ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಅಡಿಯ ದೇವಾಲಯಗಳಲ್ಲಿ ( Karnataka Temples ) ಈ ಹಿಂದಿನಿಂದ ನಡೆಸಿಕೊಂಡು ಬರುತ್ತಿರುವಂತ ರೂಢಿ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗುವುದು. ಅದರ ಹೊರತಾಗಿ ಜಯಂತಿಗಳನ್ನು ಆಚರಿಸುವಂತಿಲ್ಲ, ಪೋಟೋಗಳನ್ನು ಅಳವಡಿಸುವಂತಿಲ್ಲ ಎಂಬುದಾಗಿ ಇಲಾಖೆ ಖಡಕ್ ಆದೇಶ ಹೊರಡಿಸಿದೆ.

BREAKING NEWS : ‘ಮುರುಘಾ ಶ್ರೀ’ ಪೋಕ್ಸೋ ಕೇಸ್ : ಒಡನಾಡಿ ಸಂಸ್ಥೆಯ ನಾಲ್ವರು ಸಿಬ್ಬಂದಿ ಪೊಲೀಸ್ ವಶಕ್ಕೆ , ವಿಚಾರಣೆ

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಧಾರ್ಮಿಕ ದತ್ತಿ ಇಲಾಖೆ ( Department of Religious Endowments ) ಆಯುಕ್ತರು, ಇತ್ತೀಚಿನ ದಿನಗಳಲ್ಲಿ ದೇವಾಲಯಗಳಲ್ಲಿ ನಡೆದು ಬಂದಿರುವ ಪದ್ದತಿಗಳನ್ನ ಬಿಟ್ಟು, ಅದಕ್ಕೆ ವಿರುದ್ಧವಾದಂತ ಧಾರ್ಮಿಕ ಆಚರಣೆಗಳನ್ನು ನಡೆಸಲಾಗುತ್ತಿದೆ. ನಾಮಫಲಕ, ಪೋಟೋ ಇತ್ಯಾದಿಗಳನ್ನು ಅಳವಡಿಸುತ್ತಿರುವು ಬಗ್ಗೆ ಆಕ್ಷೇಪ, ದೂರುಗಳು ಬಂದಿವೆ ಎಂದು ಹೇಳಿದ್ದಾರೆ.

ದಿನಾಂಕ 02-11-2022ರಂದು ನಡೆದ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ಎಲ್ಲವುಗಳ ಬಗ್ಗೆ ಚರ್ಚಿಸಲಾಗಿದೆ. ಚಾಲ್ತಿಯಲ್ಲಿರುವ ಪದ್ದತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ ನಡೆಸುವುದು, ಮುದ್ರಾಧಾರಣೆ ಮಾಡುತ್ತಿರುವುದು, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಅಳವಡಿಸುತ್ತಿರುವುದನ್ನು ತೀರ್ವವಾಗಿ ಆಕ್ಷೇಪಿಸಲಾಗಿದೆ ಎಂದಿದ್ದಾರೆ.

BIG BREAKING NEWS: ಟಿ20 ವಿಶ್ವಕಪ್ ಗೆಲ್ಲುವ ಟೀಂ ಇಂಡಿಯಾ ಕನಸು ಭಗ್ನ: ಇಂಗ್ಲೇಂಡ್ ವಿರುದ್ಧ ಸೆಮಿಫೈನ್ ನಲ್ಲಿ ಭಾರತಕ್ಕೆ ಸೋಲು | T20 World Cup 2022

ಇನ್ಮುಂದೆ ಆಯಾ ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಧಾರ್ಮಿಕ ಪದ್ದತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಪದ್ದತಿ, ಸಂಪ್ರದಾಯಗಳನ್ನು ಅನುಸರಿಸುವುದು, ಭಾವಚಿತ್ರ, ವಿಗ್ರಹಣಗಳನ್ನು ಅಳವಡಿಸುವುದು, ಮುದ್ರಾಧಾರಣೆ ಮಾಡುವುದು, ಜಯಂತಿಗಳನ್ನು ಆಚರಿಸುವುದನ್ನು ನಡೆಸದಂತೆ ಖಡಕ್ ಸೂಚನೆ ನೀಡಲಾಗಿದೆ.

ಇದಷ್ಟೇ ಅಲ್ಲದೇ ಆಯಾ ದೇವಾಲಯಗಳಲ್ಲಿ ಆಚರಣೆಯಲ್ಲಿರುವ ಆಗಮ, ಶಾಸ್ತ್ರ, ಪದ್ಧತಿ, ಸಂಪ್ರದಾಯಗಳಿಗೆ ವಿರುದ್ಧವಾಗಿ ಧಾರ್ಮಿಕ ಆಚರಣೆ, ಮುದ್ರಾಧಾರಣೆ, ಜಯಂತಿಗಳನ್ನು ಆಚರಿಸುವುದು, ಭಾವಚಿತ್ರಗಳನ್ನು ಅಳವಡಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ

BREAKING NEWS: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಬಂಧಿತ ಆರೋಪಿ ಅಮೃತ್ ಪೌಲ್ ನಿವಾಸದ ಮೇಲೆ ಇಡಿ ದಾಳಿ

Share.
Exit mobile version