಳಿತು. ಅಂತೆಯೇ, ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ನ್ಯಾಯಿಕ ಪ್ರಕ್ರಿಯೆ ಹಾಗೂ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ಪ್ರಕರಣವೇನು?

ಪೆಟ್ರೋಲ್‌-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ 2024ರ ಜೂನ್ 20ರಂದು ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದರು. ‘ಈ ಪ್ರತಿಭಟನೆಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

Share. Facebook Twitter LinkedIn WhatsApp Email

Related Posts

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/11/2025 5:11 PM2 Mins Read

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM3 Mins Read

BIG NEWS: RSS ತೆರಿಗೆ ವಂಚನೆ, KKRDB ಲೂಟಿ ಬಗ್ಗೆ ದಾಖಲೆ ಸಹಿತ ಬಿಚ್ಚಿಡುವೆ: ಸಚಿವ ಪ್ರಿಯಾಂಕ್ ಖರ್ಗೆ

16/11/2025 4:52 PM1 Min Read
Recent News

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/11/2025 5:11 PM
Victim Soni Himmat Rathod and accused Sajan Baraiya.

ಸೀರೆಗಾಗಿ ಜಗಳ, ಮದುವೆಗೆ ಒಂದು ಗಂಟೆ ಮೊದಲು ವಧುವನ್ನು ಕೊಂದ ವರ…!

16/11/2025 4:59 PM

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM

BIG NEWS: RSS ತೆರಿಗೆ ವಂಚನೆ, KKRDB ಲೂಟಿ ಬಗ್ಗೆ ದಾಖಲೆ ಸಹಿತ ಬಿಚ್ಚಿಡುವೆ: ಸಚಿವ ಪ್ರಿಯಾಂಕ್ ಖರ್ಗೆ

16/11/2025 4:52 PM
State News
KARNATAKA

BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0916/11/2025 5:11 PM KARNATAKA 2 Mins Read

ಬೆಂಗಳೂರು: ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಸಾವಾಗುತ್ತಿರುವ…

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿ.ಕೆ.ಸುರೇಶ್

16/11/2025 4:56 PM

BIG NEWS: RSS ತೆರಿಗೆ ವಂಚನೆ, KKRDB ಲೂಟಿ ಬಗ್ಗೆ ದಾಖಲೆ ಸಹಿತ ಬಿಚ್ಚಿಡುವೆ: ಸಚಿವ ಪ್ರಿಯಾಂಕ್ ಖರ್ಗೆ

16/11/2025 4:52 PM

ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ: ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ

16/11/2025 4:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.