Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 27ರಂದು ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

27ರಂದು ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0925/12/2024 3:03 PM

ಬೆಂಗಳೂರು : “27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡಿ ಶಾಲಾ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಾತನಾಡಿದರು.

“ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ. ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ.” ಎಂದು ತಿಳಿಸಿದರು.

“ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಈ ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ಇಂದಿನ ಪರಿಸ್ಥಿತಿಯಲ್ಲಿ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು. ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ” ಎಂದು ತಿಳಿಸಿದರು.

“ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ಸಂಸತ್ ಸದಸ್ಯರು, ಶಾಸಕರು, ರಾಜ್ಯದುದ್ದಗಲದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದೇವೆ” ಎಂದು ಹೇಳಿದರು.

ಕಾರ್ಯಕ್ರಮದ ವಿವರಗಳು:

“1924ರ ಅಧಿವೇಶನದ ದಾಖಲೆಗಳನ್ನು ಸಂಗ್ರಹಿಸಿದ್ದು, ಅದನ್ನು ಪುಸ್ತಕ ಮಾಡಿ ನಾಳೆ ಬಿಡುಗಡೆ ಮಾಡುತ್ತಿದ್ದೇವೆ. 26ರಂದು ಬೆಳಗ್ಗೆ 10 ಗಂಟೆಗೆ ವೀರ ಸೌಧದಲ್ಲಿ ಗಾಂಧಿ ಅವರ ಪುತ್ಥಳಿ ಅನಾವರಣ ಮಾಡಲಾಗುವುದು. ಜತೆಗೆ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 10.45ಕ್ಕೆ ಖಾದಿ ಮೇಳವನ್ನು ಉದ್ಘಾಟನೆ ಮಾಡಲಾಗುವುದು. 11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ನಾನು ಹಾಗೂ ಮುಖ್ಯಮಂತ್ರಿಗಳು ಅನಾವರಣ ಮಾಡಲಿದ್ದೇವೆ. ನಂತರ ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ರಾತ್ರಿ 7ಕ್ಕೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗಿದೆ.

27ರಂದು ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಅನಾವರಣಗೊಳಿಸಲಿದ್ದಾರೆ. ಮುಖ್ಯಮಂತ್ರಿಗಳು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಭಾಧ್ಯಕ್ಷರಾದ ಯು.ಟಿ ಖಾದರ್ ಹಾಗೂ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಮುಖಂಡತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗುವುದು. ಸ್ಥಳೀಯ ನಾಯಕರು, ರಾಜ್ಯದ ಎಲ್ಲಾ ಸಂಸದರನ್ನು ನಾವು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. 12 ಗಂಟೆಗೆ ಮುಖ್ಯಮಂತ್ರಿಗಳಿಂದ ಔತನಕೂಟ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಮಾವೇಶ ನಡೆಯಲಿದೆ” ಎಂದು ತಿಳಿಸಿದರು.

ಬೆಳಗಾವಿಯಲ್ಲಿ ದೀಪಾಲಂಕಾರ

“ಬೆಳಗಾವಿ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಎಸ್ಕಾಂನವರು ಬೆಳಗಾವಿ ನಗರದಲ್ಲಿ ದೀಪಾಲಂಕಾರ ಮಾಡಿದ್ದು, ಬಹಳ ಉತ್ತಮವಾಗಿ ಅಲಂಕಾರ ಮಾಡಿದ್ದಾರೆ. ರಾಜ್ಯದ ಜನತೆ ಅದರಲ್ಲೂ ಕಿತ್ತೂರು ಕರ್ನಾಟಕ ಭಾಗದ ಜನ ಈ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. 1904ರಲ್ಲಿ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಆರಂಭವಾಗಿದ್ದು, 1924ರಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಅದರ ಫೋಟೋಗಳು ನಮ್ಮ ಬಳಿ ಇದೆ. ವಿಜಯನಗರದ ವಿರೂಪಾಕ್ಷ ದೇಗುಲ ಮಾದರಿಯ ದೀಪಾಲಂಕಾರದ ಫೋಟೋ ಲಭ್ಯವಾಗಿದೆ. ಅದೇ ರೀತಿ ಈ ಬಾರಿಯೂ ದೀಪಾಲಂಕಾರ ಮಾಡಲಾಗಿದೆ” ಎಂದು ತಿಳಿಸಿದರು.

“ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರನ್ನು ಸೇವಾದಳದ ಕಾರ್ಯಕರ್ತರು ಪಾದಯಾತ್ರೆ ಮೂಲಕ ಸಭೆಯ ಜಾಗಕ್ಕೆ ಗೌರವಯುತ ಪಥಸಂಚಲನದ ಮೂಲಕ ಕರೆದೊಯ್ಯಲಿದ್ದಾರೆ. ನಂತರ ಸಭೆಯಲ್ಲಿ ನಮ್ಮ ನಾಯಕರು ವಿವಿಧ ವಿಚಾರಗಳ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದಾರೆ” ಎಂದರು.

ವರ್ಷಪೂರ್ತಿ ಗಾಂಧಿ ಭಾರತ ಕಾರ್ಯಕ್ರಮ

“ಸರ್ಕಾರ ಹಾಗೂ ಪಕ್ಷದ ವತಿಯಿಂದ ರಾಜ್ಯಾದ್ಯಂತ ಈ ಶತಮಾನೋತ್ಸವ ಗಾಂಧಿ ಭಾರತ ಕಾರ್ಯಕ್ರಮ ಆಚರಿಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಚರ್ಚಾಸ್ಪರ್ಧೆ ನಡೆಸಲಾಗುವುದು. ಗಾಂಧಿ ತತ್ವ, ಆಚಾರ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುವುದು. ಪಕ್ಷ ಹಾಗೂ ಸರ್ಕಾರದ ವತಿಯಿಂದ ಈಗಾಗಲೇ ಗಾಂಧಿ ಜಯಂತಿ ಅಂಗವಾಗಿ ಕಳೆದ ಅಕ್ಟೋಬರ್ 2ರಂದು ಗಾಂಧಿ ನಡಿಗೆ ಪಾದಯಾತ್ರೆ ಮಾಡಿದ್ದೇವೆ, ವಿಧಾನಸೌಧದಲ್ಲಿ ಶಾಲಾ ಮಕ್ಕಳ ಜತೆ ಸಂವಾದ ಕಾರ್ಯಕ್ರಮ ಮಾಡಲಾಗಿದೆ” ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆ ಶಾಸಕರಿಗೆ ಯಾಕೆ ಜವಾಬ್ದಾರಿ ನೀಡಿಲ್ಲ ಎಂದು ಕೇಳಿದಾಗ, “ಬೆಳಗಾವಿ ಶಾಸಕರಿಗೆ ಸಂಘಟನೆಯ ಜವಾಬ್ದಾರಿ ನೀಡಿದ್ದೇವೆ. ಅವರಿಗೆ ಈಗಾಗಲೇ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ” ಎಂದು ತಿಳಿಸಿದರು.

ಕಾರ್ಯಕಾರಿ ಸಮಿತಿ ಸಭೆ ಚರ್ಚಾ ವಿಷಯಗಳೇನು ಎಂದು ಕೇಳಿದಾಗ, “ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಈ ಸಭೆಯ ಚರ್ಚಾ ವಿಷಯಗಳನ್ನು ಅಂದು ತೀರ್ಮಾನ ಮಾಡಲಿದ್ದಾರೆ. ಈಗಾಗಲೇ ಕರಡು ಸಮಿತಿ ಸಭೆ ನಡೆಯುತ್ತಿದ್ದು, ಏನೆಲ್ಲಾ ವಿಚಾರ ಚರ್ಚೆ ಮಾಡಬೇಕು ಎಂದು ಸಭೆ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಅಂಬೇಡ್ಕರ್ ಗೆ ಅಪಮಾನ ಮಾಡಿರುವ ವಿಚಾರ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದೇ ಎಂದು ಕೇಳಿದಾಗ, “27ರಂದು ನಡೆಯಲಿರುವ ಸಮಾವೇಶ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಹೆಸರಿಟ್ಟಿದ್ದೇವೆ” ಎಂದು ಉತ್ತರಿಸಿದರು.

2 ದಿನಗಳ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡುತ್ತೀರಾ ಎಂದು ಕೇಳಿದಾಗ, “ನಾವು ಅದನ್ನು ಮಾಡಲು ಸಾಧ್ಯವಿಲ್ಲ. ಕಾರ್ಯಕ್ರಮ ನಡೆಯುವ ಮೈದಾನದ ಪಕ್ಕದಲ್ಲಿ ಶಾಲೆ ಇರುವ ಕಾರಣ ನಿಮ್ಮ ಸಲಹೆ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಪೊಲೀಸ್ ಆಯುಕ್ತರ ಕಚೇರಿ ಭೇಟಿ ಬಗ್ಗೆ ಕೇಳಿದಾಗ, “ನಾನು ಹಾಗೂ ಗೃಹಮಂತ್ರಿಗಳು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಬಂದಿದ್ದೇವೆ. ಸುಮಾರು 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ವಾಹನಗಳ ನಿಲುಗಡೆ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿ ಬಂದಿದ್ದೇನೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಯಾವಾಗ ಆಗಮಿಸಲಿದ್ದಾರೆ ಎಂದು ಕೇಳಿದಾಗ, “ಅವರ ಆಗಮನದ ವಿವರವನ್ನು ನಾವು ಸದ್ಯದಲ್ಲೇ ನೀಡುತ್ತೇವೆ. ಅವರು ಉಳಿದುಕೊಳ್ಳಲು ಸರ್ಕಿಟ್ ಹೌಸ್ ಹಾಗೂ ಬೇರೆ ಕಡೆ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ನಾವು ವ್ಯವಸ್ಥೆ ಮಾಡಿದ್ದೇವೆ” ಎಂದು ತಿಳಿಸಿದರು.

ಬಸವಣ್ಣನ ನಾಡಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದು, ಜೈ ಬಸವ ಎಂದು ಸಮಾವೇಶದ ಹೆಸರಿನಲ್ಲಿ ಸೇರಿಸಬಹುದಿತ್ತಲ್ಲವೇ ಎಂದು ಕೇಳಿದಾಗ, “ನಿಮ್ಮ ಸಲಹೆ ಬಗ್ಗೆ ಗಮನಹರಿಸುತ್ತೇವೆ” ಎಂದರು.

ಗಾಂಧಿ ಮದ್ಯಪಾನ ವಿರೋಧ ಮಾಡಿದ್ದರು ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡುತ್ತೀರಾ ಎಂದು ಕೇಳಿದಾಗ, “ಆಗಿನ ಕಾಲವೇ ಬೇರೆ, ಈಗಿನ ಕಾಲವೇ ಬೇರೆ. ಆಗ ಖಾದಿ ಹಾಕುತ್ತಿದ್ದರು. ಈಗ ನೀವೆಲ್ಲ ಬೇರೆ ಬಟ್ಟೆ ಹಾಕುತ್ತಿಲ್ಲವೇ” ಎಂದು ತಿಳಿಸಿದರು.

ಖಾದಿಗೆ ಉತ್ತೇಜನ ನೀಡುವ ಕಾರ್ಯಕ್ರಮ ಕೈಗೊಂಡಿದ್ದೀರಾ ಎಂದು ಕೇಳಿದಾಗ, “ಖಾದಿ ಪ್ರಚಾರ ಮಾಡಲು ಖಾದಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ” ಎಂದು ತಿಳಿಸಿದರು.

ಶೆಟ್ಟರ್ ಮನೆಗೆ ರತ್ನಗಂಬಳಿ ಹಾಸೋಣ

ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಗೌರವಯುತವಾಗಿ ಆಹ್ವಾನ ಮಾಡಿಲ್ಲ ಎಂಬ ಜಗದೀಶ್ ಶೆಟ್ಟರ್ ಅವರ ಆರೋಪದ ಬಗ್ಗೆ ಕೇಳಿದಾಗ, “ಅವರ ಮನೆವರೆಗೂ ರತ್ನಗಂಬಳಿ ಹಾಕಿಸೋಣ. ನನ್ನ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಆರ್.ಅಶೋಕ್, ನಾರಾಯಣಸ್ವಾಮಿ, ಸಭಾಪತಿಗಳಿಗೆ ಆಹ್ವಾನ ನೀಡಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ. ಆ ಕಾರ್ಯಕ್ರಮ ಬಿಡಿ, ಅವರ ಸರ್ಕಾರ ಇದ್ದಾಗ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಅವರಿಂದ ಸಾಧ್ಯವಾಗಿಲ್ಲ. ಅವರ ಬೀಗರಿಗೆ ಸರಿಯಾಗಿ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗಲಿಲ್ಲವಲ್ಲ, ಅದರ ಬಗ್ಗೆ ಅವರು ಮೊದಲು ಮಾತನಾಡಲಿ. ಆಗ ಬಿಜೆಪಿ ನಾಯಕರರು ಯಾರೂ ಮಾತನಾಡಲಿಲ್ಲ. ವಿಶೇಷ ಮಿಲಿಟರಿ ವಿಮಾನದಲ್ಲಿ ಪಾರ್ಥೀವ ಶರೀರ ತಂದು ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ಮಾಡಲು ಆಗಲಿಲ್ಲ. ಆಗ ಶೆಟ್ಟರ್ ಅವರ ಬಾಯಿಗೆ ಏನಾಗಿತ್ತು” ಎಂದು ತಿರುಗೇಟು ನೀಡಿದರು.

ಶೆಟ್ಟರ್ ನೇತೃತ್ವದಲ್ಲಿ ಕಾರ್ಯಕ್ರಮ ಮಾಡಲಿ, ನಾನು ಸೇವಕನಂತೆ ಕೆಲಸ ಮಾಡುವೆ

ಗಾಂಧಿ ಮೇಲೆ ಪ್ರೀತಿ ಇದ್ದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಕಾರ್ಯಕ್ರಮ ಮಾಡಿದ್ದರೆ 500 ಕೋಟಿ ಖರ್ಚು ಮಾಡಲು ಸಿದ್ಧವಿದ್ದೆವು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈಗಲೂ ಮಾಡಲಿ. ನಾವು ಈ ಕಾರ್ಯಕ್ರಮವನ್ನು ಒಂದು ವರ್ಷಗಳ ಕಾಲ ಆಚರಣೆ ಮಾಡುತ್ತೇವೆ. ಅವರು ಕೂಡ ಈ ಕಾರ್ಯಕ್ರಮ ಮಾಡಲಿ ಎಂದು ಮಾಧ್ಯಮಗಳ ಮೂಲಕ ನಮ್ರತೆಯಿಂದ ಜನರ ಪರವಾಗಿ ಮನವಿ ಮಾಡುತ್ತೇನೆ. ಅವರೇ ಮುಂದಾಳತ್ವ ವಹಿಸಿಕೊಂಡು ಕಾರ್ಯಕ್ರಮ ಮಾಡಲಿ, ಅವರ ಹಿಂದೆ ನಿಂತು ನಾವು ಸೇವಕರಂತೆ ಕೆಲಸ ಮಾಡುತ್ತೇವೆ” ಎಂದರು.

ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವೆನೆ ಹೋಗಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯದಲ್ಲಿ ನಾವು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ತಮ್ಮ ಜವಾಬ್ದಾರಿಯಿಂದ ಕಾರ್ಯಕ್ರಮ ಮಾಡಲಿ. ದೇಶದ ನೋಟಿನಲ್ಲಿ ಗಾಂಧಿ ಅವರ ಚಿತ್ರ ಏಕಿದೆ? ಅವರಿಗೆ ಗಾಂಧಿ ಬಗ್ಗೆ ಅರಿವಿಲ್ಲವೇ? ಗಾಂಧಿ ಅವರ ಹಕ್ಕನ್ನು ಬಿಜೆಪಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸವಿಲ್ಲ. ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವುದು ಕಾಂಗ್ರೆಸಿಗರಿಗೆ ಮಾತ್ರ” ಎಂದು ವಾಗ್ದಾಳಿ ನಡೆಸಿದರು.

1000 VA ನೇಮಕಾತಿಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಜ.4ರಿಂದ ದಾಖಲಾತಿ ಪರಿಶೀಲನೆ ಆರಂಭ

BREAKING:ಪಾಕಿಸ್ತಾನದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 46 ಮಂದಿ ಸಾವು, ಪ್ರತೀಕಾರದ ಪ್ರತಿಜ್ಞೆ ಮಾಡಿದ ತಾಲಿಬಾನ್

Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

BREAKING: ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ದೃಢಪಡಿಸಿದ ಕೇಂದ್ರ ಸರ್ಕಾರ: ಭಾರತೀಯ ಸೇನೆಗೆ ತಿರುಗೇಟಿಗೆ ಸೂಚನೆ

10/05/2025 11:27 PM

BREAKING: ಪಾಕಿಸ್ತಾನಕ್ಕೆ ಕದನ ವಿರಾಮ ಒಪ್ಪಂದ ಅರ್ಥವಾಗುತ್ತಿಲ್ಲ, ಶೀಘ್ರದಲ್ಲೇ ಭಾರತೀಯ ಸೇವೆ ಪ್ರತ್ಯುತ್ತರ: ಕೇಂದ್ರ ಗೃಹ ಸಚಿವಾಲಯ

10/05/2025 11:22 PM

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.