ಕನ್ನಡ ರಾಜ್ಯೋತ್ಸವ ಪೂರ್ವಬಾವಿ ಸಭೆ: ಸಕಲ ಸಿದ್ದತೆಗೆ ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಸೂಚನೆ

ಶಿವಮೊಗ್ಗ : ನವೆಂಬರ್ 1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಶೀಲ್ದಾರರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, … Continue reading ಕನ್ನಡ ರಾಜ್ಯೋತ್ಸವ ಪೂರ್ವಬಾವಿ ಸಭೆ: ಸಕಲ ಸಿದ್ದತೆಗೆ ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ಸೂಚನೆ