ಬೆಂಗಳೂರು: ರೇಣುಕಸ್ವಾಮಿ ಕೊಲೆಗೆ ಬಳಕೆ ಮಾಡಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ರಾಡ್, ಮಾರಕಾಸ್ತ್ರಗಳು ಹಾಗೂ ದರ್ಶನ್ ನಂದು ಅಂಥ ಹೇಳಲಾಗಿರುವ ಬೆಲ್ಟ್ ಅನ್ನು ಕೂಡ ಪೊಲೀಸರು ಕೂಡ ವಶಕ್ಕೆ ಪಡೆದುಕೊಂಡಿದ್ದು, ಸದ್ಯ ಅದನ್ನು ಎಫ್ಎಸ್ಐಎಲ್ ಗೆ ಹೆಚ್ಚಿನ ಮಾಹಿತಿಗಾಗಿ ಕಳುಹಿಸಕೊಡಲಾಗಿದೆ ಎನ್ನಲಾಗಿದೆ.
ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಶರವೇಗದಲ್ಲಿ ಸಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 13 ಜನರನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ವಿನಯ್ ಮತ್ತು ಪ್ರದೋಶ್ ಹೆಸರಿನಲ್ಲಿ ನೋಂದಣಿಯಾಗಿರುವ ಕೆಂಪು ಬಣ್ಣದ ಒಂದು ಜೀಪ್, ಕಪ್ಪು ಬಣ್ಣದ ಸ್ಕಾರ್ಪಿಯೋ ಗಾಡಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.