Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
How-To-Pamper-Your-Hair-With-A-Hot-Oil-Massage-To-Prevent-Hair-Loss

Winter Hair Care Tips: ತಲೆ ಕೂದಲು ರಕ್ಷಣೆ: ಚಳಿಗಾಲದಲ್ಲಿ ಕೂದಲು ಉದುರದಂತೆ ಕಾಪಾಡುವ ಬೆಸ್ಟ್ Essential Oils

22/11/2025 2:00 PM

ಟ್ರಾವಿಸ್ ಸ್ಕಾಟ್ ಮುಂಬೈ ಸಂಗೀತ ಕಚೇರಿಯಲ್ಲಿ ಗೊಂದಲ: 18 ಲಕ್ಷ ಮೌಲ್ಯದ ಚಿನ್ನ ಕಳ್ಳತನ

22/11/2025 1:53 PM
Explosion in a car near the Red Fort in Delhi

5 ಲಕ್ಷಕ್ಕೆ ಖರೀದಿಸಿದ ಎಕೆ-47, ಡೀಪ್ ಫ್ರೀಜರ್ ನಲ್ಲಿ ಸ್ಫೋಟಕಗಳನ್ನು ಸಂಗ್ರಹ| ದೆಹಲಿ ಬಾಂಬ್ ಸ್ಫೋಟದ ಮಾಹಿತಿ ಬಹಿರಂಗ

22/11/2025 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0912/02/2025 9:11 PM

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ. ಅದಕ್ಕಾಗಿಯೇ ಇರುವಂತ ಸಮಿತಿಯಾಗಿದೆ. ಬಿಜೆಪಿಯರು ಸುಖಾ ಸುಮ್ಮನೇ ನಮ್ಮ ಕಡೆಗೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಇಂದು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಯಾರು ಬೇಕಾದರೂ ಸಂಸತ್ತಿನಲ್ಲಿ ಮಾತನಾಡಲಿ, ಇಲ್ಲಿ ಪ್ರತಿಭಟನೆ ಮಾಡಲಿ, ಗಲಾಟೆ ಮಾಡಲಿ. ಆದರೆ ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ. ದರ ಏರಿಕೆ ತೀರ್ಮಾನ ಅವರು ಮಾಡುತ್ತಾರೆ” ಎಂದರು.

“ಡಬಲ್ ಡೆಕ್ಕರ್ ಸೇರಿದಂತೆ ಬೆಂಗಳೂರಿನ ಮೆಟ್ರೋವನ್ನು ಇನ್ನೂ ಹೆಚ್ಚಿನ ಭಾಗಕ್ಕೆ ವಿಸ್ತರಣೆ ಮಾಡಬೇಕಿದೆ. ಮೆಟ್ರೋ ಜೊತೆಗೆ ಮೇಲ್ಸೆತುವೆ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಶೇ 50 ರಷ್ಟು ವೆಚ್ಚವನ್ನು ಭರಿಸುವುದಾಗಿ ನಾವು ತಿಳಿಸಿದ್ದೇವೆ. ಏಕೆಂದರೆ ರಸ್ತೆ ವಿಸ್ತರಣೆ ಮಾಡಬೇಕು ಎಂದರೆ ಭೂಸ್ವಾಧಿನಕ್ಕೆ ಹೆಚ್ಚು ಖರ್ಚು ಆಗುತ್ತದೆ. ಕಟ್ಟಡಗಳನ್ನು ಒಡೆದುಹಾಕಿ ರಸ್ತೆ ವಿಸ್ತರಿಸುವುದು ಹೆಚ್ಚು ತ್ರಾಸದಾಯಕ. ಇದನ್ನು ಪ್ರಾಯೋಗಿಕವಾಗಿ ರಾಗಿಗುಡ್ಡ ಜಂಕ್ಷನ್ ಬಳಿ ಮಾಡಿದ್ದೇವೆ” ಎಂದು ತಿಳಿಸಿದರು.

“ನೀರಿನ ದರ ಏರಿಕೆ ಮಾಡಿ 14 ವರ್ಷವಾಗಿದೆ. ಅದಕ್ಕೆ ಲೀಟರ್ ಗೆ 1 ಪೈಸೆಯಷ್ಟು ದರ ಏರಿಕೆ ಪ್ರಸ್ತಾವನೆ ನನ್ನ ಮುಂದೆ ಬಂದಿದೆ. ಪರಿಶೀಲನೆ ಮಾಡಿ ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.

ಸಣ್ಣ ಕೈಗಾರಿಕೆ, ಉದ್ಯಮಗಳಿಗೂ ಪ್ರೋತ್ಸಾಹ

ಇನ್ವೆಸ್ಟ್ ಕರ್ನಾಟಕ 2025 ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸ್ಥಳೀಯವಾಗಿ ರೊಟ್ಟಿ, ಖಾರದ ಪುಡಿ ಸೇರಿದಂತೆ ಆಹಾರ ಉತ್ಪನ್ನಗಳು, ಇತರೇ ಸಣ್ಣ ಕೈಗಾರಿಕೆಳಿಗೆ ಆರ್ಥಿಕವಾಗಿ ಶಕ್ತಿ ನೀಡುವುದು ನಮ್ಮ ಜವಾಬ್ದಾರಿ. ಸರ್ಕಾರ ನೀಡಿದ ಸಹಾಯಗಳನ್ನು ದುರುಪಯೋಗ ಮಾಡಿಕೊಳ್ಳಬಾರದು ಅಷ್ಟೇ. ಅವರು ಬದುಕಬೇಕು ರಾಜ್ಯವೂ ಬದುಕಬೇಕು” ಎಂದರು.

ದೊಡ್ಡ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಿದಂತೆ ಸಣ್ಣ ಪ್ರಮಾಣದ ಗೃಹ ಕೈಗಾರಿಕೆಗಳಿಗೂ ಪ್ರೋತ್ಸಾಹ ನೀಡಬೇಕಿರುವುದು ಸರ್ಕಾರದ ಕರ್ತವ್ಯ. ಇದರಿಂದ ಪ್ರತಿ ಊರಿನಲ್ಲೂ 50 ರಿಂದ 100 ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

22/11/2025 1:43 PM1 Min Read

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

22/11/2025 1:27 PM1 Min Read

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM1 Min Read
Recent News
How-To-Pamper-Your-Hair-With-A-Hot-Oil-Massage-To-Prevent-Hair-Loss

Winter Hair Care Tips: ತಲೆ ಕೂದಲು ರಕ್ಷಣೆ: ಚಳಿಗಾಲದಲ್ಲಿ ಕೂದಲು ಉದುರದಂತೆ ಕಾಪಾಡುವ ಬೆಸ್ಟ್ Essential Oils

22/11/2025 2:00 PM

ಟ್ರಾವಿಸ್ ಸ್ಕಾಟ್ ಮುಂಬೈ ಸಂಗೀತ ಕಚೇರಿಯಲ್ಲಿ ಗೊಂದಲ: 18 ಲಕ್ಷ ಮೌಲ್ಯದ ಚಿನ್ನ ಕಳ್ಳತನ

22/11/2025 1:53 PM
Explosion in a car near the Red Fort in Delhi

5 ಲಕ್ಷಕ್ಕೆ ಖರೀದಿಸಿದ ಎಕೆ-47, ಡೀಪ್ ಫ್ರೀಜರ್ ನಲ್ಲಿ ಸ್ಫೋಟಕಗಳನ್ನು ಸಂಗ್ರಹ| ದೆಹಲಿ ಬಾಂಬ್ ಸ್ಫೋಟದ ಮಾಹಿತಿ ಬಹಿರಂಗ

22/11/2025 1:49 PM

ALERT : ಧೂಮಪಾನ ಮಾಡದವರಲ್ಲೂ ಹೆಚ್ಚುತ್ತಿವೆ ‘ಶ್ವಾಸಕೋಶದ ಕ್ಯಾನ್ಸರ್’ ಪ್ರಕರಣಗಳು.!

22/11/2025 1:47 PM
State News
KARNATAKA

GOOD NEWS : ರಾಜ್ಯದ `ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ಫೆಬ್ರವರಿಗೆ ‘ಇಂದಿರಾ ಕಿಟ್’ ಯೋಜನೆ ಜಾರಿ.!

By kannadanewsnow5722/11/2025 1:43 PM KARNATAKA 1 Min Read

ನವದೆಹಲಿ : ರಾಜ್ಯದ ಪಡಿತರ ಚೀಟಿದಾರರಿಗೆ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್…

ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್

22/11/2025 1:27 PM

BREAKING : ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್ : ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದ ಕೋರ್ಟ್

22/11/2025 1:24 PM

ವಿಕ್ರಾಂತ ಭಾರತ ಪತ್ರಿಕೆ ಸಂಪಾದಕ ಎಂ.ಸಿ. ಗೋಂದಿ ಅವರ ನಿಧನಕ್ಕೆ ‘KUWJ’ ಸಂತಾಪ

22/11/2025 1:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.