Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ತಂದೆ ಇಚ್ಛೆ ವಿರೋಧಿಸಿ ಮದುವೆಯಾದ ಮಗಳಿಗೆ ಆಸ್ತಿಯಲ್ಲಿ ಪಾಲು ಸಿಗಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

24/12/2025 6:37 AM

BIG NEWS : ರಾಜ್ಯದ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : 2026 ನೇ ಸಾಲಿನ ‘ವರ್ಗಾವಣೆ ವೇಳಾಪಟ್ಟಿ’ ಪ್ರಕಟ

24/12/2025 6:36 AM

ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘KSRTC ನೌಕರ’ರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

24/12/2025 6:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ
KARNATAKA

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: MLC ಛಲವಾದಿ ನಾರಾಯಣಸ್ವಾಮಿ

By kannadanewsnow0927/10/2025 8:19 PM

ಬೆಂಗಳೂರು: ಸುರಂಗ ಮಾರ್ಗ ರಚನೆ ಮೂಲಕ ಬೆಂಗಳೂರಿಗೆ ಆಪತ್ತು ಎದುರಾಗಲಿದೆ ಎಂಬ ವರದಿಗಳಿವೆ. ಇಷ್ಟಿದ್ದರೂ ಡಿ.ಕೆ.ಶಿವಕುಮಾರ್ ಅವರು ಇದನ್ನು ಮಾಡಲು ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಈ ಸುರಂಗ ಯೋಜನೆ ವಿರುದ್ಧ ಈಗಾಗಲೇ ಹಲವು ಸಂಸ್ಥೆಗಳು- ಪರಿಸರವಾದಿಗಳು ಧ್ವನಿ ಎತ್ತಿದ್ದಾರೆ. ಅದೇನು ಜನೋಪಯೋಗಿ ಎಂದು ನನಗೆ ಅನಿಸುತ್ತಿಲ್ಲ; ಟನೆಲ್ ರಸ್ತೆಗೆ 300- 400 ರೂ. ಟೋಲ್ ಕೊಡಬೇಕಾಗುತ್ತದೆ. ಹಣ ಕಟ್ಟಿಸಿಕೊಳ್ಳದೇ ಮಾಡುವ ಕೆಲಸ ಇದ್ದರೆ ಮಾಡಿ ಎಂದು ಆಗ್ರಹಿಸಿದರು. ಭೂಮಿ ಮೇಲೆ ರಸ್ತೆ ಮಾಡುವುದು ಸೂಕ್ತವಿದ್ದು, ಈ ಕುರಿತು ಗಮನಿಸಲಿ ಎಂದು ಒತ್ತಾಯಿಸಿದರು.

ಬೆಂಗಳೂರು ಬೆಳೆಸುವುದನ್ನು ನಿಲ್ಲಿಸಿ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಬೆಳೆಸಿ ಎಂದು ತಿಳಿಸಿದರು. ಅಲ್ಲಿ ಜನರು ನಿಲ್ಲುವಂತೆ ಮಾಡಿ. ಗುಲ್ಬರ್ಗದ ಸ್ಥಿತಿ ಏನಾಗಿದೆ? ತಲಾದಾಯದ ವಿಷಯದಲ್ಲಿ ಅದು ಅತ್ಯಂತ ಹಿಂದುಳಿದಿದೆ ಎಂದು ನುಡಿದರು. ಬಿಜಾಪುರದಲ್ಲಿ ಕೈಗಾರಿಕೆ ಸ್ಥಾಪಿಸಿ ಎಂದು ಎಂ.ಬಿ.ಪಾಟೀಲರಿಗೆ ಮನವಿ ಮಾಡಿದರು.

ವಿವೇಕದ ಪ್ರಶ್ನೆ ಇದ್ದಂತಿಲ್ಲ..

ಪ್ರಿಯಾಂಕ್ ಖರ್ಗೆ ಬಳಿ ವಿವೇಕದ ಪ್ರಶ್ನೆಗಳಿವೆ ಎಂದು ಅನಿಸುತ್ತಿಲ್ಲ; ಆದ್ದರಿಂದ ಅವರ ಪ್ರಶ್ನೆಗಳಿಗೆ ನಾನು ಉತ್ತರ ಕೊಡುವುದಿಲ್ಲ ಎಂದರು. ಆರೆಸ್ಸೆಸ್‍ಗೆ ದೇಣಿಗೆ ಎಲ್ಲಿಂದ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಬಗ್ಗೆ ಪತ್ರಕರ್ತರು ಗಮನ ಸೆಳೆದರು. ಇದನ್ನು ಇಲಾಖೆ ಪ್ರಶ್ನಿಸಲಿ. ಇ.ಡಿ, ಆದಾಯ ತೆರಿಗೆ ಇಲಾಖೆಯವರು ಕೇಳಲಿ, ಎಲ್ಲೋ ಕುಳಿತು ಕೇಳುವವರಿಗೆ ಅವರು ಉತ್ತರ ಕೊಡುತ್ತ ಕೂರುತ್ತಾರಾ ಎಂದು ಕೇಳಿದರು. ಅವರು ಆರೆಸ್ಸೆಸ್ ಕಚೇರಿಗೆ ಹೋಗಿ ಪ್ರಶ್ನಿಸುವುದು ಒಳ್ಳೆಯದು ಎಂದರು.

ಆರೆಸ್ಸೆಸ್ ನೋಂದಣಿ ಕುರಿತ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ನೋಂದಣಿ ಆಗಬೇಕೆಂದು ಕಾನೂನಿನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಇವರು ಗ್ರಾಮೀಣಾಭಿವೃದ್ಧಿ ಸಚಿವರು; ಅಲ್ಲಿ ಕೆಲಸ ಮಾಡಲಾರದೇ ಜನರನ್ನು ದಾರಿ ತಪ್ಪಿಸಲು ಈ ರೀತಿ ಅನ್ಯ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿಯವರು 40-50 ವರ್ಷ ಈ ರಾಜ್ಯ ಆಳಿಲ್ಲ

ಬಿಜೆಪಿಯವರು 40-50 ವರ್ಷ ಈ ರಾಜ್ಯ ಆಳಿಲ್ಲ; ಅವರೇ 63 ವರ್ಷ ಈ ರಾಜ್ಯವನ್ನು ಆಳಿದ್ದಾರೆ. ಕೆಂಪೇಗೌಡರು 4 ಸ್ತೂಪಗಳನ್ನು ನಿರ್ಮಿಸಿ ಅಲ್ಲಿನವರೆಗೆ ಬೆಂಗಳೂರನ್ನು ವಿಸ್ತರಿಸಲು ಯೋಜಿಸಿದ್ದರು. ಅದಕ್ಕಿಂತ ಹೆಚ್ಚಾದರೆ ಬೆಂಗಳೂರಿಗೆ ಆಪತ್ತಿದೆ ಎಂಬ ಆಶಯ ಅವರಲ್ಲಿತ್ತು. ಈಗ ದೇವನಹಳ್ಳಿ, ಆನೇಕಲ್, ಹೊಸಕೋಟೆ ಬೆಂಗಳೂರೇ ಆಗಿವೆ. ಸ್ವಲ್ಪ ದಿನ ಹೋದರೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಎಲ್ಲ ತಗೊಂಡು ಬಿಡುತ್ತಾರೆ ಎಂದು ಆಕ್ಷೇಪಿಸಿದರು. ಮಾಲಿನ್ಯ, ಸಂಚಾರದ ಒತ್ತಡವನ್ನು ನಾವು ಇವತ್ತೇ ಯೋಚಿಸಬೇಕಿದೆ ಎಂದು ಸಲಹೆ ನೀಡಿದರು.

ಸಂಸದರದ್ದು ದುಡ್ಡು ತರುವ ಕೆಲಸ ಅಲ್ಲ

ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಸಂಸದರದ್ದು ದುಡ್ಡು ತರುವ ಕೆಲಸ ಅಲ್ಲ; ಅವರೇನು ಏಜೆಂಟರೇ? ಅವರು ರಿಯಲ್ ಎಸ್ಟೇಟ್ ಮಾಡುತ್ತಾರಾ? ನೀವು ಮೊದಲು ರಾಜೀನಾಮೆ ಕೊಡಿ; ಆಮೇಲೆ ಅವರು ಹಣ ತರುತ್ತಾರೆ ಎಂದು ಸವಾಲು ಹಾಕಿದರು. ಕುಣಿಯಲಾರದವರಿಗೆ ನೆಲ ಡೊಂಕು ಎಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದರು. ಕುಮಾರಸ್ವಾಮಿಯವರು ಅವರಿಗೆ ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಗಾಳಿಯಲ್ಲಿ ಗುಂಡು ಹೊಡೆಯುತ್ತ ಕುಳಿತ ನಿಮ್ಮನ್ನು ಈ ರಾಜ್ಯದ ಜನರು ಇನ್ನೂ ಎರಡೂವರೆ ವರ್ಷ ಹೇಗೆ ಸಹಿಸಿಕೊಳ್ಳಬೇಕು ಎಂದು ಪ್ರಶ್ನಿಸಿದರು. ಅಭಿವೃದ್ಧಿ ಮಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ಸಿನೊಳಗೇ ಭಯೋತ್ಪಾದನೆ..

ಹಲವು ತಿಂಗಳಿಂದ ಮಾತೆತ್ತಿದರೆ ಸಂಪುಟ ಪುನಾರಚನೆ ವಿಷಯ ತರುತ್ತಾರೆ. ಗುಜರಾತ್‍ನವರ ಬಳಿ ಪಾಠ ಹೇಳಿಸಿಕೊಂಡು ಬನ್ನಿ. ಬೆಳಿಗ್ಗೆ ರಾಜೀನಾಮೆ ಕೊಟ್ಟರು. ಮರುದಿನ ಹೊಸ ಸರಕಾರವೇ ಬಂತು ಎಂದು ಗಮನ ಸೆಳೆದರು. ಸಚಿವಸಂಪುಟದ ವಿಷಯ ಮುಂದಿಟ್ಟು ಕಾಂಗ್ರೆಸ್ಸಿನೊಳಗೇ ಭಯೋತ್ಪಾದನೆ ನಡೆದಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ: ಆರ್.ಅಶೋಕ್

ಸಾರ್ವಜನಿಕರೇ ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : 2026 ನೇ ಸಾಲಿನ ‘ವರ್ಗಾವಣೆ ವೇಳಾಪಟ್ಟಿ’ ಪ್ರಕಟ

24/12/2025 6:36 AM1 Min Read

ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘KSRTC ನೌಕರ’ರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

24/12/2025 6:34 AM1 Min Read

BIG NEWS : ರಾಜ್ಯದ ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ಜ.1ರಿಂದ ‘ಋತುಚಕ್ರ ರಜೆ’ : ‘KSRTC’ ಅಧಿಕೃತ ಆದೇಶ

24/12/2025 6:31 AM1 Min Read
Recent News

BIG NEWS : ತಂದೆ ಇಚ್ಛೆ ವಿರೋಧಿಸಿ ಮದುವೆಯಾದ ಮಗಳಿಗೆ ಆಸ್ತಿಯಲ್ಲಿ ಪಾಲು ಸಿಗಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

24/12/2025 6:37 AM

BIG NEWS : ರಾಜ್ಯದ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : 2026 ನೇ ಸಾಲಿನ ‘ವರ್ಗಾವಣೆ ವೇಳಾಪಟ್ಟಿ’ ಪ್ರಕಟ

24/12/2025 6:36 AM

ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘KSRTC ನೌಕರ’ರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

24/12/2025 6:34 AM

BIG NEWS : ರಾಜ್ಯದ ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ಜ.1ರಿಂದ ‘ಋತುಚಕ್ರ ರಜೆ’ : ‘KSRTC’ ಅಧಿಕೃತ ಆದೇಶ

24/12/2025 6:31 AM
State News
KARNATAKA

BIG NEWS : ರಾಜ್ಯದ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : 2026 ನೇ ಸಾಲಿನ ‘ವರ್ಗಾವಣೆ ವೇಳಾಪಟ್ಟಿ’ ಪ್ರಕಟ

By kannadanewsnow5724/12/2025 6:36 AM KARNATAKA 1 Min Read

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಈ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು, 2026ನೇ ಸಾಲಿನ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಲಾಗಿದೆ.…

ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದ ‘KSRTC ನೌಕರ’ರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

24/12/2025 6:34 AM

BIG NEWS : ರಾಜ್ಯದ ‘ಸಾರಿಗೆ ಇಲಾಖೆ’ಯ ಮಹಿಳಾ ನೌಕರರಿಗೂ ಜ.1ರಿಂದ ‘ಋತುಚಕ್ರ ರಜೆ’ : ‘KSRTC’ ಅಧಿಕೃತ ಆದೇಶ

24/12/2025 6:31 AM

BIG NEWS : ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 21 ದಿನದೊಳಗೆ ಉಚಿತ `ಜನನ-ಮರಣ ಪ್ರಮಾಣ ಪತ್ರ’ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

24/12/2025 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.