ಬೆಂಗಳೂರು : ಕಾಂತಾರ ಚಿತ್ರ ವಿವಾದದ ಕಿಡಿ ಹೊತ್ತಿಸಿದ ನಟ ಚೇತನ್ಗೆ ಮಸಿ ಬಳಿಯಲು ತೆರಳುತ್ತಿದ್ದ 12 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಶೇಷಾದ್ರಿಪುರಂನಲ್ಲಿರುವ ನಟ ಚೇತನ್ ಮನೆ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ಈ ವೇಳೆ ಮುಖಕ್ಕೆ ಮಸಿ ಬಳಿಯಲು ಮುಂದಾದಾಗ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ನಟ ಚೇತನ್ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಹಿಂದೂ ಯುವಸೇನೆ ಆಗ್ರಹಿಸಿದೆ.ಇನ್ನು ಮಡಿಕೇರಿಯಲ್ಲಿ ನಟ ಚೇತನ್ ವಿರುದ್ಧ ಹಿಂದೂ ಸೇನೆ ಡಿ.ವೈಎಸ್ಪಿಗೆ ದೂರು ನೀಡಿದೆ.
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ.ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ವಾʼ? ಎಂದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿರೋ ಕಾಂತಾರಾ ಗೆ ನಟ ಚೇತನ್ ಕಿಡಿ ಕಾರಿದ್ದಾರೆ.
ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಅಲ್ಲಗೆಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ. ಎಲ್ಲೆಡೆ ಕಿಡಿಕಾರಿದ್ದಾರೆ., ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ನಟ ಚೇತನ್ ಸ್ಪಷ್ಟನೆ ನೀಡುತ್ತಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಭಾರತದಲ್ಲಿ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಕಾಂತಾರ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಹೊಸ ವಿವಾದದ ಸೃಷ್ಠಿಯಾಗಿದೆ.
.