ಬೆಂಗಳೂರು: ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಜನವರಿ 22ರಂದು ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.
ಅವರು ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು ನಾಳೆ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ನೀಡುವುದಿಲ್ಲ, ಬದಲಿಗೆ ರಾಜ್ಯದ ಮುಜರಾಯಿ ಇಲಾಖೆಯಲ್ಲಿನ ದೇವಸ್ಥಾನಗಳಲ್ಲಿ ಪೂಜಾ, ಕೈಕಂರ್ಯವನ್ನು ನೇರವೇರಲಿದೆ ಅಂತ ತಿಳಿಸಿದರು. ಇನ್ನೂ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಅವರು ಹೇಳಿದರು. ಕರ್ನಾಟಕದಲ್ಲಿಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಾ ಎಂಬ ಪ್ರಶ್ನೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿದೆ ಮೂಡಿತ್ತು. ಈ ಪ್ರಶ್ನೆಗೆ ಈಗ ಉತ್ತರ ದೊರೆತಿದೆ.