Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಯಭಾರ ಕಚೇರಿ ಪ್ರತಿಭಟನೆ ವಿವಾದ: ಭಾರತದ ಹೇಳಿಕೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ ಬಾಂಗ್ಲಾದೇಶ

22/12/2025 8:21 AM

‘ಲಿವ್ ಇನ್ ರಿಲೇಷನ್ ಶಿಪ್ ನಲ್ಲಿರುವ ಜನರು ಜವಾಬ್ದಾರಿ ತೆಗೆದುಕೊಳ್ಳಲು ಸಿದ್ಧರಿಲ್ಲ’: ಮೋಹನ್ ಭಾಗವತ್

22/12/2025 8:10 AM

BREAKING : ಹುಬ್ಬಳ್ಳಿಯಲ್ಲಿ ತಂದೆಯಿಂದಲೇ ಗರ್ಭಿಣಿ ಮಗಳ ಮರ್ಯಾದಾ ಹತ್ಯೆ ಕೇಸ್ : ಮೂವರು ಅರೆಸ್ಟ್!

22/12/2025 7:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025 : `ಲಾಂಛನ’ ಬಿಡುಗಡೆ‌ ಮಾಡಿದ CM ಸಿದ್ದರಾಮಯ್ಯ
KARNATAKA

BIG NEWS : ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025 : `ಲಾಂಛನ’ ಬಿಡುಗಡೆ‌ ಮಾಡಿದ CM ಸಿದ್ದರಾಮಯ್ಯ

By kannadanewsnow5724/12/2024 5:52 AM

ಬೆಂಗಳೂರು : ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಕರ್ನಾಟಕ ಕ್ರೀಡಾಕೂಟ-2025 ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ‌ ಮಾಡಿದ್ದಾರೆ.

ಕರ್ನಾಟಕ ಕ್ರೀಡಾಕೂಟ-2025ರ ಲಾಂಛನವನ್ನು ಬಿಡುಗಡೆಗೊಳಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ರೀಡಾಕೂಟದ ಲೋಗೋದಲ್ಲಿನ ಯಕ್ಷಗಾನ ಕಿರೀಟವು ಕ್ರೀಡಾಕೂಟ ನಡೆಯುವ ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು, ತಿಳಿನೀಲಿ ಬಣ್ಣವು ಕಡಲಿನ ಅಗಾಧತೆಯನ್ನು, ಜತೆಗೆ ಸೋಲು- ಗೆಲುವುಗಳಲ್ಲಿ ಕ್ರೀಡಾಪಟುಗಳ ಶಾಂತತೆ ಮತ್ತು ಶ್ರಮವನ್ನು ಪ್ರತಿನಿಧಿಸುವ ಈ ಲೋಗೋ ಅರ್ಥಪೂರ್ಣವಾಗಿದೆ ಎಂದರು.

ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು, ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತವು ಕ್ರೀಡಾಕೂಟದ ವ್ಯವಸ್ಥಿತ ಆಯೋಜನೆ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು. ಕರ್ನಾಟಕ ಕ್ರೀಡಾಕೂಟ -2025 ಅನ್ನು ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿದೆ.

ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ಜನವರಿ 17ರಂದು ಮಂಗಳೂರಿನಲ್ಲಿ, ಸಮಾರೋಪ ಸಮಾರಂಭ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ. ಸುಮಾರು 25 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು, ಕ್ರೀಡಾಕೂಟದ ಯಶಸ್ವಿ ಆಯೋಜನೆಗಾಗಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರೀಡಾಕೂಟದಲ್ಲಿ 3,750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದು, ಊಟ – ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಗೃಹಸಚಿವರಾದ ಡಾ|| ಪರಮೇಶ್ವರ್, ಇಂಧನ ಸಚಿವರಾದ ಕೆ ಜೆ ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಕೆ. ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BIG NEWS : ಜ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025 : `ಲಾಂಛನ' ಬಿಡುಗಡೆ‌ ಮಾಡಿದ CM ಸಿದ್ದರಾಮಯ್ಯ Karnataka Games 2025: CM Siddaramaiah releases 'logo' from Jan 17 to 23
Share. Facebook Twitter LinkedIn WhatsApp Email

Related Posts

BREAKING : ಹುಬ್ಬಳ್ಳಿಯಲ್ಲಿ ತಂದೆಯಿಂದಲೇ ಗರ್ಭಿಣಿ ಮಗಳ ಮರ್ಯಾದಾ ಹತ್ಯೆ ಕೇಸ್ : ಮೂವರು ಅರೆಸ್ಟ್!

22/12/2025 7:57 AM1 Min Read

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಇಂದು ಕೋರ್ಟ್ ತೀರ್ಪಿನ ಮೇಲೆ ಭೈರತಿ ಬಸವರಾಜ್ ಬೇಲ್ ಭವಿಷ್ಯ ನಿರ್ಧಾರ!

22/12/2025 7:37 AM1 Min Read

BREAKING : ಶೀಘ್ರವೆ ಹೊಸ ಜಿಲ್ಲೆಯಾಗಿ ಚಿಕ್ಕೋಡಿ ಘೋಷಣೆ : ಸಚಿವ ಹೆಚ್.ಕೆ ಪಾಟೀಲ್ ಸುಳಿವು

22/12/2025 7:29 AM1 Min Read
Recent News

ರಾಯಭಾರ ಕಚೇರಿ ಪ್ರತಿಭಟನೆ ವಿವಾದ: ಭಾರತದ ಹೇಳಿಕೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ ಬಾಂಗ್ಲಾದೇಶ

22/12/2025 8:21 AM

‘ಲಿವ್ ಇನ್ ರಿಲೇಷನ್ ಶಿಪ್ ನಲ್ಲಿರುವ ಜನರು ಜವಾಬ್ದಾರಿ ತೆಗೆದುಕೊಳ್ಳಲು ಸಿದ್ಧರಿಲ್ಲ’: ಮೋಹನ್ ಭಾಗವತ್

22/12/2025 8:10 AM

BREAKING : ಹುಬ್ಬಳ್ಳಿಯಲ್ಲಿ ತಂದೆಯಿಂದಲೇ ಗರ್ಭಿಣಿ ಮಗಳ ಮರ್ಯಾದಾ ಹತ್ಯೆ ಕೇಸ್ : ಮೂವರು ಅರೆಸ್ಟ್!

22/12/2025 7:57 AM

ಅತ್ತ ಅಮೇರಿಕಾವೂ ಇಲ್ಲ, ಇತ್ತ ಕೆಲಸವೂ ಇಲ್ಲ: ವೀಸಾ ವಿಳಂಬದಿಂದ ಭಾರತೀಯ ಉದ್ಯೋಗಿಗಳು ಕಂಗಾಲು!

22/12/2025 7:53 AM
State News
KARNATAKA

BREAKING : ಹುಬ್ಬಳ್ಳಿಯಲ್ಲಿ ತಂದೆಯಿಂದಲೇ ಗರ್ಭಿಣಿ ಮಗಳ ಮರ್ಯಾದಾ ಹತ್ಯೆ ಕೇಸ್ : ಮೂವರು ಅರೆಸ್ಟ್!

By kannadanewsnow0522/12/2025 7:57 AM KARNATAKA 1 Min Read

ಹುಬ್ಬಳ್ಳಿ : ಪಾಲಕರ ವಿರೋಧದ ನಡುವೆಯೂ ಅನ್ಯ ಜಾತಿ ಯುವಕನೊಂದಿಗೆ ಮದುವೆಯಾಗಿ ಗರ್ಭಿಣಿಯಾಗಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಕೊಡಲಿಯಿಂದ…

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ಇಂದು ಕೋರ್ಟ್ ತೀರ್ಪಿನ ಮೇಲೆ ಭೈರತಿ ಬಸವರಾಜ್ ಬೇಲ್ ಭವಿಷ್ಯ ನಿರ್ಧಾರ!

22/12/2025 7:37 AM

BREAKING : ಶೀಘ್ರವೆ ಹೊಸ ಜಿಲ್ಲೆಯಾಗಿ ಚಿಕ್ಕೋಡಿ ಘೋಷಣೆ : ಸಚಿವ ಹೆಚ್.ಕೆ ಪಾಟೀಲ್ ಸುಳಿವು

22/12/2025 7:29 AM

ಈ ಹೋಟೆಲ್ ‘ನಾನ್ ವೆಜ್’ ಊಟದ ರುಚಿಗೆ 5*, 4*, 3* ಹೋಟೆಲ್ ಸರಿ ಸಾಟಿಯೇ ಇಲ್ಲ!

22/12/2025 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.