ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠದ ಸ್ವಾಮೀಜಿಗಳಾದ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜಜೀಯರ್ ಅವರಿಗೆ ಇದೇ 30ರಂದು ತುಮಕೂರು ವಿ.ವಿ. ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ.  ಇದರ ಅಂಗವಾಗಿ ನಗರದ ಚೌಡಯ್ಯ ಸಭಾಂಗಣದಲ್ಲಿ ಅಂದು  ಬೆಳಗ್ಗೆ 11 ಗಂಟೆಗೆ ವಿಶೇಷ ಸಮಾರಂಭ ಏರ್ಪಡಿಸಲಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿದೆ ರಾಬರಿ, ಮರ್ಡರ್ ಕೇಸ್‌: ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ರು, ಪ್ರಕರಣ ನಿಲ್ಲುತ್ತಿಲ್ಲ- ಪೊಲೀಸ್‌ ಆಯುಕ್ತ ಪ್ರತಾಪ್ ರೆಡ್ಡಿ

 

ರಾಜ್ಯಪಾಲ ಥಾವರಚಂದ್ ಗೆಹಲೋತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವರೂ ಸಮ ಕುಲಾಧಿಪತಿಗಳೂ ಆದ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜತೆಗೆ, ಕುಲಪತಿ ಪ್ರೊ.ವೆಂಕಟೇಶ್ವರಲು ಮತ್ತು ಕುಲಸಚಿವ ಪ್ರೊ.ನಿರ್ಮಲ್ ರಾಜು ಕೂಡ ಸಮಾರಂಭದಲ್ಲಿ ಇರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share.
Exit mobile version