Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING:ಒಂಬತ್ತು ತಿಂಗಳ ಹಿಂದೆ ನಿಧನರಾಗಿದ್ದ ಪಾಕಿಸ್ತಾನದ ನಟಿ ಹುಮೈರಾ ಅಸ್ಗರ್ ಶವ ಪತ್ತೆ

12/07/2025 9:23 AM

SHOCKING : ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವ ವಿಡಿಯೋ ಸೆರೆ ಹಿಡಿಯುತ್ತಿದ್ದ ವಿಕೃತ ಕಾಮುಕ ಅರೆಸ್ಟ್.!

12/07/2025 9:22 AM

ಸಾರ್ವಜನಿಕರೇ ಗಮನಿಸಿ : ಮೊಬೈಲ್ ನಲ್ಲಿ ಈ ‘KSP ಆಪ್’ ಇದ್ದರೇ, ನಿಮ್ಮ ಜೊತೆಗೆ ಪೊಲೀಸರೇ ಇದ್ದಂತೆ.!

12/07/2025 9:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹುಬ್ಬಳ್ಳಿಯಲ್ಲಿ ಸೋತ ಜಗದೀಶ್ ಶೆಟ್ಟರ್ ರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ: ಸಿ.ಎಂ.ಸಿದ್ದರಾಮಯ್ಯ
Uncategorized

ಹುಬ್ಬಳ್ಳಿಯಲ್ಲಿ ಸೋತ ಜಗದೀಶ್ ಶೆಟ್ಟರ್ ರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ: ಸಿ.ಎಂ.ಸಿದ್ದರಾಮಯ್ಯ

By kannadanewsnow0728/04/2024 6:59 PM

ಬೆಳಗಾವಿ:ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ: ಇವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗತ್ತೆ ಎಂದರು.

ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಓಡೋಗೋದು ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ.

ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ. ಹತ್ತತ್ತು ವರ್ಷ ಮೋದಿ ಬರೀ ಸುಳ್ಳು ಹೇಳಿಕೊಂಡು ತಿರುಗಿದ್ದು ಬಿಟ್ಟರೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ ಎಂದರು.

ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಈಗ ನಿಂತೋಗತ್ತೆ ಎಂದು ಸುಳ್ಳು ಹೇಳುತ್ತಿದ್ದಾರೆ

ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಆಗಲೇ ತೆಗೆದಿಟ್ಟಿದ್ದೀವಿ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ , ಬೈರತಿ ಸುರೇಶ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಹಸಿರುಮಕ್ಕಿ ಸೇತುವೆ ಬೇಗ ಆಗಬಾರದೆಂದು ಬಿವೈ ರಾಘವೇಂದ್ರ, ಹಾಲಪ್ಪ ತಡೆ: ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿ

04/07/2025 3:41 PM1 Min Read

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read
Recent News

BREAKING:ಒಂಬತ್ತು ತಿಂಗಳ ಹಿಂದೆ ನಿಧನರಾಗಿದ್ದ ಪಾಕಿಸ್ತಾನದ ನಟಿ ಹುಮೈರಾ ಅಸ್ಗರ್ ಶವ ಪತ್ತೆ

12/07/2025 9:23 AM

SHOCKING : ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವ ವಿಡಿಯೋ ಸೆರೆ ಹಿಡಿಯುತ್ತಿದ್ದ ವಿಕೃತ ಕಾಮುಕ ಅರೆಸ್ಟ್.!

12/07/2025 9:22 AM

ಸಾರ್ವಜನಿಕರೇ ಗಮನಿಸಿ : ಮೊಬೈಲ್ ನಲ್ಲಿ ಈ ‘KSP ಆಪ್’ ಇದ್ದರೇ, ನಿಮ್ಮ ಜೊತೆಗೆ ಪೊಲೀಸರೇ ಇದ್ದಂತೆ.!

12/07/2025 9:17 AM

BREAKING: ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ, ಹಲವರು ಸಿಲುಕಿರುವ ಶಂಕೆ | Building collapse

12/07/2025 8:56 AM
State News
KARNATAKA

SHOCKING : ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವ ವಿಡಿಯೋ ಸೆರೆ ಹಿಡಿಯುತ್ತಿದ್ದ ವಿಕೃತ ಕಾಮುಕ ಅರೆಸ್ಟ್.!

By kannadanewsnow5712/07/2025 9:22 AM KARNATAKA 1 Min Read

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದ ಮತ್ತೊಬ್ಬ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸರು ಹಾಜ…

ಸಾರ್ವಜನಿಕರೇ ಗಮನಿಸಿ : ಮೊಬೈಲ್ ನಲ್ಲಿ ಈ ‘KSP ಆಪ್’ ಇದ್ದರೇ, ನಿಮ್ಮ ಜೊತೆಗೆ ಪೊಲೀಸರೇ ಇದ್ದಂತೆ.!

12/07/2025 9:17 AM

BREAKING : ರಾಜ್ಯದ 5 ಪಟ್ಟಣ ಪಂಚಾಯಿತಿ ,3 ವಾರ್ಡುಗಳ ಉಪಚುನಾವಣೆ ಘೋಷಣೆ : ಆ.17 ಕ್ಕೆ ಮತದಾನ, 20ಕ್ಕೆ ಫಲಿತಾಂಶ | By-Election

12/07/2025 8:15 AM

SHOCKING : ಗಂಡ-ಹೆಂಡತಿ ನಡುವೆ ಕಿರಿಕ್ : ರಾಯಚೂರಿನಲ್ಲಿ ಪತಿಯನ್ನೇ ನದಿಗೆ ತಳ್ಳಿದ ಪತ್ನಿ.!

12/07/2025 7:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.