ಬೆಂಗಳೂರು : ರಾಜ್ಯದ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ 2025-2026 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡಿ/ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪುಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು ಅವಶ್ಯಕವಿರುತ್ತದೆ.
ಸದರಿ ಅಂಶಗಳ ಹಿನ್ನೆಲೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ಶಿಕ್ಷಕರನ್ನು ಹುದ್ದೆಗಳಿಗೆ ಎದುರಾಗಿ ಈ ಕೆಳಕಂಡ ಷರತ್ತು ಮತ್ತು ಮಾರ್ಗಸೂಚಿಗಳಂತೆ ಅತಿಥಿ ಶಿಕ್ಷಕರನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಹಂತದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ.
ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ
https://chat.whatsapp.com/IrUCOvj6lb9BOTe0MLkeaY
ಮಾರ್ಗಸೂಚಿಗಳು:-
1) ರಾಜ್ಯಾದ್ಯಂತ ಜಿಲ್ಲಾ ಹಂತದಲ್ಲಿ ಈ ಕೆಳಕಂಡ ವೇಳಾಪಟ್ಟಿಯಂತೆ ಅರ್ಜಿಗಳನ್ನು ಆಹ್ವಾನಿಸುವುದು.
2) ಜಿಲ್ಲಾ ಅಧಿಕಾರಿಗಳು ಕೂಡಲೇ ಜಿಲ್ಲೆಯಲ್ಲಿ ಮೇಲ್ಕಂಡ ವೇಳಾಪಟ್ಟಿಯಂತೆ ಖಾಲಿ ಇರುವ ಅತಿಥಿ ಉಪನ್ಯಾಸಕರು/ಶಿಕ್ಷಕರ ಹುದ್ದೆಗಳ ಮಾಹಿತಿ, ಮತ್ತು ವಿದ್ಯಾರ್ಹತೆಗಳ ವಿವರದೊಂದಿಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.
3) ಖಾಲಿ ಇರುವ ಮಂಜೂರಾದ ಹುದ್ದೆಗಳಿಗೆ ಮಾತ್ರ ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕಾತಿ ಮಾಡಲು ಕ್ರಮ ವಹಿಸುವುದು.
4) ಅತಿಥಿ ಉಪನ್ಯಾಸಕರು/ಶಿಕ್ಷಕರ ಆಯ್ಕೆ ವಿಧಾನ.
ಸದರಿ ಅತಿಥಿ ಉಪನ್ಯಾಸಕರು/ಶಿಕ್ಷಕರ ಆಯ್ಕೆ ವಿಧಾನದ ಬಗ್ಗೆ ಪ್ರತ್ಯೇಕವಾಗಿ ಮಾರ್ಗಸೂಚಿಯನ್ನು ಶೀಘ್ರದಲ್ಲಿ ನೀಡಲಾಗುವುದು.
5) ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕರ ರಹಿತ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಮೊದಲ ಆದ್ಯತೆ ನೀಡುವುದು.
6) ರಾಜ್ಯದಲ್ಲಿರುವ ಡಾ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಶೇಕಡ 100% ರಷ್ಟು ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು. 7) ನೇಮಕಗೊಂಡ ಅತಿಥಿ ಉಪನ್ಯಾಸಕರು/ಶಿಕ್ಷಕರು ಕನಿಷ್ಟ ರೂ.100/- ಛಾಪಾ ಕಾಗದದಲ್ಲಿ ಸರ್ಕಾರದ ಆದೇಶಾನುಸಾರ ಕರ್ತವ್ಯ ನಿರ್ವಹಿಸುವ ಬಗ್ಗೆ ಮುಚ್ಚಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವುದು.
8) ಅತಿಥಿ ಉಪನ್ಯಾಸಕರು/ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸುವುದು. 9) ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಉಪನ್ಯಾಸಕರು/ಶಿಕ್ಷಕರು ಸ್ಥಳ ನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕರು/ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವುದು. ಅತಿಥಿ
10)ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ಪ್ರಸ್ತುತ ಸರ್ಕಾರದ ಆದೇಶದಂತೆ ನಿಗದಿಪಡಿಸಿರುವ ಗೌರವ
ಸಂಭಾವನೆಯನ್ನು ಪಾವತಿಸುವುದು.
11) ಇಲಾಖೆಯ ಪ್ರಸ್ತುತ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳು ಮತ್ತು ಕಾರ್ಯಕಾರಿ ಆದೇಶಗಳಲ್ಲಿ ವಿಷಯವಾರು ನಮೂದಿಸಿರುವ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು (ಸಿಡಿಆರ್ ಮತ್ತು ಕಾರ್ಯಕಾರಿ ಆದೇಶ ಪ್ರತಿಗಳನ್ನು ಲಗತ್ತಿಸಿದೆ).
ಮೇಲ್ಕಂಡ ವಿಷಯದಲ್ಲಿ ಯಾವುದೇ ಲೋಪದೋಷಗಳಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು
ಸೂಚನೆ:- ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿ, ತಾಲ್ಲೂಕು ಕಛೇರಿ ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.