Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಷ್ಯಾ-ಉಕ್ರೇನ್ ನಡುವೆ 3 ದಿನಗಳ ಕದನ ವಿರಾಮ ಘೋಷಿಸಿದ ಅಮೇರಿಕಾ ಅಧ್ಯಕ್ಷ ಟ್ರಂಪ್ | Russia -Ukraine war

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

BIG NEWS : ವಿಚ್ಛೇದನ ಕೌನ್ಸೆಲಿಂಗ್‌ ಗೆ ವಿಡಿಯೋ ಕಾನ್ಫರೆನ್ಸ್ ರದ್ದು : ಹೈಕೋರ್ಟ್ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
KARNATAKA

ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow09

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ. ಅದಕ್ಕಾಗಿಯೇ ಇರುವಂತ ಸಮಿತಿಯಾಗಿದೆ. ಬಿಜೆಪಿಯರು ಸುಖಾ ಸುಮ್ಮನೇ ನಮ್ಮ ಕಡೆಗೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಇಂದು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಯಾರು ಬೇಕಾದರೂ ಸಂಸತ್ತಿನಲ್ಲಿ ಮಾತನಾಡಲಿ, ಇಲ್ಲಿ ಪ್ರತಿಭಟನೆ ಮಾಡಲಿ, ಗಲಾಟೆ ಮಾಡಲಿ. ಆದರೆ ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ. ದರ ಏರಿಕೆ ತೀರ್ಮಾನ ಅವರು ಮಾಡುತ್ತಾರೆ” ಎಂದರು.

“ಡಬಲ್ ಡೆಕ್ಕರ್ ಸೇರಿದಂತೆ ಬೆಂಗಳೂರಿನ ಮೆಟ್ರೋವನ್ನು ಇನ್ನೂ ಹೆಚ್ಚಿನ ಭಾಗಕ್ಕೆ ವಿಸ್ತರಣೆ ಮಾಡಬೇಕಿದೆ. ಮೆಟ್ರೋ ಜೊತೆಗೆ ಮೇಲ್ಸೆತುವೆ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಶೇ 50 ರಷ್ಟು ವೆಚ್ಚವನ್ನು ಭರಿಸುವುದಾಗಿ ನಾವು ತಿಳಿಸಿದ್ದೇವೆ. ಏಕೆಂದರೆ ರಸ್ತೆ ವಿಸ್ತರಣೆ ಮಾಡಬೇಕು ಎಂದರೆ ಭೂಸ್ವಾಧಿನಕ್ಕೆ ಹೆಚ್ಚು ಖರ್ಚು ಆಗುತ್ತದೆ. ಕಟ್ಟಡಗಳನ್ನು ಒಡೆದುಹಾಕಿ ರಸ್ತೆ ವಿಸ್ತರಿಸುವುದು ಹೆಚ್ಚು ತ್ರಾಸದಾಯಕ. ಇದನ್ನು ಪ್ರಾಯೋಗಿಕವಾಗಿ ರಾಗಿಗುಡ್ಡ ಜಂಕ್ಷನ್ ಬಳಿ ಮಾಡಿದ್ದೇವೆ” ಎಂದು ತಿಳಿಸಿದರು.

“ನೀರಿನ ದರ ಏರಿಕೆ ಮಾಡಿ 14 ವರ್ಷವಾಗಿದೆ. ಅದಕ್ಕೆ ಲೀಟರ್ ಗೆ 1 ಪೈಸೆಯಷ್ಟು ದರ ಏರಿಕೆ ಪ್ರಸ್ತಾವನೆ ನನ್ನ ಮುಂದೆ ಬಂದಿದೆ. ಪರಿಶೀಲನೆ ಮಾಡಿ ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.

ಸಣ್ಣ ಕೈಗಾರಿಕೆ, ಉದ್ಯಮಗಳಿಗೂ ಪ್ರೋತ್ಸಾಹ

ಇನ್ವೆಸ್ಟ್ ಕರ್ನಾಟಕ 2025 ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಸ್ಥಳೀಯವಾಗಿ ರೊಟ್ಟಿ, ಖಾರದ ಪುಡಿ ಸೇರಿದಂತೆ ಆಹಾರ ಉತ್ಪನ್ನಗಳು, ಇತರೇ ಸಣ್ಣ ಕೈಗಾರಿಕೆಳಿಗೆ ಆರ್ಥಿಕವಾಗಿ ಶಕ್ತಿ ನೀಡುವುದು ನಮ್ಮ ಜವಾಬ್ದಾರಿ. ಸರ್ಕಾರ ನೀಡಿದ ಸಹಾಯಗಳನ್ನು ದುರುಪಯೋಗ ಮಾಡಿಕೊಳ್ಳಬಾರದು ಅಷ್ಟೇ. ಅವರು ಬದುಕಬೇಕು ರಾಜ್ಯವೂ ಬದುಕಬೇಕು” ಎಂದರು.

ದೊಡ್ಡ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡಿದಂತೆ ಸಣ್ಣ ಪ್ರಮಾಣದ ಗೃಹ ಕೈಗಾರಿಕೆಗಳಿಗೂ ಪ್ರೋತ್ಸಾಹ ನೀಡಬೇಕಿರುವುದು ಸರ್ಕಾರದ ಕರ್ತವ್ಯ. ಇದರಿಂದ ಪ್ರತಿ ಊರಿನಲ್ಲೂ 50 ರಿಂದ 100 ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

2 Mins Read
ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]

ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು

3 Mins Read

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದಾಗಲೇ ಘೋರ ದುರಂತ: ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

3 Mins Read
Recent News

ರಷ್ಯಾ-ಉಕ್ರೇನ್ ನಡುವೆ 3 ದಿನಗಳ ಕದನ ವಿರಾಮ ಘೋಷಿಸಿದ ಅಮೇರಿಕಾ ಅಧ್ಯಕ್ಷ ಟ್ರಂಪ್ | Russia -Ukraine war

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

BIG NEWS : ವಿಚ್ಛೇದನ ಕೌನ್ಸೆಲಿಂಗ್‌ ಗೆ ವಿಡಿಯೋ ಕಾನ್ಫರೆನ್ಸ್ ರದ್ದು : ಹೈಕೋರ್ಟ್ ಮಹತ್ವದ ಆದೇಶ

ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]

ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು

State News
KARNATAKA

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

By kannadanewsnow07 KARNATAKA 2 Mins Read

ಶಿವಮೊಗ್ಗ: ಉದ್ಯೋಗಾಕಾಂಕ್ಷಿಗಳಿಗೆ ಜಿಲ್ಲಾಡಳಿತ ಮತ್ತು ಉದ್ಯೋಗ ವಿನಿಮಯ ಕಚೇರಿಯು ಒಂದು ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡುತ್ತಿದೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ…

ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]

ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದಾಗಲೇ ಘೋರ ದುರಂತ: ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಪಾರ್ಟನರ್ ಶಿಪ್ ನಲ್ಲಿ ಬಿಸಿನೆಸ್ ಮಾಡಬೇಕೆ? ಯಶಸ್ವಿ ಪಾಲುದಾರಿಕೆಗೆ ಇಲ್ಲಿವೆ ಕೆಲವು ಮುಖ್ಯ ಸಲಹೆಗಳು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.