ಹಾವೇರಿ : ಕನ್ನಡ ಸಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ -2022ರ ಮಾಹೆಯ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸೆಪ್ಟಂಬರ್ 15ರವರೆಗೆ ದಂಡ ಶುಲ್ಕ ರೂ.50 ಹೆಚ್ಚುವರಿ ಪಾವತಿಸಿ ಅರ್ಜಿ ಸಲ್ಲಿಸಬಹುದು. ರೂ.25 ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆ(ಬೆಂಗಳೂರು)ಯಲ್ಲಿ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂ.ಮನಿಯಾರ್ಡ್ರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಶಿವಮೊಗ್ಗ: ಜೋಗ್ ಜಲಪಾತದ ಬಳಿಯ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಆನ್ಲೈನ್ನಲ್ಲಿ ಅರ್ಜಿ ಪಡೆದವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25 ಪ್ರತ್ಯೇಕವಾಗಿ ಪಾವತಿಸಬೇಕು. ಹೆಚ್ಚಿನ ವಿವರಗಳಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18. ದೂ.ಸಂ.080-26623584, 26612991, 22423867, 26672992, 8660777643 ಸಂಪರ್ಕಿಸಲು ಕೋರಲಾಗಿದೆ.
ರೈಲ್ವೆ ಪ್ರಯಾಣಿಕರೇ ಗಮನಿಸಿ: ಹೊಸೂರು ಕಾಯ್ದಿರಿಸುವಿಕೆ ಕೇಂದ್ರದ 2ನೇ ಪಾಳಿ ಕಾರ್ಯನಿರ್ವಹಣೆ ಪುನಾರಂಭ