ಬೆಂಗಳೂರು : ರಾಜ್ಯದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಿಗರು ಕಾಂಗ್ರೆಸ್ ಸರ್ಕಾರದಿಂದ ಬದುಕಿನ ಗ್ಯಾರಂಟಿಯೇ ಕಳೆದುಕೊಂಡಿದ್ದಾರೆ. ನೇಹಾ ಕೊಲೆ ಪ್ರಕರಣ ಪ್ರಸ್ತಾಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕೊಲೆ, ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ನಡೆದಿದೆ. ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಕೊಡಿಸಲಿಲ್ಲ. ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಇಳಿಸಿದ್ರು. ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹರಿಸಿ ಹಲ್ಲೆ ನಡೆಸಿದ್ದಾರೆ. ನಟಿ ಹರ್ಷಿಕ ಪೂಣಚ್ಚ ಮೇಲೆ ನಡೆಸಿ ದರೋಡೆ ಮಾಡಿದ್ದಾರೆ. ರಾಜ್ಯದ ಜನರಿಗೆ ರಕ್ಷಣೆ ಇಲ್ಲದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ. ಇದೊಂದು ಕ್ರೂರ ಸರ್ಕಾರ, ರಾಜ್ಯದಲ್ಲಿ ಜನರಿಗೆ ಕುಡಿಯುವ ನೀರಿಲ್ಲದ ಸ್ಥಿತಿ , ಜನರು ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಾಸ ಕಳೆದುಕೊಲ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.