Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

25/10/2025 3:58 PM

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK
KARNATAKA

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

By kannadanewsnow0925/10/2025 3:47 PM

ಬೆಂಗಳೂರು: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಎನ್ನುವುದೇ ಬೋಗಸ್. ದುಡ್ಡು ಹೊಡೆಯುವುದಕ್ಕೆ ಮಾಡಿರುವ ಸುಲಿಗೆ ಕಾರ್ಯಕ್ರಮ ಇದಾಗಿದೆ. ಯಾರೂ ಖಾತಾ ಬದಲಾವಣೆ ಮಾಡಿಸಿಕೊಳ್ಳಲು ಹಣ ಕಟ್ಟಬೇಡಿ. ಎರಡು ವರ್ಷಗಳಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಕಡಿಮೆ ದರದಲ್ಲಿ ನಿಮಗೆ ಖಾತೆ ಮಾಡಿಕೊಡುತ್ತೇವೆ. ಈ ಸರ್ಕಾರದ ಬೋಗಸ್ ಆಮಿಷಕ್ಕೆ ಮರುಳಾಗಬೇಡಿ. ಇದು ನಾನು ಬೆಂಗಳೂರು ಜನತೆಗೆ ನೀಡುತ್ತಿರುವ ಮುಕ್ತ ಕರೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಿ ಖಾತಾವನ್ನು ಬಿ ಖಾತೆಗೆ ಪರಿವರ್ತನೆ ಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರಕಾರ ರೂಪಿಸಿರುವ ಕಾರ್ಯಕ್ರಮದ ಕುರಿತು ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ ಮಾತುಗಳಿವು.

ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಜನರನ್ನು ಸುಲಿಗೆ ಸರಕನ್ನಾಗಿ ಮಾಡಿಕೊಂಡಿದೆ. ಬೆಂಗಳೂರು ಜನರಿಗೆ ನಾನು ಹೇಳಲು ಬಯಸುತ್ತೇನೆ. ಯಾವುದೇ ಕಾರಣಕ್ಕೂ ಒಂದು ನಯಾಪೈಸೆ ಕಟ್ಟಬೇಡಿ. ಯಾವುದೇ ಕಾರಣಕ್ಕೂ ಎರಡು ವರ್ಷ ಖಾತೆ ಮಾಡಿಸಿಕೊಳ್ಳಬೇಡಿ. ಇವರ ಮಾತಿಗೆ ಮರುಳಾಗಬೇಡಿ. ನಿಮ್ಮನ್ನು ಉಳಿಸುವ, ನಿಮ್ಮ ಹಿತ ಕಾಯುವ ಜವಾಬ್ದಾರಿ ನಮ್ಮದು ಎಂದು ಬೆಂಗಳೂರು ಜನತೆಗೆ ಕರೆ ನೀಡಿದರು ಕೇಂದ್ರ ಸಚಿವರು.

ಜನತೆ ಆತಂಕಕ್ಕೆ ಒಳಗಾಗಬೇಕಿಲ್ಲ. ಎರಡು ವರ್ಷ ಆದ ಮೇಲೆ ನಮ್ಮ ಮೈತ್ರಿ ಸರ್ಕಾರ ಬರುತ್ತದೆ. ಆಗ ಅತ್ಯಂತ ಸರಳವಾಗಿ, ಸುಲಭವಾಗಿ ಖಾತೆ ಮಾಡಿಕೊಡುತ್ತೇವೆ. ನಿಮಗೆ ಯಾವುದೇ ಹಣಕಾಸಿನ ಹೊರೆ ಆಗುವುದಿಲ್ಲ. ಈಗಾಗಲೇ ಆಸ್ತಿ ಸಂಪಾದನೆ ಮಾಡಲು ಸಾಲ ಮಾಡಿ ಬಡ್ಡಿ ಕಟ್ಟುತ್ತಿದ್ದೀರಿ. ಈಗ ಮತ್ತೊಮ್ಮೆ ಈ ಎ ಖಾತಾ ಮಾಡಿಸಲು ಲಕ್ಷಾಂತರ ರೂಪಾಯಿ ಸಾಲ ಮಾಡಬೇಡಿ. ಇನ್ನೊಮ್ಮೆ ಸಾಲದ ಸುಳಿಗೆ ಸಿಕ್ಕಿಕೊಳ್ಳಬೇಡಿ ಎಂದು ಕುಮಾರಸ್ವಾಮಿ ಅವರು ಜನರನ್ನು ಕೋರಿದರು.

ಈಗಾಗಲೇ ಬೆಲೆ ಏರಿಕೆ ಮತ್ತು ತೆರಿಗೆ ಹೇರಿಕೆಯಿಂದ ಜನತೆ ಬಸವಳಿಸಿದ್ದಾರೆ. ಇಂಥ ಹೊತ್ತಿನಲ್ಲಿ ದೀಪಾವಳಿ ಕೊಡುಗೆ ಎಂದು ಪುಟಗಟ್ಟಲೆ ಜಾಹೀರಾತು ಕೊಟ್ಟುಕೊಂಡು ಬಂದ ಈ ಸರ್ಕಾರ ಎ ಖಾತಾ ಎನ್ನುವ ದೋಖಾ ಕಾರ್ಯಕ್ರಮವನ್ನು 6ನೇ ಗ್ಯಾರಂಟಿಯನ್ನ ಜನರಿಗೆ ದೀಪಾವಳಿ ಉಡುಗೊರೆ ಕೊಟ್ಡಿದ್ದೇವೆ ಎಂದು ಸಿಎಂ, ಡಿಸಿಎಂ ಹೇಳಿದ್ದಾರೆ. ದೀಪಾವಳಿ ಕೊಡುಗೆ ಎಂದರೆ ಜನರಿಂದ ಲಕ್ಷ ಲಕ್ಷ ಪೀಕುವುದೇ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಬೋಗಸ್ ಕಾರ್ಯಕ್ರಮದ ಬಗ್ಗೆ ಈ ಸರ್ಕಾರ ನಿತ್ಯ ಜಾಹಿರಾತು ನೀಡುತ್ತಿದೆ. 15 ದಿನಗಳಿಂದ ಜಾಹಿರಾತು ಕೊಡುತ್ತಿದೆ. ಇದು ನಾಡಿನ ಜನರಿಗೆ ಟೋಪಿ ಹಾಕುವ ಕೆಲಸ. ಖಾತಾ ಪರಿವರ್ತನೆ ಮಾಡಲಿ, ಬೇಡ ಎಂದವರು ಯಾರು? ಆದರೆ, ಲಕ್ಷ ಲಕ್ಷ ಸುಲಿಗೆ ಯಾಕೆ? ಎಂದು ಅವರು ಪ್ರಶ್ನಿಸಿದರು.

1995ರಿಂದ ಈ ಸಮಸ್ಯೆಯನ್ನ ಬೆಂಗಳೂರು ಜನ ಅನುಭವಿಸುತ್ತಿದ್ದಾರೆ. ಇಂತಹ ಸಮಸ್ಯೆ ಬೆಂಗಳೂರು, ಗ್ರಾಮೀಣ ಪ್ರದೇಶದಲ್ಲಿ ಇದೆ. 1997ರಲ್ಲಿ ಒಂದು ಆದೇಶ ಆಗಿದೆ. 2003ನೇ ಇಸವಿವರೆಗೂ ನಗರಸಭೆ, ಪುರಸಭೆಯಲ್ಲಿ ಯಾವುದೇ ನಿವೇಶನಗಳಿಗೆ ಅಂದಿನ ದೇವೇಗೌಡರ ಸರ್ಕಾರ 60 ನಗರ ಪಾಲಿಕೆ ವಾರ್ಡ್ ಗಳನ್ನು 90 ವಾರ್ಡ್ ಗಳನ್ನಾಗಿ ವಿಂಗಡಿಸಿ ಹೊಸ ಪಟ್ಟಣ ಪಂಚಾಯತಿ, ನಗರ ಸಭೆ ರಚನೆ ಮಾಡಿತ್ತು. ಬೆಂಗಳೂರು ಹೊರ ವಲಯದಲ್ಲಿ ಅಭಿವೃದ್ಧಿ ಆಗಿರಲಿಲ್ಲ. ಹೀಗಾಗಿ ಹೊಸ ನಗರ ಪಾಲಿಕೆ ಮಾಡಲಾಯಿತು. 1997ರಲ್ಲಿ ಅಂದು ಸ್ವೆಯರ್ ಮೀಟರ್ ಗೆ 110 ರೂಪಾಯಿ ನಿಗದಿ ಮಾಡಲಾಗಿತ್ತು. ಫಾರಂ 19 ಮೂಲಕ ಖಾತೆ ವಿತರಣೆ ಮಾಡಲಾಗುತ್ತಿತ್ತು. 30/40 ನಿವೇಶನಕ್ಕೆ ಅಂದು 12,263 ರೂಪಾಯಿ ಆಗುತ್ತಿತ್ತು. ಭೂ ಪರಿವರ್ತನೆಗೆ 1500 ರೂಪಾಯಿ ಕಟ್ಟಿಸಿಕೊಂಡರು ಎಂದು ಕೇಂದ್ರ ಸಚಿವರು.

2007ರಲ್ಲಿ ನಾನು ಸಿಎಂ ಇದ್ದಾಗ ಕೇಂದ್ರ ಸರ್ಕಾರದಿಂದ ಒಂದು ಯೋಜನೆ ಆರಂಭವಾಯಿತು. ಅದರ ಮೂಲಕ 5 ವರ್ಷಗಳಲ್ಲಿ ನಗರಗಳ ಅಭಿವೃದ್ಧಿ ಮಾಡುವ ಯೋಜನೆ ಅದು. ನಾನು ಆಗ ಬೆಂಗಳೂರು, ಮೈಸೂರು ಅಭಿವೃದ್ಧಿಗೆ ಒತ್ತು ನೀಡಿದೆ. ಬೆಂಗಳೂರಿನಲ್ಲಿ 198 ವಾರ್ಡ್ ಮಾಡಿ BBMP ಆಯಿತು. ಅದಕ್ಕೆ 110 ಹಳ್ಳಿಗಳನ್ನು ಸೇರಿಸಿದ್ದೆ. ಬೆಂಗಳೂರು, ಮೈಸೂರು ಅಭಿವೃದ್ಧಿಗೆ 25 ಸಾವಿರ ಕೋಟಿ ಹಣ ಹೊಂದಿಸುವ ಯೋಜನೆ ಅದು. ಬೆಂಗಳೂರು ಅಭಿವೃದ್ಧಿಗೆ ಸಮಗ್ರ ಕಾರ್ಯಕ್ರಮ ರೂಪಿಸಿದ್ದೆ ಎಂದು ಸಚಿವರು ಹೇಳಿದರು.

2007ರ ನನ್ನ ಕಾಲದಲ್ಲಿ ಇಂಥ ನಿವೇಶನಗಳಿಗೆ ಖಾತೆ ಮಾಡಿಕೊಡುವ ನಿರ್ಧಾರ ಮಾಡಿದೆವು. 60 ಮತ್ತು ಅದರ ಒಳಗಿನ ಪ್ರತಿ ಚದರ ಮೀಟರ್ ಗೆ 200 ರೂ., 60ರಿಂದ 120 ಚದರ ಮೀಟರ್ ಗೆ- 400 ರೂ., 120 ಚದರ ಅಡಿ ಮೇಲ್ಪಟ್ಟ 600 ರೂ. ನಿಗದಿ ಮಾಡಿದೆವು. ಆದಾದ ಮೇಲೆ ಕೆಲವರು ಕೋರ್ಟ್ ಗೆ ಹೋಗ್ತಾರೆ. ಕೋರ್ಟ್ ಅಂದು 15 ದಿನಗಳಲ್ಲಿ ಖಾತೆ ಮಾಡಿಕೊಡಿ ಅಂತ ಹೇಳಿತ್ತು. ಅಂದೇ ಜನರಿಂದ ಖಾತೆ ಮಾಡಿಸಿಕೊಡಲು ಸರ್ಕಾರ/ BBMP ಹಣ ಪಡೆದಿದೆ. ಹೀಗಾಗಿ ಮತ್ತೆ ಇವರು ಯಾಕೆ ಹಣ ಪಡೆಯಬೇಕು ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ಅದರ ಅಭಿವೃದ್ಧಿ ಕಡೆಗಣಿಸುವಂತೆ ಇಲ್ಲ. ಅನಿಯಂತ್ರಿತ, ಅಸುರಕ್ಷಿತ ಕಟ್ಟಡಗಳಿಂದ ನಾಗರೀಕರಿಗೆ ಸಮಸ್ಯೆ ಸೇರಿ ಹಲವು ತೊಂದರೆಗೆ ದಾರಿ ಆಗಿದೆ ಎಂದು ಇವರು ಖಾತಾ ಪರಿವರ್ತನೆ ಆದೇಶದಲ್ಲಿ ಹೇಳಿದ್ದಾರೆ. ಹಾಗಾದರೆ,ಬಿ ಖಾತಾ ಮನೆಗಳು ಮಳೆಯಲ್ಲಿ ಕುಸಿಯುತ್ತಿವೆಯಾ? ಅದಕ್ಕೆ ಇವರು ಎ ಖಾತಾ ಮಾಡುತ್ತಿದ್ದಾರಾ? ಯಾರಾದರೂ ನಂಬುವ ಹಾಗೆ ಇದೆಯಾ ಇದನ್ನು ಎಂದು ಅವರು ಲೇವಡಿ ಮಾಡಿದರು.

ಇನ್ನು ಎಷ್ಟು ದಿನ ಎಂದು ಜನರಿಂದ ಹಗಲ ದರೋಡೆ ಮಾಡ್ತೀರಾ? ನಿಮಗೆ ಕೆಟ್ಟಕಾಲ ಬಂದಿದೆ. ಜನರ ಪರ ಮಾತನಾಡಿದರೆ ಅಸೂಯೆಗೆ ನಾವು ಮಾತಾಡ್ತೀವಿ ಅಂತಾರೆ. ಬಿ ಖಾತಾ ಎ ಖಾತಾ ಎಲ್ಲೂ ಇಲ್ಲ. ಅದೂ ಸಾಲದು ಅನ್ನುವಂತೆ ಈಗ ಓಸಿ,‌ ಸಿಸಿ ಅಂತ ಮತ್ತೊಂದು ಮಾಡ್ತಾ ಇದ್ದಾರೆ. 70% ಜನರಿಗೆ ಓಸಿ ವಿನಾಯಿತಿಯಿಂದ ಲಾಭ ಅಂತ ಹೇಳ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಎಸ್.ಎಲ್. ಭೋಜೇಗೌಡ, ಜವರಾಯಿಗೌಡ, ವಿವೇಕಾನಂದ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ, ಚೌಡರೆಡ್ಡಿ ತೂಪಲ್ಲಿ ಮುಂತಾದವರು ಹಾಜರಿದ್ದರು.

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

BREAKING : ಬೆಂಗಳೂರಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ : ರಾಜ್ಯ ಸರ್ಕಾರ & ‘GBA’ ಗೆ ಹೈಕೋರ್ಟ್ ನೋಟಿಸ್  ಜಾರಿ

Share. Facebook Twitter LinkedIn WhatsApp Email

Related Posts

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

25/10/2025 3:58 PM2 Mins Read

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM1 Min Read

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

25/10/2025 3:05 PM1 Min Read
Recent News

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

25/10/2025 3:58 PM

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM

IND vs AUS LIVE : ಸಿಡ್ನಿಯಲ್ಲಿ ‘ರೋಹಿತ್ ಶರ್ಮಾ’ ಘರ್ಜನೆ.. ಅದ್ಭುತ ಶತಕ ; ‘ಕೊಹ್ಲಿ’ ಅರ್ಧಶತಕ

25/10/2025 3:36 PM
State News
KARNATAKA

‘ನ್ಯಾಯಮೂರ್ತಿ ಸಂತೋಷ್ ಹೆಗ್ಡೆ’ ಅವರ ಹೇಳಿಕೆಗೆ ಈ ತಿರುಗೇಟು ಕೊಟ್ಟ ‘MLC ರಮೇಶ್ ಬಾಬು’

By kannadanewsnow0925/10/2025 3:58 PM KARNATAKA 2 Mins Read

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ…

ರಾಜ್ಯದಲ್ಲಿ ಮತ್ತೆ JDS-BJP ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡ್ತೀವಿ- HDK

25/10/2025 3:47 PM

‘ಮಾಜಿ ಸಿಎಂ ಎಸ್.ಬಂಗಾರಪ್ಪ’ ಹುಟ್ಟುಹಬ್ಬ ಹಿನ್ನಲೆ: ನಾಳೆ ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಶಾಸಕರಿಂದ ಹಣ್ಣು-ಹಂಪಲು ವಿತರಣೆ

25/10/2025 3:41 PM

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

25/10/2025 3:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.