ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Breaking news:‌ ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ. 2013 ರಲ್ಲಿ ಯಡಿಯೂರಪ್ಪನವರು ಇನ್ನೊಂದು ಪಕ್ಷ ಮಾಡದಿದ್ದರೆ ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಅವರು ಯಡಿಯೂರಪ್ಪನವರನ್ನು ನೆನಪಿಸಿಕೊಳ್ಳಬೇಕು. ಅಂದು ಅಧಿಕಾರದಲ್ಲಿದ್ದ ಪಕ್ಷ ನಂತರ 78 ಕ್ಕೆ ಇಳಿದಿದ್ದರ. ಇವತ್ತು ಹೇಳುತ್ತಿದ್ಧೇನೆ ಬರೆದಿಟ್ಡುಕೊಳ್ಳಿ, ಕಾಂಗ್ರೆಸ್ ಪಕ್ಷ 70 ಸೀಟು ದಾಟಲ್ಲ. ನಮ್ಮ ಪಕ್ಷಕ್ಕೆ ಜನತೆಯ ಮತ್ತು ದೇವರ ಆಶೀರ್ವಾದ ಇದೆ. ನಾನು ಚಾಲೆಂಜ್ ಮಾಡುತ್ತೇನೆ. ನಮ್ಮ ಪಕ್ಷ ಈ ಎರಡು ರಾಷ್ಟ್ರಿಯ ಪಕ್ಷಗಳಿಗಿಂತ ಮೇಲಿರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Breaking news:‌ ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು

ರಾಜಣ್ಣ ಎಸ್ ಟಿ ಜನಾಂಗದವರು. ಅವರ ಜನಾಂಗಕ್ಕೆ ಕೊಡುಗೆ ಕೊಟ್ಟಿರೋರು ಯಾರು?. ದೇವೇಗೌಡರು ಕೊಟ್ಟ ಕೊಡುಗೆ ಬಗ್ಗೆ ಸಿದ್ದರಾಮಯ್ಯನವರಿಗೂ ಗೊತ್ತು. 14 ಸೀಟು ಎಸ್ ಟಿಗೆ ಕೊಟ್ಟಿದ್ದು ದೇವೇಗೌಡರು. ಅದು ಕಾಂಗ್ರೆಸ್ ನಾಯಕ ಉಗ್ರಪ್ಪನವರಿಗೂ ಗೊತ್ತು. ತುಮಕೂರಲ್ಲಿದ್ದು ಈ ಮನುಷ್ಯ ಮಾಡಿದ್ದೇನು? ಎಂದು ಪ್ರಶ್ನಿಸಿದರು.

BREAKING NEWS : ದೇಶದಲ್ಲಿ ಕೊಂಚ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 16,103 ಕೇಸ್ ಪತ್ತೆ

Share.
Exit mobile version