ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.
ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಜನತಾದಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಇಂದಿನಿಂದ ಅಧಿಕೃತವಾಗಿ ಮಿಸ್ಡ್ ಕಾಲ್ ಅಭಿಯಾನದ ಮೂಲಕ ಸದಸ್ಯತ್ವ ನೋಂದಣಿ ಆರಂಭ ಮಾಡಿದ್ದೇವೆ.
ರಾಜ್ಯ ಪ್ರವಾಸದ ವೇಳೆ ಪ್ರತಿ ಕಾರ್ಯಕರ್ತರನ್ನು ಭೇಟಿ ಮಾಡಿ. ಪಕ್ಷಕ್ಕಾಗಿ ದುಡಿಯುವ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುತ್ತೇನೆ ಎಂದು ತಿಳಿಸಿದರು.
ಕನಿಷ್ಠ ಐವತ್ತು ಲಕ್ಷ ಜನ ಸದಸ್ಯರಾಗಬೇಕು ಎಂಬ ಗುರಿ ಇಟ್ಟುಕೊಂಡು ಹೋಗೋಣ. ಮತ್ತೆ ಈ ಪಕ್ಷವನ್ನು ತಳ ಮಟ್ಟದಿಂದ ಪುಟಿದೇಳುವಂತೆ ಮಾಡಬೇಕು ಎಂಬ ನಿಟ್ಟಿನಲ್ಲಿ ಆ.16 ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ ನಿಮ್ಮ ಸಹಕಾರ ಇರಲಿ ಎಂದು ಮನವಿ ಮಾಡಿದರು.
ಚಿತ್ರರಂಗದಲ್ಲಿ ಅಣ್ಣಾವ್ರು, ರಾಜಕಾರಣದಲ್ಲಿ ಕುಮಾರಣ್ಣ
ಚಿತ್ರರಂಗದಲ್ಲಿ ಡಾ ರಾಜ್ ಕುಮಾರಣ್ಣ ಅವರಿಗೆ ಅಣ್ಣ ಅಂತ ಸ್ಥಾನ ಕೊಟ್ಟಿದ್ದರು. ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗೆ ಜನರು ಸ್ಥಾನ ನೀಡಿದ್ದಾರೆ. ಅಪ್ಪಂದಿರ ದಿನಚರಣೆ ಆಚರಿಸೋಕ್ಕೆ ನನಗೆ ಒಳ್ಳೆ ಅವಕಾಶ ತಂದೆ ಅಂದ್ರೆ ನಮ್ಮ ಜೀವನದ ಬೆಳಕು. ನಾನು ನಮ್ಮ ತಂದೆಯಿಂದ ಹಲವು ವಿಚಾರಗಳನ್ನು ಹಾಗೆಯೇ ದೇವೇಗೌಡರ ರಾಜಕೀಯ ಕಾರ್ಯ ಕೆಲಸ ಕಲಿತಿದ್ದೇನೆ ಎಂದು ತಿಳಿಸಿದರು.
ಕೆಂಪುಕೋಟೆ ಮೇಲೆ ತ್ರಿವರ್ಣದ್ವಜ ಹಾರಿಸಿದ HDD ಈಶ್ವರನ ವರ ಪುತ್ರ
ಒಬ್ಬ ರೈತನ ಮಗ ದೇಶದ ಉನ್ನತ ಹುದ್ದೆ ಅಲಂಕರಿಸಿದರು ದೇವೇಗೌಡರನ್ನ ಈಶ್ವರನ ಪುತ್ರ ಎಂದೇ ಹೇಳಬಹುದು
ರಾಜ್ಯದ ಬಗ್ಗೆ ಅವರಿಗೆ ಇದ್ದ ಬದ್ದತೆ ನೋಡಿದ್ರೆ ಹಲವು ಜನರಿಗೆ ಮಾರ್ಗದರ್ಶನ ಆಗುವಂತದ್ದು ಎಂದರು. ನನ್ನ ಒಳಗೆ ಆತಂಕವಿದೆ ಎಲ್ಲರೂ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನಾನು ಪಕ್ಷದ ಸಂಘಟನೆಗೆ ಮೊದಲು ಹಾಜರಾತಿ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾವೇಶಕ್ಕೂ ಮೊದಲು ಆದಿಚುಂಚನಗಿರಿ ಬುದ್ದಿಗಳ ಜೊತೆ ಕೂತಿದ್ದೆ. ಅವರು ಅನೇಕ ಪ್ರಸ್ತಾವಿಕ ನುಡಿ ಹೇಳುತ್ತಿದ್ರು. ಹೀಗಾಗಿ ಮಧ್ಯೆ ಎದ್ದು ಬರಲು ಆಗಲಿಲ್ಲ. ಎಲ್ಲರಿಗೂ ಕ್ಷಮೆ ಕೇಳುತ್ತೇನೆ ಮುಂದೆ ಈ ರೀತಿ ಆಗಲಿಲ್ಲ. ಪಕ್ಷ ಸಂಘಟನೆಗೆ ಒತ್ತು ನೀಡಲಾಗಿದೆ.ಪಕ್ಷಕ್ಕೆ ಹೊಸ ಯುಗ ಆರಂಭವಾಗಬೇಕು ಎಂದರು.
58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ
ನಾಳೆಯಿಂದ ಬಹುತೇಕ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡುತ್ತೇನೆ. ಇವತ್ತು ಬಹಳ ಉತ್ಸಾಹದಿಂದ ಪಕ್ಷ ಕಟ್ಟೋಕ್ಕೆ ಎಲ್ಲರು ಬಂದಿದ್ದಾರೆ.58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕ್ತೇನೆ.ನಾನು ನಿಮ್ಮ ಜೊತೆ ಇರುತ್ತೇನೆ. ಒಂದು ಕಡೆ ಪಕ್ಷ ಸಂಘಟನೆ ಆದರೆ ಮತ್ತೊಂದು ಕಡೆ ಸರ್ಕಾರದ ವೈಫಲ್ಯ ತೆರದಿಡಲು ಬರುತ್ತಿದ್ದೇನೆ ಎಂದರು.
ಭ್ರಷ್ಟಾ ಸರ್ಕಾರ ರಾಜ್ಯದಿಂದ ತೊಲಗಬೇಕು
ರೈತ ವರ್ಗಕ್ಕೆ ಕುಮಾರಣ್ಣ ಕೊಟ್ಟ ಕೊಡುಗೆ ಹೇಳಲು ಆಗದು. 25 ಸಾವಿರ ಕೋಟಿ ಯೋಜನೆಯನ್ನ ರೈತಾಪಿ ವರ್ಗಕ್ಕೆ ನೀಡಿದ್ದಾರೆ. ಪಂಚ ರತ್ನ ಯೋಜನೆ ಕನಸು ನನಸು ಆಗಬೇಕು.ಈ ಭ್ರಷ್ಟಾ ಸರ್ಕಾರ ರಾಜ್ಯದಿಂದ ತೊಲಗಬೇಕು
ಎಂದು ಸರ್ಕಾರ ವಿರುದ್ಧ ಕಿಡಿಕಾರಿದರು.
ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಕಡೆಯೂ ಪ್ರವಾಸ ಮಾಡ್ತೇವೆ. ಕಾರ್ಯಕರ್ತರು ಒಂದು ಛಲ ಇಟ್ಟುಕೊಳ್ಳಬೇಕು.ನಮ್ಮದು ಸಣ್ಣ ಪ್ರಮಾಣದ ಪಕ್ಷ ಅಲ್ಲ.ಹಳ್ಳಿ ಹಳ್ಳಿಗಳಿಗೆ ಹೋಗಿ ಒಂದು ರಿಜಿಸ್ಟರ್ ಮಾಡಿ ಯಾವುದೇ ಹಣ ಕಾಸು ಖರ್ಚಾಗಲ್ಲ ಎಲ್ಲರ ಬಳಿ ಸ್ಮಾರ್ಟ್ ಪೋನ್ ಇದೆ. ಡಿಜಿಟಲ್ ನಲ್ಲಿ ರಿಜಿಸ್ಟರ್ ಮಾಡಿಸಿ ಪಕ್ಷದ ಸಂಘಟನೆಯಲ್ಲಿ ಕೈ ಜೋಡಿಸಿ ಎಂದು ಮನವಿ ಮಾಡಿದರು.
ಯಾರೂ ಕೂಡ ಮೈ ಮರೆಯೋದು ಬೇಡ. ಇವತ್ತಿಂದ ಟೈಂ ಶುರುವಾಗಿದೆ. ಕನಿಷ್ಠ 50 ಲಕ್ಣ ಮಿಸ್ ಕಾಲ್ಟ್ ಸದಸ್ಯ ಕೊಡ್ತೇವೆಂದು. ದೇವೇಗೌಡರು ಹಾಗೂ ಕುಮಾರಣ್ಣಗೆ ಭರವಸೆ ಕೊಡ್ತಿದ್ದೇನವೆ ಎಂದು ತಿಳಿಸಿದರು.
ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ಶೋಕಾಚರಣೆ ಘೋಷಣೆ