Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಓಲಾ ಸಿಇಒ ಭವಿಶ್ ಅಗರ್ವಾಲ್ ವಿರುದ್ಧ ಬಂಧನ ವಾರಂಟ್ ಜಾರಿ | Ola CEO Bhavish Aggarwal

17/02/2026 10:10 PM

BREAKING NEWS: ಕರ್ನಾಟಕದ ಕರಾವಳಿ ಜಿಲ್ಲೆಯಾಧ್ಯಂತ ಗುರುವಾರದಿಂದ ‘ರಂಜಾನ್ ಉಪವಾಸ’ ಆರಂಭ | Ramadan 2026

17/02/2026 10:04 PM

ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಪತ್ರ; ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ

17/02/2026 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
KARNATAKA

ಉದ್ಯೋಗವಾರ್ತೆ : ಕರ್ನಾಟಕ ಸರ್ಕಾರದ 8 ವಿವಿಧ ಇಲಾಖೆಯಲ್ಲಿ ಖಾಲಿ ಇರುವ ‘708’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

By kannadanewsnow5725/11/2025 5:26 AM

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 25 ರ ಇಂದು ಕೊನೆಯ ದಿನವಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಪ್ರಾಧಿಕಾರದಿಂದ ದಿನಾಂಕ 15.11.2025 ರಂದು ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆ/ಸಂಸ್ಥೆ/ನಿಗಮದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ದಿನಾಂಕ 08.10.2025 ಮತ್ತು 31.10.2025 ರಂದು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು ಮತ್ತು ದಿನಾಂಕ 31.10.2025 ರಂದು ಪ್ರತ್ಯೇಕ ಪ್ರಕಟಣೆ ಹೊರಡಿಸಿ ಅರ್ಜಿ ಸಲ್ಲಿಸಲು ದಿನಾಂಕವನ್ನು 14.11.2025ರ ವರೆಗೆ ಹಾಗೂ ದಿನಾಂಕ 15.11.2025 ರವರೆಗೆ ಶುಲ್ಕ ಪಾವತಿಸುಲು ಅವಕಾಶ ನೀಡಲಾಗಿತ್ತು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿರುವುದರಿಂದ, ಈಗಾಗಲೇ ಅಧಿಸೂಚನೆ ಹೊರಡಿಸಿದ ಇಲಾಖೆ/ಸಂಸ್ಥೆಗಳ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈ ಕೆಳಗಿನಂತೆ ನಿಗದಿಗೊಳಿಸಲಾಗಿದೆ.

1) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 25.11.2025

2) ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 26.11.2025

ಸೂಚನೆ: ಅರ್ಹತಾ ನಿಬಂಧನೆಗಳು ಹಾಗೂ ಇತರೆ ವಿವರಗಳಿಗಾಗಿ ದಿನಾಂಕ: 08.10.2025, ದಿನಾಂಕ 31.10.2025 ಮತ್ತು ದಿನಾಂಕ 15.11.2025ರ ವಿವರವಾದ ಅಧಿಸೂಚನೆಗಳನ್ನು ಓದಿಕೊಳ್ಳಲು ಸೂಚಿಸಿದೆ.

ನೇಮಕಾತಿ ಹುದ್ದೆಗಳ ವಿವರ

ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- 18+07 ಹುದ್ದೆಗಳು

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ – 07+ 14 ಹುದ್ದೆಗಳು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ, ಬೆಂಗಳೂರು – 40+4 ಹುದ್ದೆಗಳು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ- 63+253 ಹುದ್ದೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ- 19 ಹುದ್ದೆ

ಕೃಷಿ ಮಾರಾಟ ಇಲಾಖೆ- 180 ಹುದ್ದೆಗಳು

ತಾಂತ್ರಿಕ ಶಿಕ್ಷಣ ಇಲಾಖೆ – 50+43 ಹುದ್ದೆಗಳು

ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗದಲ್ಲಿ – 10 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ

ಪ್ರಥಮ ದರ್ಜೆ ಸಹಾಯಕರಿಗೆ – ಪದವಿ

ದ್ವಿತೀಯ ದರ್ಜೆ ಸಹಾಯಕರಿಗೆ – ದ್ವಿತೀಯ ಪಿಯುಸಿ

ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗೆ- ಕಲಾ, ವಾಣಿಜ್ಯ, ವಿಜ್ಞಾನ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ನಿರ್ವಾಹಕರ ಹುದ್ದೆ – ಪಿಯುಸಿ

ಸಹಾಯಕ ಲೆಕ್ಕಿಗ – ಬಿಕಾಂ

ಅಧಿಕಾರಿ – ಪದವಿ ಜೊತೆಗೆ ಎಂಬಿಎ

ಕಿರಿಯ ಅಧಿಕಾರಿ- ಎಂಎಸ್ಸಿ ಕೆಮಿಸ್ಟ್ರಿ

ಸಹಾಯಕ ಗ್ರಂಥಪಾಲಕರು – ಎಂಎಸ್ಸಿ ಲೈಬ್ರರಿ ಸೈನ್ಸ್

ಗ್ರಂಥಪಾಲಕರು – ಎಂಲಿಬ್

ಜೂನಿಯರ್ ಪ್ರೋಗ್ರಾಮರ್- ಎಲೆಕ್ಟ್ರಾನಿಕ್ಸ್ ಕಂಪ್ಯೂಟರ್ ಸೈನ್ಸ್ ಅಥವಾ ಎಂಸಿಎ

ಸಹಾಯಕ ಇಂಜಿನಿಯರ್- ಸಿವಿಲ್ ಇಂಜಿನಿಯರಿಂಗ್

ಸಹಾಯಕ ಅಭಿಯಂತರರು- ಬಿಇ ಸಿವಿಲ್

ಕಿರಿಯ ಅಭಿಯಂತರರು- ಡಿಪ್ಲೋಮಾ ಸಿವಿಲ್

ಮಾರುಕಟ್ಟೇ ಮೇಲ್ವಿಚಾರಕರು – ಬಿಎಸ್ಸಿ ಅಕ್ರಿಕಲ್ಚರ್ ಮಾರ್ಕೇಟಿಂಗ್.

ವಯೋಮಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 41 ವರ್ಷ

ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷ

ಈ ಮೇಲ್ಕಂಡ 394 ಕೆಇಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ, ಇತರೆ ಮಾಹಿತಿಗೆ ಸಂಬಂಧಿಸಿದಂತೆ http://cetonline.karnataka.gov.in/kea/ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ;

a) OMR ಆಧಾರಿತ ಪರೀಕ್ಷೆಯಾಗಿದ್ದು ಒಂದು ಪ್ರಶ್ನೆಗೆ OMR ನಲ್ಲಿ 05 ವೃತ್ತಗಳಿದ್ದು, ಮೊದಲ 04 ವೃತ್ತಗಳು ಒಂದು ಸರಿಯಾದ ಉತ್ತರವನ್ನು ಶೇಡ್ ಮಾಡಲು ಸಂಬಂಧಿಸಿವೆ. ಅಭ್ಯರ್ಥಿಗೆ ಯಾವುದಾದರೂ ಪ್ರಶ್ನೆಗೆ / ಪ್ರಶ್ನೆಗಳಿಗೆ ಉತ್ತರ ತಿಳಿದಿಲ್ಲದಿದ್ದರೆ ಕಡ್ಡಾಯವಾಗಿ 05 ನೇ ವೃತ್ತವನ್ನು ಕೇಡ್ ಮಾಡಬೇಕು. ಇಲ್ಲದಿದ್ದಲ್ಲಿ 4 ಅಂಕ ಕಡಿತ ಮಾಡಲಾಗುವುದು.

b) ಋಣಾತ್ಮಕ ಮೌಲ್ಯಮಾಪನವಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು (7) ಅಂಕಗಳನ್ನು ಕಡಿತ ಮಾಡಲಾಗುವುದು.

c) ಪರೀಕ್ಷಾ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗುವುದು,

d) ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು.
ಅರ್ಜಿ ಆಹ್ವಾನಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರಗಳಿಗೆ ನೀಡುವ ಜವಾಬ್ದಾರಿ ಮಾತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ್ದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿಯನುಸಾರ ದಾಖಲೆ ಪರಿಶೀಲಿಸಿ ನಿಯಮಾನುಸಾರ ನೇಮಕಾತಿ ಆದೇಶ ನೀಡುವುದು ಸಂಬಂಧ ಪಟ್ಟ ನೇಮಕಾತಿ ಪ್ರಾಧಿಕಾರದ ಜವಾಬ್ದಾರಿಯಾಗಿರುತ್ತದೆ.

ನೇಮಕಾತಿ ಪ್ರಕ್ರಿಯೆ ಕುರಿತು ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸುವುದಿಲ್ಲ, ಅಭ್ಯರ್ಥಿಗಳು ಆಗಿಂದಾಗ್ಗೆ ಪ್ರಾಧಿಕಾರದ ವೆಬ್ಸೈಟ್ https://cetonline.karnataka.gov.in/keaಗೆ ಭೇಟಿ ನೀಡುತ್ತಿರಲು ಸೂಚಿಸಿದೆ.

 

#KEARecruitment: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೂಡ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಕಾರಣ ಈ ಹಿಂದಿನ ನೇಮಕಾತಿ ಅಧಿಸೂಚನೆಗಳ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆ ದಿನಾಂಕವನ್ನು ನ.25ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ನ.26 ಕೊನೆ ದಿನ.

-… pic.twitter.com/kGV170XAoY

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 16, 2025

Job News: Today is the last day to apply for ‘708’ vacant posts in 8 different departments of the Karnataka Government
Share. Facebook Twitter LinkedIn WhatsApp Email

Related Posts

BREAKING NEWS: ಕರ್ನಾಟಕದ ಕರಾವಳಿ ಜಿಲ್ಲೆಯಾಧ್ಯಂತ ಗುರುವಾರದಿಂದ ‘ರಂಜಾನ್ ಉಪವಾಸ’ ಆರಂಭ | Ramadan 2026

17/02/2026 10:04 PM1 Min Read

BIG NEWS : ಕೆಂಪೇಗೌಡ ಏರ್ಪೋರ್ಟ್ ಗೆ ಬಂದ ಕಾಂಗ್ರೆಸ್ ಶಾಸಕರು : ಫಾರೆನ್ ಟೂರ್ ಗೆ ಹೋಗೋದು ಯಾರ್ಯಾರು?

17/02/2026 9:26 PM1 Min Read

ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ

17/02/2026 9:06 PM2 Mins Read
Recent News

BREAKING: ಓಲಾ ಸಿಇಒ ಭವಿಶ್ ಅಗರ್ವಾಲ್ ವಿರುದ್ಧ ಬಂಧನ ವಾರಂಟ್ ಜಾರಿ | Ola CEO Bhavish Aggarwal

17/02/2026 10:10 PM

BREAKING NEWS: ಕರ್ನಾಟಕದ ಕರಾವಳಿ ಜಿಲ್ಲೆಯಾಧ್ಯಂತ ಗುರುವಾರದಿಂದ ‘ರಂಜಾನ್ ಉಪವಾಸ’ ಆರಂಭ | Ramadan 2026

17/02/2026 10:04 PM

ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಪತ್ರ; ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ

17/02/2026 9:54 PM

ನಟ ಸಿದ್ಧಾರ್ಥ್ ಮಲ್ಹೋತ್ರಾ ತಂದೆ ಸುನಿಲ್ ಮಲ್ಹೋತ್ರಾ ನಿಧನ

17/02/2026 9:46 PM
State News
KARNATAKA

BREAKING NEWS: ಕರ್ನಾಟಕದ ಕರಾವಳಿ ಜಿಲ್ಲೆಯಾಧ್ಯಂತ ಗುರುವಾರದಿಂದ ‘ರಂಜಾನ್ ಉಪವಾಸ’ ಆರಂಭ | Ramadan 2026

By kannadanewsnow0917/02/2026 10:04 PM KARNATAKA 1 Min Read

ಮಂಗಳೂರು: ಕರಾವಳಿ ಜಿಲ್ಲೆಯಾಧ್ಯಂತ ಗುರುವಾರದಿಂದ ರಂಜಾನ್ ಉಪವಾಸ ಆರಂಭಗೊಳ್ಳಲಿದೆ ಎಂಬುದಾಗಿ ಮಂಗಳೂರಿನ ಝೀನತ್ ಫಕ್ಷ್ ಕೇಂದ್ರ ಜಮಾ ಮಸೀದಿ ಮತ್ತು…

BIG NEWS : ಕೆಂಪೇಗೌಡ ಏರ್ಪೋರ್ಟ್ ಗೆ ಬಂದ ಕಾಂಗ್ರೆಸ್ ಶಾಸಕರು : ಫಾರೆನ್ ಟೂರ್ ಗೆ ಹೋಗೋದು ಯಾರ್ಯಾರು?

17/02/2026 9:26 PM

ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ

17/02/2026 9:06 PM

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.