Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿಕಲಚೇತರನಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

05/03/2026 10:40 AM

ಕಚ್ಚಾತೈಲ ದರ ಏರಿಕೆ ನಡುವೆಯೂ ಪೆಟ್ರೋಲ್, ಡೀಸೆಲ್ ದರ ಸ್ಥಿರ: ಭಾರತ ಈ ಹತೋಟಿಯನ್ನು ಎಷ್ಟು ದಿನ ಮುಂದುವರಿಸಬಹುದು?

05/03/2026 10:39 AM

ನೀವು ಜೀವನದಲ್ಲಿ ಹೆಚ್ಚು ನೋವು ಅನುಭವಿಸುತ್ತಿದ್ದೀರಾ? ಹಾಗಾದ್ರೆ ನಿಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ

05/03/2026 10:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿಗೆ ನಟಿ `ಸಿಲ್ಕ್ ಸ್ಮಿತಾ’ ಚಿತ್ರ ರಂಗದಿಂದ ಮರೆಯಾಗಿ 29 ವರ್ಷ: ಇಲ್ಲಿದೆ ಆಕೆಯ ಇಂಟ್ರೆಸ್ಟಿಂಗ್ ಸಿನಿ ಜರ್ನಿ
KARNATAKA

ಇಂದಿಗೆ ನಟಿ `ಸಿಲ್ಕ್ ಸ್ಮಿತಾ’ ಚಿತ್ರ ರಂಗದಿಂದ ಮರೆಯಾಗಿ 29 ವರ್ಷ: ಇಲ್ಲಿದೆ ಆಕೆಯ ಇಂಟ್ರೆಸ್ಟಿಂಗ್ ಸಿನಿ ಜರ್ನಿ

By kannadanewsnow5724/09/2024 8:47 AM

ಅವಳು ಬದುಕಿದ್ದು ಮೂವತ್ತೈದು ವರ್ಷಗಳಷ್ಟೇ ಅಷ್ಟರಲ್ಲಿ ನಮ್ಮ ಮನಸು ಚಿತ್ತವನ್ನು ಕೆಣಕಿ ಕದಲಿಸುವ ಸೆಕ್ಸ್ ಬಾಂಬ್ ಎಂದು ಸಿನಿಮಾ ಮಂದಿಯಿಂದ ನಾಮಾಂಕಿತಗೊಂಡು ಜೀವಂತ ದಂತಕಥೆಯಾಗಿದ್ದ ಸಿಲ್ಕ್ ಸ್ಮಿತಾ ಅಲಿಯಾಸ್ ವಿಜಯಲಕ್ಷ್ಮೀ ನಮ್ಮ ಚಿತ್ರ ರಸಿಕರನ್ನು ಅಗಲಿ ಇಪ್ಪತ್ತೊಂಬತ್ತು ವರ್ಷ ಕಳೆದರೂ ಇನ್ನೂ ಆಕೆಯ ನೋಟ,ಮಾದಕತೆ ನಮ್ಮನ್ನು ಅಗಲಿದಂತಿಲ್ಲ.

ಸಣ್ಣ ವಯಸ್ಸಿನಲ್ಲಿ ಮದುವೆಯ ಜಾಲಕ್ಕೆ ಸಿಲುಕಿ ನೋವುಂಡ ವಿಜಯಲಕ್ಷ್ಮೀ ಅಷ್ಟೇ ಬೇಗ ತೊರೆದು ಜೀವಿಸಬಹುದು ಎಂಬುದನ್ನು ಸಾಧಿಸಿ ತೋರಿಸಿ ಪಿಚ್ಚರ್ ನಿರ್ಮಾಪಕರ ತಿಜೋರಿ ತುಂಬುವ ಲಕ್ಷ್ಮೀಯಾಗಿ ಸಿಲ್ಕ್ ಇನ್ ಸ್ಕ್ರೀನ್ ಆದವಳು.

ನಾಯಕ ನಾಯಕಿಯರಿಗೆ ಸರಿಸಮನಾಗಿ ನಟಿಸಿದ್ದಲ್ಲದೆ ಕ್ಲಬ್ ಡ್ಯಾನ್ಸ್ ನಲ್ಲಿ ಮಿರಿ ಮಿರಿ ಮಿಂಚಿದ ದಕ್ಷಿಣ ಭಾರತದ ಮೊದಲಿಗಳು .ಕೆಲವು ಅತ್ಯುತ್ತಮ ಪಾತ್ರಗಳು ಆಕೆಯ ಪಾಲಿಗೆ ಸೃಷ್ಟಿಯಾಯಿತು ಇನ್ನೂ ಕೆಲವು ಹುಡುಕಿ ಬಂದವು. ತನ್ನ ಲೀಲಾಜಾಲ ಅಭಿನಯ, ಕಣ್ಣೋಟ, ನಯನಾಜೂಕುತನ ಸಿಲ್ಕ್ ಅನ್ನು ಬಹು ಎತ್ತರದ ನಟಿಯನ್ನಾಗಿ ಭಾರತೀಯ ಚಿತ್ರರಂಗ ಗುರುತಿಸಿತು.ಪಡ್ಡೆ ಹುಡುಗರು ಚಿತ್ರ ಮಂದಿರದಲ್ಲೇ ಉಳಿದರು. ಆಕೆ ತೆರೆಯ ಮೇಲೆ ಬರುವಷ್ಟೂ ಹೊತ್ತು ನೋಡುತ್ತಲಿದ್ದ ಹೈಕಳು ಆಮೇಲೆ ಲೋಚ ಗುಟ್ಟುತ್ತಾ ಆಚೆ ನಡೆಯುತ್ತಿದ್ದರು.

ಆಂಧ್ರ ಪ್ರದೇಶದ ದಿಂಡಲೂರು ಮಂಡಲದಲ್ಲಿ ಜನಿಸಿದ ಈ ತಾರೆ ಕೇವಲ ನಾಲ್ಕೈದು ತರಗತಿಯಷ್ಟೇ ಓದಲು ಸಾಧ್ಯವಾಯಿತು. ಬಡತನದ ಬೇಗೆಯಿಂದ ವಿಜಯಲಕ್ಷ್ಮೀಗೆ ಬಾಲ್ಯವಿವಾಹವಾಗಿ ಗಂಡನ ಮನೆಯ ಹಿಂಸೆ ತಡೆಯಲಾರದೇ ಊರು ಬಿಟ್ಟು ಓಡಿದವಳು ಬಂದು ನಿಂತಿದ್ದು ಮತ್ತೊಂದು ಜಗತ್ತಿನಲ್ಲಿ. ಫಿಲಂ ಹಿರೋಯಿನ್ ಗಳಿಗೆ ಟಚಪ್ ಮಾಡುವ ಹುಡುಗಿಯಾಗಿ ಇತರರನ್ನು ನೋಡುತ್ತಲೇ ಅಭಿನಯ ಕಲಿತವಳಿಗೆ ಮೊದಲ ಸಿನಿಮಾ ಮಾಡಲು ಮಲೆಯಾಳಂ ಚಿತ್ರರಂಗದ ನಿರ್ದೇಶಕ ಆಂಟನಿ ಈಸ್ಟಮನ್, ಸ್ಮಿತಾ ಎಂದು ನಾಮಕರಣ ಮಾಡಿ ” ಇನಿಯ ತೇದಿ”ಎಂಬ ಚಿತ್ರ ನಿರ್ದೇಶಿಸಿದ. ಆತನ ಪತ್ನಿ ಈಕೆಯ ಕಥೆ ಕೇಳಿ ಒಬ್ಬ ಅತ್ಯುತ್ತಮ ಡ್ಯಾನ್ಸರ್ ಆಗಿ ರೂಪಿಸಿದಳು.

1979 ರಲ್ಲಿ ತೆರೆಕಂಡ ‘ವಂಡಿ ಚಕ್ರ’ ಚಿತ್ರದಲ್ಲಿ ಮುಖ್ಯ ನಾಯಕಿಯಾಗಿ ಚಿತ್ರ ಬಿಗ್ ಹಿಟ್ ಕೊಟ್ಟಿತು. ಆಮೇಲೆ ಆಕೆ ತಿರುಗಿ ನೋಡುವಂತೆಯೇ ಇರಲಿಲ್ಲ.ಕಮಲ್, ರಜನೀಕಾಂತ್ ಮತ್ತು ಮಣಿರತ್ನರಂತಹ ನಿರ್ದೇಶಕರ ಚಿತ್ರಗಳಲ್ಲಿ ಸಿಲ್ಕ್ ಮಿಂಚಿದಳು. ಆ ಸಾಲಿನಲ್ಲಿ ಬಾಲು ಮಹೇಂದ್ರರ ” ಮೂನ್ರಾ ಪಿರೈ ” ಸೂಪರ್ ಹಿಟ್ ಆಯಿತು.

ಕನ್ನಡದ ಅಆಇಈ ಕಲಿಸಿದ ರವಿಚಂದ್ರನ್ ಅವರ ಹಳ್ಳಿ ಮೇಸ್ಟ್ರು ತಮಿಳಿನಲ್ಲಿ ಭಾಗ್ಯರಾಜ್ ಹಾಗೂ ಊರ್ವಶಿ ಅಭಿನಯದ ಮುಂದಾನೈ ಮುಡಿಚ್ಚು ತಮಿಳು ನಾಡಿನ ಮನೆ ಮನೆ ಮಾತಾಗಿತ್ತು. ಆ ಸಿನಿಮಾದ ಪಡಿಯಚ್ಚಾದರೂ ಕನ್ನಡದಲ್ಲಿ ಹಳ್ಳಿ ಮೇಸ್ಟ್ರು ಮತ್ತು ಮೇಡಂ ಗಲ್ಲಾಪೆಟ್ಟಿಗೆಯಲ್ಲಿ ಗುಲ್ಲೆಬ್ಬಿಸಿದರು. ಕಾಲಕ್ರಮೇಣ ನೇರವಂತಿಕೆ ಆಕೆಯ ವೀಕ್ ನೆಸ್ ಆಗಿಹೋಯಿತು. ನಿಗದಿತ ಸಮಯಕ್ಕೆ
ಶೂಟಿಂಗ್ ಜಾಗಕ್ಕೆ ಹಾಜರಾಗಿ ತನ್ನ ಪಾಲಿನ ಕೆಲಸ ನಿರ್ವಹಣೆ ಮಾಡುತ್ತಿದ್ದರೂ ಬಿಗ್ ಹೀರೋ ಹಿರೋಯಿನ್ ಗಳು ಸಮಯ ಪಾಲನೆ ಮಾಡದ ಕುರಿತು ಹಲವು ಸಲ ಆಕೆಯ ಆಕ್ಷೇಪಣೆಗೆ ಸಕಾರಣಗಳಿದ್ದವು. ಮೋಸ ಮಾಡಿದವರ ಹೆಸರುಗಳನ್ನು ತನ್ನ ನಾಯಿಗಳಿಗೆ
ಇಟ್ಟು ಕರೆಯುತ್ತಿದ್ದಳು. ಎಷ್ಟೋ ನಿರ್ದೇಶಕ ನಿರ್ಮಾಪಕರು ಆಕೆಯ ಈ ನಡೆಗೆ ಬೆದರುತ್ತಿದ್ದರು. ಬಡತನದ ಗಂಜಿ ಉಂಡು ಬೆಳೆದ ಸಿಲ್ಕ್ ತನ್ನ ಪ್ರತಿಭೆಯಿಂದ ಬೆಳ್ಳಿ ತೆರೆ ಬೆಳಗಿ ತಾರೆಯಾದ ಮೇಲೆ ತಾನು ಮಾಡುವ ಊಟಕ್ಕೆ ಇತರರಿಗೆ ಮಾದರಿಯಾದ ರೀತಿಯಲ್ಲಿ ಬಾಯಲ್ಲಿ ನೀರು ಬರಿಸುತ್ತಿದ್ದಳು.

ಒಂದು ದೊಡ್ಡ ಡೈನಿಂಗ್ ಟೇಬಲ್ ಮುಂದೆ ಐಟಂ ಎಂದು ಕರೆಸಿಕೊಳ್ಳುವ ಸಿಲ್ಕ್ ಸ್ಮಿತಾ ಊಟಕ್ಕೆ ಕುಳಿತರೆ ಹತ್ತಾರು ಭಕ್ಷ್ಯ ಭೋಜನಗಳ ಐಟಂಗಳು . ಆಕೆಗೆ ಬೇಕಾದ ಐಸ್ ಕ್ರೀಂ, ಜ್ಯೂಸ್ ಟೇಬಲ್ ತುಂಬಾ ಹರಡಿರುತ್ತಿದ್ದವು. ಆಕೆ ತನಗೆ ಬೇಕಾದಷ್ಟನ್ನೇ ತಿಂದು ಯಾವುದನ್ನು ಎಂಜಲು ಮಾಡದೇ ತನ್ನ ಯೋಗ ಕ್ಷೇಮ ನೋಡಿಕೊಳ್ಳುವವರಿಗೆ ಆ ಫುಡ್ ಮೀಸಲಾಗಿರುತ್ತಿತ್ತು. ಸರಿಯಾಗಿ ಹೇಳಬೇಕೆಂದರೆ ಅಷ್ಟು ಪುಡ್ ಆರ್ಡರ್ ಮಾಡುತ್ತಿದ್ದುದೇ ತನ್ನನು ನಂಬಿದವರಿಗೋಸ್ಕರ !

ವೈಯಕ್ತಿಕ ಜೀವನದಲ್ಲಿ ತುಂಬಾ ನೊಂದು ಬೆಂದು ಹೋಗಿದ್ದ ಸಿಲ್ಕ್ ಸ್ಮಿತಾ ನೇರ ನಡೆ ನುಡಿಯಿದ್ದರೂ ಮನಸು ಮಗುವಿನಂತೆ !ಆಕೆಯನ್ನು ಹಲವರು ಉಪಯೋಗಿಸಿಕೊಂಡರೆ ಮತ್ತೆ ಕೆಲವರು ದುರುಪಯೋಗಿಸಿಕೊಂಡರು. ಕೊನೆಗವಳು ಕುಡಿತದ ನಿಶೆಯಲ್ಲಿ ಬದುಕತೊಡಗಿದಳು. ತಾನು ನಂಬಿದವರಿಂದ ಮೋಸ ಹೋಗಿದ್ದಲ್ಲದೆ ನಿಂದನೆಗೂ ಒಳಗಾಗಿ ನೊಂದು ಹೋದಳು. ಆ ಒಂದು ದಿನ ಲೆಕ್ಕಕ್ಕೆ ಸಿಕ್ಕದಷ್ಟು ಕುಡಿದು ನೇಣಿಗೆ ಶರಣಾದಳೆಂದು ಆಕೆಯ ಪೋಸ್ಟ್ ಮಾರ್ಟಂ ರಿಪೋರ್ಟ್ ಸಾರಿತು.

ಸಿಲ್ಕ್ ಸಾಯುವ ಮೊದಲು ತನ್ನ ಆತ್ಮೀಯ ಗೆಳತಿ ಮತ್ತೊಬ್ಬ ಡ್ಯಾನ್ಸರ್ ಅನುರಾಧಳಿಗೆ ಫೋನ್ ಮಾಡಿ ಗದ್ಗದಿತಳಾಗುತ್ತಾಳೆ.
ಅನುರಾಧಾ ತನ್ನ ಮಗಳನ್ನು ಶಾಲೆಗೆ ಬಿಟ್ಟು ಗೆಳತಿ ಸ್ಮಿತಾಳನ್ನು ಬದುಕಿಸಿಕೊಳ್ಳಲು ಓಡೋಡಿ ಬಂದಳು. ಬಿಕ್ಕಿ ಬಿಕ್ಕಿ ಅಳುತ್ತಾ ನೇತಾಡುತ್ತಿದ್ದ ಗೆಳತಿಯ ಪಾದಕ್ಕೆ ಮುತ್ತಿಕ್ಕಿದಳು ಸೆಕ್ಸ್ ಬಾಂಬ್ ಎಂದು ಮಜಾ ತೆಗೆದುಕೊಂಡ ಸಿನಿಮಾ ರಂಗದ ಮಾಂಸದ ಮುದ್ದೆಯೊಂದು ತನ್ನ ಕೊನೆಯ ಉಸಿರೆಳೆದಿತ್ತು.

ಲೇಖನ: ವೈ.ಜಿ ಅಶೋಕ್ ಕುಮಾರ್, ಹಿರಿಯ ಪತ್ರಕರ್ತರು

It's been 29 years since 'Silk Smitha' disappeared from the film industry: Here's her interesting cinematic journey ಇಂದಿಗೆ ನಟಿ `ಸಿಲ್ಕ್ ಸ್ಮಿತಾ' ಚಿತ್ರ ರಂಗದಿಂದ ಮರೆಯಾಗಿ 29 ವರ್ಷ: ಇಲ್ಲಿದೆ ಆಕೆಯ ಇಂಟ್ರೆಸ್ಟಿಂಗ್ ಸಿನಿ ಜರ್ನಿ
Share. Facebook Twitter LinkedIn WhatsApp Email

Related Posts

ರಾಜ್ಯದ ವಿಕಲಚೇತರನಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

05/03/2026 10:40 AM3 Mins Read

ನೀವು ಜೀವನದಲ್ಲಿ ಹೆಚ್ಚು ನೋವು ಅನುಭವಿಸುತ್ತಿದ್ದೀರಾ? ಹಾಗಾದ್ರೆ ನಿಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ

05/03/2026 10:37 AM3 Mins Read

BIG NEWS : ಮಂಡ್ಯದ PWD ಕಚೇರಿಯ AEE ಮನೆ ಮೇಲೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

05/03/2026 10:31 AM1 Min Read
Recent News

ರಾಜ್ಯದ ವಿಕಲಚೇತರನಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

05/03/2026 10:40 AM

ಕಚ್ಚಾತೈಲ ದರ ಏರಿಕೆ ನಡುವೆಯೂ ಪೆಟ್ರೋಲ್, ಡೀಸೆಲ್ ದರ ಸ್ಥಿರ: ಭಾರತ ಈ ಹತೋಟಿಯನ್ನು ಎಷ್ಟು ದಿನ ಮುಂದುವರಿಸಬಹುದು?

05/03/2026 10:39 AM

ನೀವು ಜೀವನದಲ್ಲಿ ಹೆಚ್ಚು ನೋವು ಅನುಭವಿಸುತ್ತಿದ್ದೀರಾ? ಹಾಗಾದ್ರೆ ನಿಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ

05/03/2026 10:37 AM

BIG NEWS : ಮಂಡ್ಯದ PWD ಕಚೇರಿಯ AEE ಮನೆ ಮೇಲೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

05/03/2026 10:31 AM
State News
KARNATAKA

ರಾಜ್ಯದ ವಿಕಲಚೇತರನಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

By kannadanewsnow5705/03/2026 10:40 AM KARNATAKA 3 Mins Read

ಬೆಂಗಳೂರು: ವಿಕಲಚೇತನರ ಸಬಲೀಕರಣ ಮತ್ತು ಅವರ ಬದುಕಿಗೆ ಆಸರೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ…

ನೀವು ಜೀವನದಲ್ಲಿ ಹೆಚ್ಚು ನೋವು ಅನುಭವಿಸುತ್ತಿದ್ದೀರಾ? ಹಾಗಾದ್ರೆ ನಿಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ

05/03/2026 10:37 AM

BIG NEWS : ಮಂಡ್ಯದ PWD ಕಚೇರಿಯ AEE ಮನೆ ಮೇಲೆ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ

05/03/2026 10:31 AM

ALERT : ಮಕ್ಕಳಿಗೆ `ಕೂಲ್ ಡ್ರಿಂಕ್ಸ್’ ಕೊಡುವ ಮುನ್ನಎಚ್ಚರ : ಈ ತಂಪು ಪಾನೀಯಗಳಲ್ಲಿ ವಿಷಕಾರಿ ಅಂಶ ಪತ್ತೆ !

05/03/2026 10:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.