ಹಾವೇರಿ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯಡಿ ಸೆಪ್ಟೆಂಬರ್ 1 ರಿಂದ 20ರವರೆಗೆ ಹಾವೇರಿ ನಗರದಲ್ಲಿ ಅಗ್ನಿವೀರರ ನೇಮಕಾತಿ ರ್ಯಾಲಿ ಆಯೋಜಿಸಲಾಗಿದ್ದು, ನೇಮಕಾತಿ ರ್ಯಾಲಿಗೆ ಅಗತ್ಯವಾದ ಮೂಲಕ ಸೌಕರ್ಯಗಳ ಸಿದ್ಧತೆಗೆ ವಿವಿಧ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗನದಲ್ಲಿ ಶನಿವಾರ ಜರುಗಿದ ಅಗ್ನಿಪಥ್ ನೇಮಕಾತಿ ರ್ಯಾಲಿ ಪೂರ್ವ ಸಿದ್ಧತೆ ಕುರಿತಂತೆ ಸೇನಾ ನೇಮಕಾತಿ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರರ ನೇಮಕಾತಿ ಕುರಿತಂತೆ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲು ಸ್ಥಳ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, 50 ಸಾವಿರದಷ್ಟು ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪ್ರತಿದಿನ 2500 ರಿಂದ 3000 ಜನರು ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಆಗಮಿಸಲಿದ್ದಾರೆ. ಹಾಗೂ ಸೇನಾ ನೇಮಕಾತಿ ವಿಭಾಗದಿಂದ ಅಧಿಕಾರಿಗಳು ಆಗಮಿಸಲಿದ್ದಾರೆ. ಎಲ್ಲರಿಗೂ ಅಗತ್ಯವಾದ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಾಗುತ್ತದೆ. ಸಾರಿಗೆ ವ್ಯವಸ್ಥೆ, ವಸತಿ ವ್ಯವಸ್ಥೆ, ಸ್ವಚ್ಛತಾ ವ್ಯವಸ್ಥೆ, ತಾತ್ಕಾಲಿಕ ವಸತಿ ವ್ಯವಸ್ಥೆ, ಸೇನಾ ನೇಮಕಾತಿಗೆ ಅನುಗುಣವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧಗೊಳಿಸುವ ಕಾರ್ಯವನ್ನು ಸ್ಥಳೀಯ ಅಧಿಕಾರಿಗಳು ಕೈಗೊಳ್ಳಬೇಕಾಗಿರುವುದರಿಂದ ನೇಮಕಾತಿ ಪ್ರಾಧಿಕಾರದ ಅಧಿಕಾರಿಗಳ ಅವಶ್ಯಕತೆ ಹಾಗೂ ಮಾರ್ಗದರ್ಶನದಂತೆ ವ್ಯವಸ್ಥೆಮಾಡಬೇಕು. ಯಾವುದೇ ಲೋಪವಾಗಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನೇಮಕಾತಿ ರ್ಯಾಲಿಯಲ್ಲಿ 11 ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. 20 ದಿನಗಳ ಕಾಲ ನಡೆಯುವ ನೇಮಕಾತಿ ರ್ಯಾಲಿಯಲ್ಲಿ ವಿವಿಧ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲು ಯಾವುದೇ ಸಾರಿಗೆ ಅನಾನುಕೂಲವಾಗದಂತೆ ವಿಶೇಷವಾಗಿ ಹುಬ್ಬಳ್ಳಿ ಮತ್ತು ದಾವಣಗೆರೆಯಿಂದ ಹಾವೇರಿಗೆ ಹೆಚ್ಚುವರಿ ಸಾರಿಗೆ ಸಂಪರ್ಕ ಕಲ್ಪಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಕರ್ನಾಟಕ ವಾಯವ್ಯ ರಸ್ತೆ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು
ಸೇನಾ ನೇಮಕಾತಿ ಅಧಿಕಾರಿಗಳ ತಂಡಕ್ಕೆ ಖಾಸಗಿ ಹೋಟೆಲ್ಗಳಲ್ಲಿ ವಸತಿ ವ್ಯವಸ್ಥೆ ಮಾಡಬೇಕು. ಸೇನಾ ನೇಮಕಾತಿ ಸಿಬ್ಬಂದಿಗಳಿಗೆ ನಗರದ ಉತ್ತಮ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಳ್ಳಲು ವ್ಯವಸ್ಥೆಮಾಡಬೇಕು. ವಿವಿಧ ಜಿಲ್ಲೆಗಳಿಂದ ಹಾವೇರಿಗೆ ಆಗಮಿಸುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವ್ಯವಸ್ಥೆಯಾಗಿ ನಗರದ ವಿವಿಧ ಸಮುದಾಯ ಭವನಗಳನ್ನು ಗುರುತಿಸಿ ವ್ಯವಸ್ಥೆ ಮಾಡಬೇಕು. ಅಭ್ಯರ್ಥಿಗಳಿಗೆ ಊಟದ ವ್ಯವಸ್ಥೆಗಾಗಿ ಫೂಡ್ ಕೋರ್ಟ್ಗಳನ್ನು ಗುರುತಿಸಿ ವ್ಯವಸ್ಥೆ ಮಾಡಬೇಕು. ನೇಮಕಾತಿಗೆ ಅಗತ್ಯವಾಗಿ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಬೇಕು. ತಾತ್ಕಾಲಿಕ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ವೈದ್ಯಕೀಯ ವ್ಯವಸ್ಥೆ, ಅಂಬ್ಯುಲೆನ್ಸ್ ವ್ಯವಸ್ಥೆ, ಅಭ್ಯರ್ಥಿಗಳಿಗೆ ಟೆಂಟ್ ವ್ಯವಸ್ಥೆ ಸೇರಿದಂತೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಕೈಗೊಳ್ಳಬೇಕು. ಸ್ವಚ್ಛತೆ ರಕ್ಷಣೆ ಸೇರಿದಂತೆ ಸಿದ್ಧತೆಗೆ ನಗರಸಭೆ, ಪೊಲೀಸ್ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಮಾತನಾಡಿ, ಸೇನಾ ನೇಮಕಾತಿ ಅಧಿಕಾರಿಗಳು ನೀಡುವ ನೀಲಿ ನಕ್ಷೆಯಂತೆ ಕ್ರೀಡಾಂಗಣದಲ್ಲಿ ನೇಮಕಾತಿ ಪ್ರಕ್ರಿಯೆಗೆ ವ್ಯವಸ್ಥೆ ಮಾಡಬೇಕು. 24*7 ಸ್ವಚ್ಛತೆಗಾಗಿ ಪಾಳೆಯದಲ್ಲಿ ಪೌರಕಾರ್ಮಿಕರನ್ನು ನಿಯೋಜಿಸಬೇಕು. ಮಳೆಗಾಲವಾಗಿರುವುದರಿಂದ ವಾಟರ್ಫ್ರೂಪ್ ಶ್ಯಾಮಿಯಾನ ಹಾಕಬೇಕು. ನಿರಂತರ ವಿದ್ಯುತ್ ಪೂರೈಕೆ, ಒಳಾಂಗಣ ಕ್ರೀಡಾಂಗಣ ಹಾಗೂ ಹೊಸ ಆವರಣದಲ್ಲಿ ಸಿಸಿ ಟಿವಿಗಳ ಅಳವಡಿಕೆ, ವಾಹನ ನಿಲುಗಡೆ ವ್ಯವಸ್ಥೆ, ರೈಲು, ಬಸ್ ಮೂಲಕ ಬರುವ ಅಭ್ಯರ್ಥಿಗಳಿಗೆ ನೇಮಕಾತಿ ಸ್ಥಳ ಹಾಗೂ ತಾತ್ಕಾಲಿಕ ವಸತಿ ಹಾಗೂ ಆಹಾರದ ವ್ಯವಸ್ಥೆ ಕುರಿತಂತೆ ಮಾರ್ಗಸೂಚಿ ಫಲಕಗಳನ್ನು ಅಳವಡಿಸಿವುದು, ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ನೇಮಕಾತಿಗೆ ಕೈಗೊಳ್ಳಬೇಕಾದ ವ್ಯವಸ್ಥೆ ಕುರಿತಂತೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಸಿಇಟಿ ಫಲಿತಾಂಶ ಪ್ರಕಟ: ಆಗಸ್ಟ್ 5ರಿಂದ ದಾಖಲೆಗಳ ಆನ್ ಲೈನ್ ಪರಿಶೀಲನೆ, ಸೆಪ್ಟೆಂಬರ್ ಮೊದಲ ವಾರ ಕೌನ್ಸೆಲಿಂಗ್ ಆರಂಭ
ಅಗ್ನಿಪಥ್ ನೇಮಕಾತಿ ವಿಭಾಗದ ಅಧಿಕಾರಿ ಸುನೀಲಕುಮಾರ ಅವರು ಮಾತನಾಡಿ, 50 ರಿಂದ 60ಸಾವಿರ ಅಭ್ಯರ್ಥಿಗಳು ಅಗ್ನಿವೀರರ ನೇಮಕಾತಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ದಿನಕ್ಕೆ 2500 ರಿಂದ 3000 ಅಭ್ಯರ್ಥಿಗಳ ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ದಾಖಲೆಗಳ ಪರಿಶೀಲನೆ ಸಹನಡೆಸಲಾಗುವುದು. ಕ್ರೀಡಾಂಗಣದ ಒಳಭಾಗದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು. ಹೊರ ಆವರಣದಲ್ಲಿ ಅಭ್ಯರ್ಥಿಗಳಿಗೆ ಟೆಂಟ್ ವ್ಯವಸ್ಥೆ, ಸೇನಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ವ್ಯವಸ್ಥೆ ಹಾಗೂ ದೈಹಿಕ ಸಾಮಥ್ರ್ಯ ಪರೀಕ್ಷೆಗೆ ಕ್ರೀಡಾಂಗಣದಲ್ಲಿ ಮಾರ್ಕಿಂಗ್ ಸೇರಿದಂತೆ ಅಗತ್ಯ ಸೌಲಭ್ಯಗಳ ಕುರಿತಂತೆ ಮಾಹಿತಿ ನೀಡಿದರು.