ಶಿವಮೊಗ್ಗ: ಪ್ರಹ್ಲಾದ್ ಜೋಶಿ ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್. ಡಿ ಕುಮಾರಸ್ವಾಮಿ ಹೇಳಿಕೆಗೆ ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 20 ಸ್ಥಾನ ಕೂಡ ಗೆಲ್ಲಲ್ಲ. ಈ ಭಯ ಹೆಚ್. ಡಿ ಕುಮಾರಸ್ವಾಮಿ ಕಾಡುತ್ತಿದೆ ಎಂದು ಕೆಂಡಾಮಂಡಲರಾಗಿದ್ದಾರೆನಗರದಲ್ಲಿ ಮಾತನಾಡಿದ ಅವರು, ಹೆಚ್.ಡಿ ಕುಮಾರಸ್ವಾಮಿ 9 ಡಿಸಿಎಂ ಅಂತ ಅವರ ಮನೆ ನೋಡಿ ಹೇಳಿರಬೇಕು. ಹೆಚ್.ಡಿಕೆ ಒಡೆದು ಆಳುವ , ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ.
ಹಾಗಾಗಿ ಹೆಚ್.ಡಿ ಕುಮಾರಸ್ವಾಮಿ ಇಂತಹ ಹೇಳಿಕೆ ನೀಡಿದ್ದಾರೆ.ಮಾಜಿ ಸಿಎಂ ಆದವರು ಎಲ್ಲಾ ಸಮಾಜಕ್ಕೂ ಗೌರವ ಕೊಡಬೇಕು. ಈ ರೀತಿ ಹೇಳಿಕೆ ಕೊಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಕುಮಾರಸ್ವಾಮಿ ಸಂಪೂರ್ಣ ತಿಳಿದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.
BREAKING NEWS : ಕರ್ನಾಟಕದಲ್ಲಿ `ಬ್ರಾಹ್ಮಣ ಸಿಎಂ’ ಮಾಡಲು `RSS’ ನಿರ್ಧಾರ : ಮಾಜಿ ಸಿಎಂ ಹೆಚ್ ಡಿಕೆ ಹೇಳಿಕೆ
BIGG NEWS: ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ: ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ