ಕಲಬುರ್ಗಿ : ಕಲ್ಬುರ್ಗಿಯಲ್ಲಿ ಕುರಿ ಕಾಯುವ ಬೆಳೆ ಕುರಿಗಾಹಿಯ ಮೇಲೆ ಏಕಾಏಕಿ ಚಿರತೆಯೊಂದು ದಾಳಿ ಮಾಡಿದೆ. ಚಿರತೆಯ ದಾಳಿಯಿಂದ ಕುರಿಗಾಹಿ ನಿಂಗಪ್ಪ ಪೂಜಾರಿ ಸ್ಥಿತಿ ಗಂಭೀರವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ರೇವಣ್ಣೂರು ಬಳಿ ಈ ಒಂದು ಘಟನೆ ನಡೆದಿದೆ.
ಕುರಿಗಳನ್ನು ಮೇಯಿಸುತ್ತಿದ್ದ ನಿಂಗಪ್ಪನ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಗಾಯಾಳು ನಿಂಗಪ್ಪಗೆ ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿಗೆ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಚಿರತೆ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.