Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

​CBSE 12ನೇ ತರಗತಿ ಮರುಮೌಲ್ಯಮಾಪನ: ಅರ್ಜಿ ಸಲ್ಲಿಸಲು ಇನ್ನು ಒಂದೇ ದಿನ ಬಾಕಿ; ಇಲ್ಲಿದೆ ನೋಂದಣಿ ಪ್ರಕ್ರಿಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ
KARNATAKA

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

By ವಸಂತ ಬಿ ಈಶ್ವರಗೆರೆ

ಬೀದರ್: ಬಸವಣ್ಣ ನಡೆದಾಡಿದ ನೆಲದಲ್ಲಿ ನಡೆಯುತ್ತಿರುವ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿದೆ ಆಚರಣೆ ಮಾಡುವ ಮೂಲಕ ಇತಿಹಾಸ ಪುಟದಲ್ಲಿ ದಾಖಲೆಯಾಗುವ ಸಮ್ಮೇಳನವನ್ನು ಮಾಡಲು ಸಂಘಟಿತ ಪ್ರಯತ್ನ ನಡೆಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ವಿವಿಧ ಸಮಿತಿಗಳ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೀದರ್ ಪತ್ರಕರ್ತರ ಕೋರಿಕೆ ಮೇರೆಗೆ ಇಲ್ಲಿಗೆ ಸಮ್ಮೇಳನ ನೀಡಲಾಗಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ವಿಧಾನ ಸಭೆ, ವಿಧಾನ ಪರಿಷತ್ ಸಭಾಪತಿಗಳನ್ನು ಹಾಗೂ ಹಿರಿಯ ಪತ್ರಕರ್ತರು ಸೇರಿದಂತೆ ರಾಜ್ಯ ಮಟ್ಟದ ಎಲ್ಲ ಪತ್ರಿಕೆಗಳ ಸಂಪಾದಕರನ್ನು ಸಮ್ಮೇಳನಕ್ಕೆ ಅಹ್ವಾನಿಸಲಾಗಿದೆ ಎಂದರು.

ಎರಡು ದಿನದ ಸಮ್ಮೇಳನದಲ್ಲಿ ಉದ್ಘಾಟನೆ ಮತ್ತು ಸಮಾರೋಪ ಹೊರತುಪಡಿಸಿ, ಇನ್ನುಳಿದಂತೆ ಗೋಷ್ಠಿಗಳು, ಚಿಂತನ-ಮಂಥನ, ಸಂವಾದ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ನಾಡಿನಾದ್ಯಂತೆ ಈಗಾಗಲೇ ಎರಡೂವರೆ ಸಾವಿರ ಪತ್ರಕರ್ತರು ಸಮ್ಮೇಳನಕ್ಕೆ ಬರಲು ನೋಂದಣಿ ಮಾಡಿಕೊಂಡಿದ್ದಾರೆ. ನಾಡಿನ ಪತ್ರಕರ್ತರು ಇಲ್ಲಿ ಬಂದು ಹೋಗುವ ತನಕ ಆತಿಥ್ಯ ನೀಡುವುದು ಸ್ವಾಗತ ಸಮಿತಿ ಜವಬ್ದಾರಿಯಾಗಿರುವ ಕಾರಣ ಎಲ್ಲರೂ ಒಟ್ಟಾಗಿ ಸಮ್ಮೇಳನ ಯಶಸ್ವಿಗೆ ದುಡಿಯಬೇಕು ಎಂದರು.

ಹೊಸ ಜಾಹಿರಾತು ನೀತಿಯಿಂದ ಪತ್ರಿಕೆಗಳ ಸಂಪಾದಕರಿಗೆ ಆಗುತ್ತಿರುವ ತೊಂದರೆ ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಈಗಾಗಲೆ ಮನವಿ ಸಲ್ಲಿಸಲಾಗಿದ್ದು, ಸಮ್ಮೇಳನ ಸಂದರ್ಭದಲ್ಲೂ ಸಿಎಂಗೆ ಈ ಕುರಿತು ಮನವಿ ಮಾಡುವುದಾಗಿ ಭರವಸೆ ನೀಡಿದರು.

ಸ್ಮರಣ ಸಂಚಿಕೆ ಹಾಗೂ ಕೈಪಿಡಿಗಳನ್ನು ಪ್ರತ್ಯೇಕವಾಗಿ ಹೊರ ತರಲು ನಿರ್ಣಯಿಸಲಾಯಿತು. ವಸತಿ ಸಮಿತಿ, ಸಾರಿಗೆ ಸಮಿತಿಗಳು ಸೇರಿದಂತೆ ಎಲ್ಲ ಸಮಿತಿಗಳ ನಡುವೆಯೂ ಸೌಹಾರ್ದತೆಯ ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದರು. ಛಾಯಾಚಿತ್ರ ಪ್ರದರ್ಶನ ಮತ್ತು ವ್ಯಂಗ್ಯಚಿತ್ರ ಪ್ರದರ್ಶನಗಳು ಅಚ್ಚುಕಟ್ಟಾಗಿ ನಡೆಯಬೇಕು. ಅದಕ್ಕಾಗಿ ಸಿದ್ಧತೆಗಳು ನಡೆಯಬೇಕು ಎಂದರು. ಹಿರಿಯರು ಹಾಗೂ ಮಾಜಿ ಜಿಲ್ಲಾಧ್ಯಕ್ಷರ ಸಲಹಾ ಸಮಿತಿ, ಪ್ರವಾಸ, ಆಹಾರ, ಮೆರವಣಿಗೆ, ವಸ್ತು ಪ್ರದರ್ಶನ ಮಾರಾಟ ಮಳಿಗೆ, ಪ್ರತಿನಿಧಿಗಳ ನೊಂದಣಿ ಹಾಗೂ ಕಿಟ್ ವಿತರಣಾ ಸಮಿತಿಗಳ ತಯಾರಿ ಕುರಿತು ಪೂರ್ವ ಸಿದ್ದತಾ ಸಭೆ ಜರುಗಿತು.

ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಬೀದರ್ ಪತ್ರಕರ್ತರು ತಮಗೆ ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು. ತಗಡೂರು ಅವರಂಥ ರಾಜ್ಯಾಧ್ಯಕ್ಷರು ನಮಗೆ ಸಿಕ್ಕಿದ್ದು ನಮ್ಮೆಲ್ಲರ ಸೌಭಾಗ್ಯ. ಜಿಲ್ಲೆಗೆ ದೊರಕಿರುವ 40ನೇ ರಾಜ್ಯ ಸಮ್ಮೇಳನ ಯಶಸ್ವಿಯಾಗಿಸಲು ವೈಮನಸ್ಸು ಬಿಟ್ಟು ಪ್ರತಿಯೊಬ್ಬರ ಸಹಭಾಗಿತ್ವ ಬಹಳ ಮುಖ್ಯ ಎಂದರು.

ನಮ್ಮ ಮನವಿಗೆ ಸ್ಪಂದಿಸಿ ಬೀದರ್‌ಗೆ ಸಮ್ಮೇಳನ ನೀಡಿದಕ್ಕೆ ಧನ್ಯವಾದ ತಿಳಿಸಿದ, ಸಂಘದ ಮಾಜಿ ಜಿಲ್ಲಾಧ್ಯಕ್ಷ ಬಾಬುವಾಲಿ ಮಾತನಾಡಿ, ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿ ಹಾಗೂ ಹೊಸ ಜಾಹಿರಾತು ನೀತಿ ಬಗೆಹರಿಸಲು ರಾಜ್ಯ ಸಂಘ ಮುಂದಾಗಬೇಕೆಂದರು.

ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅವರು ವಸತಿ, ಸಾರಿಗೆ, ಆರ್ಥಿಕತೆ ಸೇರಿದಂತೆ ವಿವಿಧ ಸಮಿತಿಗಳ ಹಾಗೂ ಕಾರ್ಯಕ್ರಮದ ತಯಾರಿ ಬಗ್ಗೆ ಸಭೆಗೆ ವಿವರಿಸಿ, ಸಮ್ಮೇಳನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಸಮ್ಮೇಳನದ ಯಶಸ್ವಿಯಾಗಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಮಾಜಿ ಅಧ್ಯಕ್ಷರುಗಳಾದ ಅಶೋಕ್ ಕಾರಂಜಿ, ಬಸವರಾಜ ಕಾಮಶೆಟ್ಟಿ, ಮಾಳಪ್ಪ ಅಡಸಾರೆ ತಿಳಿಸಿದರು.

ಸಂಘದ ಮಾಜಿ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಮಾಜಿ ಜಿಲ್ಲಾಧ್ಯಕ್ಷರಾದ ಸಿದ್ರಾಮಯ್ಯ ಸ್ವಾಮಿ, ಅಶೋಕಕುಮಾರ ಕರಂಜಿ, ಡಿ.ಕೆ ಗಣಪತಿ, ಪತ್ರಕರ್ತರಾದ ಅಪ್ಪಾರಾವ ಸೌದಿ, ಶಶಿ ಪಾಟೀಲ, ಪ್ರಥ್ವಿರಾಜ, ಶಶಿ ಶೆಂಬೆಳ್ಳಿ, ಶಶಿ ಬಂಬುಳಗಿ, ವಿಜಯಕುಮಾರ ಬೆಳ್ದೆ, ದೀಪಕ ಮನ್ನಳ್ಳಿ, ಗೋಪಿಚಂದ್ ತಾಂದಳೆ, ಮಾರೂತಿ ಬಾವಿದೊಡ್ಡಿ, ಶ್ರೀಕಾಂತ ಬಿರಾದಾರ, ನಂದಕುಮಾರ ಕರಂಜೆ, ವಿಜಯಕುಮಾರ ಅಷ್ಟುರೆ, ಅಜಯ ಭೋಸ್ಲೆ, ಬಸವರಾಜ ಪವಾರ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಶಿವಕುಮಾರ ಸ್ವಾಮಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಸಿಬಿಲ್ ಸ್ಕೋರ್ ಚೆನ್ನಾಗಿದ್ದರೂ ಲೋನ್ ರಿಜೆಕ್ಟ್ ಆಗೋದ್ಯಾಕೆ? ಬ್ಯಾಂಕ್‌ ಸಾಲ ನೀಡುವ ಮುನ್ನ ಗಮನಿಸುವ 5 ಪ್ರಮುಖ ಅಂಶಗಳಿವು!

ಸಾಗರದ ‘ಮೀನು ಮಾರುಕಟ್ಟೆ’ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ 129.90 ಲಕ್ಷ ಬಿಡುಗಡೆ

Share. Facebook Twitter LinkedIn WhatsApp Email

Related Posts

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

2 Mins Read

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

2 Mins Read

BREAKING : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ | Ramalingareddy resigns

1 Min Read
Recent News

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

​CBSE 12ನೇ ತರಗತಿ ಮರುಮೌಲ್ಯಮಾಪನ: ಅರ್ಜಿ ಸಲ್ಲಿಸಲು ಇನ್ನು ಒಂದೇ ದಿನ ಬಾಕಿ; ಇಲ್ಲಿದೆ ನೋಂದಣಿ ಪ್ರಕ್ರಿಯೆ!

BREAKING : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ | Ramalingareddy resigns

State News
KARNATAKA

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನವೊಂದು ಸೃಷ್ಟಿಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್…

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

BREAKING : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ | Ramalingareddy resigns

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.