ತುಮಕೂರಿನ ಮಧುಗಿರಿಯಲ್ಲಿ ಹೃದಯಾಘಾತದಿಂದ ನ್ಯಾಯಧೀಶೆ ಕಾಂತಮ್ಮ ಸಾವು

ಮಧುಗಿರಿ: ಮಧುಗಿರಿಯ ಜೆಎಂಎಫ್‌ಸಿ (JMFC) ನ್ಯಾಯಾಲಯದ ನ್ಯಾಯಾಧೀಶೆ ಕಾಂತಮ್ಮ ಅವರು ಹೃದಯಾಘಾತದಿಂದ ನಿಧನರಾದ ಘಟನೆ ಗುರುವಾರ ನಡೆದಿದೆ. ಘಟನೆಯ ವಿವರ: ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರಾದ ನ್ಯಾಯಮೂರ್ತಿ ಕಾಂತಮ್ಮ (43) ಅವರು ಕಳೆದ ಒಂದು ವರ್ಷದಿಂದ ಮಧುಗಿರಿಯಲ್ಲಿ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ (PWD) ವಸತಿ ಗೃಹದಲ್ಲಿ ಅವರು ವಾಸವಿದ್ದರು. ಗುರುವಾರ ವಸತಿ ಗೃಹದಲ್ಲಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಅವರು ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. … Continue reading ತುಮಕೂರಿನ ಮಧುಗಿರಿಯಲ್ಲಿ ಹೃದಯಾಘಾತದಿಂದ ನ್ಯಾಯಧೀಶೆ ಕಾಂತಮ್ಮ ಸಾವು