Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Teacher’s Day 2025: ‘ಶಿಕ್ಷಕರ ದಿನಾಚರಣೆ’ಯಂದು ಕಹಿ ಸತ್ಯ: ಶೇ 42 ರಷ್ಟು ಭಾರತೀಯ ಶಿಕ್ಷಕರಿಗೆ ಖಾಯಂ ಉದ್ಯೋಗವಿಲ್ಲ!

05/09/2025 1:18 PM

BREAKING : ಧರ್ಮಸ್ಥಳ ಕೇಸ್ : ವಸಂತ್ ಗಿಳಿಯಾರ್ ವಿರುದ್ಧ ಮತ್ತೊಂದು `FIR’ ದಾಖಲು.!

05/09/2025 1:18 PM

BREAKING : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ `ಬ್ಯಾಲೆಟ್ ಪೇಪರ್’ ಬಳಕೆ : DCM ಡಿ.ಕೆ ಶಿವಕುಮಾರ್

05/09/2025 1:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ಡಿಸಿಎಂ DKS ಸೂಚನೆ
KARNATAKA

ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ಡಿಸಿಎಂ DKS ಸೂಚನೆ

By kannadanewsnow0911/10/2024 3:20 PM

ಬೆಂಗಳೂರು: “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲರೂ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದಂತ ಅವರು, ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವ ತಿಳಿಸಲು, ಸರ್ಕಾರಿ ಹಾಗೂ ಖಾಸಗಿ ಶಾಲೆ ಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಇದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೆಂಗಳೂರು ನಗರದಲ್ಲಿ ಶೇ.50 ರಷ್ಟು ಮಂದಿ ರಾಜ್ಯದ ಹೊರಗಿನವರು. ಅವರುಗಳು ಕನ್ನಡ ಕಲಿಯಲು ಅವಕಾಶ ಕಲ್ಪಿಸಬೇಕಿದೆ. ಈ ದೃಷ್ಟಿಯಿಂದ ವಿಜಯದಶಮಿ ದಿನದಂದು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ ಎಂದರು.

“ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡದಿದ್ದರೂ, ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು” ಎಂದು ತಿಳಿಸಿದರು.

“ಈ ಬಾರಿ ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡ ಕಲಿಯಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ” ಎಂದು ತಿಳಿಸಿದರು.

ಬೆದರಿಕೆ ಹಾಕಿದರೆ ಕಾನೂನು ಕ್ರಮ:

“ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ಯಾವುದೇ ಕನ್ನಡಪರ ಸಂಘಟನೆ ಅಥವಾ ಇತರರು ಯಾವುದೇ ಸಂಸ್ಥೆಗೆ ಆಚರಣೆ ಬಗ್ಗೆ ಬೆದರಿಕೆ ಹಾಕುವಂತಿಲ್ಲ. ತೊಂದರೆ ನೀಡುವಂತಿಲ್ಲ. ಒಂದು ವೇಳೆ ತೊಂದರೆ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ” ಎಂದು ಎಚ್ಚರಿಕೆ ನೀಡಿದರು.

ನಿಮ್ಮ ನೇತೃತ್ವದಲ್ಲಿ ಕೊರೋನಾ ಹಗರಣ ತನಿಖೆಗೆ ಉಪ ಸಮಿತಿ ರಚನೆಯಾಗಿದ್ದು, ಯಾವಾಗಿನಿಂದ ತನಿಖೆ ಆರಂಭಿಸುತ್ತೀರಿ ಎಂದು ಕೇಳಿದಾಗ, “ಗುರುವಾರದಂದು ಈ ಬಗ್ಗೆ ತೀರ್ಮಾನವಾಗಿದೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ಕೇಂದ್ರದಿಂದ ಜಿಎಸ್ ಟಿ ಪಾಲು ಹಂಚಿಕೆ ಬಗ್ಗೆ ಕೇಳಿದಾಗ, “ವಿಜಯದಶಮಿ ನಂತರ ಈ ವಿಚಾರವಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ರಾಜ್ಯದ ಜನತೆಗೆ ವಿಜಯ ದಶಮಿ ಶುಭಾಶಯಗಳು:

“ಕರ್ನಾಟಕ ರಾಜ್ಯದ ಜನತೆಗೆ ವಿಜಯ ದಶಮಿ ಹಬ್ಬದ ಶುಭಾಶಯಗಳು. ಈ ಬಾರಿ ಮೈಸೂರು ದಸರಾ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಮೈಸೂರು ದಸರಾ ಕಾರ್ಯಕ್ರಮಕ್ಕೆ ಜನ ಸಾಗರವೇ ಹರಿದುಬಂದಿದೆ. ಮೈಸೂರು ದಸರಾ ವೀಕ್ಷಣೆಗೆ ಆಗಮಿಸಿರುವ ಪ್ರತಿಯೊಬ್ಬರಿಗೂ ಅಭಿನಂದನೆಗಳು” ಎಂದು ಶುಭ ಕೋರಿದರು.

ಮತ್ತೆ ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ಬಿಡುಗಡೆಯಲ್ಲಿ ಅನ್ಯಾಯ: ಕನ್ನಡಿಗರನ್ನು ಕೆಣಕುತ್ತಿದೆ: ಡಿ.ಕೆ ಸುರೇಶ್ ಆಕ್ರೋಶ

BREAKING: ಜಪಾನ್ ನ ‘ನಿಹಾನ್ ಹಿಡಾಂಕ್ಯೊ’ಗೆ ಪ್ರತಿಷ್ಠಿತ ‘2024ರ ನೊಬೆಲ್ ಶಾಂತಿ ಪ್ರಶಸ್ತಿ’ ಘೋಷಣೆ | 2024 Nobel Peace Prize

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳ ಕೇಸ್ : ವಸಂತ್ ಗಿಳಿಯಾರ್ ವಿರುದ್ಧ ಮತ್ತೊಂದು `FIR’ ದಾಖಲು.!

05/09/2025 1:18 PM1 Min Read

BREAKING : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ `ಬ್ಯಾಲೆಟ್ ಪೇಪರ್’ ಬಳಕೆ : DCM ಡಿ.ಕೆ ಶಿವಕುಮಾರ್

05/09/2025 1:14 PM1 Min Read

BREAKING : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

05/09/2025 12:46 PM1 Min Read
Recent News

Teacher’s Day 2025: ‘ಶಿಕ್ಷಕರ ದಿನಾಚರಣೆ’ಯಂದು ಕಹಿ ಸತ್ಯ: ಶೇ 42 ರಷ್ಟು ಭಾರತೀಯ ಶಿಕ್ಷಕರಿಗೆ ಖಾಯಂ ಉದ್ಯೋಗವಿಲ್ಲ!

05/09/2025 1:18 PM

BREAKING : ಧರ್ಮಸ್ಥಳ ಕೇಸ್ : ವಸಂತ್ ಗಿಳಿಯಾರ್ ವಿರುದ್ಧ ಮತ್ತೊಂದು `FIR’ ದಾಖಲು.!

05/09/2025 1:18 PM

BREAKING : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ `ಬ್ಯಾಲೆಟ್ ಪೇಪರ್’ ಬಳಕೆ : DCM ಡಿ.ಕೆ ಶಿವಕುಮಾರ್

05/09/2025 1:14 PM

Passport: ಪಾಸ್‌ಪೋರ್ಟ್ ಶ್ರೇಯಾಂಕ 2025: ಅತ್ಯಂತ ಬಲಿಷ್ಠ ಯುಎಇ, ಅತಿ ದುರ್ಬಲ ಪಾಕಿಸ್ತಾನ… ಭಾರತದ ಸ್ಥಾನ ಯಾವುದು ಗೊತ್ತೇ?

05/09/2025 1:10 PM
State News
KARNATAKA

BREAKING : ಧರ್ಮಸ್ಥಳ ಕೇಸ್ : ವಸಂತ್ ಗಿಳಿಯಾರ್ ವಿರುದ್ಧ ಮತ್ತೊಂದು `FIR’ ದಾಖಲು.!

By kannadanewsnow5705/09/2025 1:18 PM KARNATAKA 1 Min Read

ಮೈಸೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಕಾರ್ಯಕರ್ತ ವಸಂತ್ ಗಿಳಿಯಾರ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ.…

BREAKING : ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ `ಬ್ಯಾಲೆಟ್ ಪೇಪರ್’ ಬಳಕೆ : DCM ಡಿ.ಕೆ ಶಿವಕುಮಾರ್

05/09/2025 1:14 PM

BREAKING : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

05/09/2025 12:46 PM

SHOCKING : ಶಿರಸಿಯಲ್ಲಿ ಘೋರ ದುರಂತ : ‘ಏರ್ ಗನ್’ ನಿಂದ ಅಣ್ಣನ ಮೇಲೆ ತಮ್ಮನಿಂದ ಫೈರಿಂಗ್ , ಸ್ಥಳದಲ್ಲೇ ಬಾಲಕ ಸಾವು..!

05/09/2025 12:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.