Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಸ್ನೇಹಿಯತ್ತ ‘KEA’: ನೈಜ ಮಾಹಿತಿಗೆ ʼವಿಕಸನ’ ಯೂಟ್ಯೂಬ್, ಎಕ್ಸ್‌ ಅಕೌಂಟ್‌ ನೋಡಿ

17/06/2025 6:04 PM

ಬಿಸಿಸಿಐ ‘ಟೆಸ್ಟ್ ನಾಯಕತ್ವ’ದ ಪ್ರಸ್ತಾಪವನ್ನ ನಾನೇ ನಿರಾಕರಿಸಿದ್ದೇನೆ : ‘ಜಸ್ಪ್ರೀತ್ ಬುಮ್ರಾ’ ಸ್ಪಷ್ಟನೆ

17/06/2025 6:00 PM

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ: ಸಿಎಂ ಸಿದ್ದರಾಮಯ್ಯ
KARNATAKA

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ: ಸಿಎಂ ಸಿದ್ದರಾಮಯ್ಯ

By kannadanewsnow0921/11/2024 3:40 PM

ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.

ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.

ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

ರಾಜ್ಯದಲ್ಲಿ ಒಟ್ಟು 16 ಮಿಲ್ಕ್ ಯೂನಿಯನ್ಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ನವದೆಹಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದರು.

ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಭೀಮಣ್ಣ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : `PM ಆವಾಸ್’ ಯೋಜನೆಗೆ ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ!

ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸರ್ಕಾರದ ಈ ಯೋಜನೆಗಳ ಸೌಲಭ್ಯ ಪಡೆಯಬಹುದು!

Share. Facebook Twitter LinkedIn WhatsApp Email

Related Posts

ಜನಸ್ನೇಹಿಯತ್ತ ‘KEA’: ನೈಜ ಮಾಹಿತಿಗೆ ʼವಿಕಸನ’ ಯೂಟ್ಯೂಬ್, ಎಕ್ಸ್‌ ಅಕೌಂಟ್‌ ನೋಡಿ

17/06/2025 6:04 PM2 Mins Read

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM1 Min Read

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM2 Mins Read
Recent News

ಜನಸ್ನೇಹಿಯತ್ತ ‘KEA’: ನೈಜ ಮಾಹಿತಿಗೆ ʼವಿಕಸನ’ ಯೂಟ್ಯೂಬ್, ಎಕ್ಸ್‌ ಅಕೌಂಟ್‌ ನೋಡಿ

17/06/2025 6:04 PM

ಬಿಸಿಸಿಐ ‘ಟೆಸ್ಟ್ ನಾಯಕತ್ವ’ದ ಪ್ರಸ್ತಾಪವನ್ನ ನಾನೇ ನಿರಾಕರಿಸಿದ್ದೇನೆ : ‘ಜಸ್ಪ್ರೀತ್ ಬುಮ್ರಾ’ ಸ್ಪಷ್ಟನೆ

17/06/2025 6:00 PM

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM
State News
KARNATAKA

ಜನಸ್ನೇಹಿಯತ್ತ ‘KEA’: ನೈಜ ಮಾಹಿತಿಗೆ ʼವಿಕಸನ’ ಯೂಟ್ಯೂಬ್, ಎಕ್ಸ್‌ ಅಕೌಂಟ್‌ ನೋಡಿ

By kannadanewsnow0917/06/2025 6:04 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆರಂಭಿಸಿರುವ ಕೆಇಎ ಬಾಟ್‌ (KEA BOT) ಕೇವಲ ನೂರು ದಿನಗಳಲ್ಲಿ 5.15 ಲಕ್ಷ ಪ್ರಶ್ನೆಗಳನ್ನು ಎದುರಿಸಿ,…

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.