BREAKING: ಕನಕಪುರದಲ್ಲಿ ಘೋರ ದುರಂತ: ನಿರ್ಮಾಣ ಹಂತದ ಕಮಾನು ಕುಸಿದು ಓರ್ವ ಸಾವು, ಹಲವರಿಗೆ ಗಾಯ

ರಾಮನಗರ: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮತಕ್ಷೇತ್ರ ಕನಕಪುರದಲ್ಲಿ ಘೋರ ದುರಂತವೊಂದು ನಡೆದಿದೆ. ಅದೇ ನಿರ್ಮಾಣ ಹಂತದ ಆರ್ಚ್ ಕುಸಿತಗೊಂಡ ಪರಿಣಾಮ ಅದರಡಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಕನಕಪುರದ ರೂರಲ್ ಕಾಲೇಜಿನಲ್ಲಿ ನಿರ್ಮಾಣ ಹಂತದ ಆರ್ಚ್ ಏಕಾಏಕಿ ಕುಸಿತಗೊಂಡಿದೆ. ಈ ಘಟನೆಯಲ್ಲಿ ಆರ್ಚ್ ಅಡಿಯಲ್ಲಿ ಸಿಲುಕಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರ್ಚ್ ಕುಸಿತದಿಂದ ಅವಶೇಷಗಳಡಿ ಇನ್ನೂ … Continue reading BREAKING: ಕನಕಪುರದಲ್ಲಿ ಘೋರ ದುರಂತ: ನಿರ್ಮಾಣ ಹಂತದ ಕಮಾನು ಕುಸಿದು ಓರ್ವ ಸಾವು, ಹಲವರಿಗೆ ಗಾಯ