Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಶುರು
KARNATAKA

ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಶುರು

By kannadanewsnow0702/03/2026 5:33 AM
Recruitment of 56432 posts
Recruitment of 56432 posts

ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿದ್ದ ರಾಜ್ಯದ ಲಕ್ಷಾಂತರ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳಿಂದ ನಾನಾ ಕಾರಣಗಳಿಂದ, ವಿಶೇಷವಾಗಿ ಮೀಸಲಾತಿ ಗೊಂದಲಗಳಿಂದ ನೆನೆಗುದಿಗೆ ಬಿದ್ದಿದ್ದ ಬರೋಬ್ಬರಿ 56,432 ನೇರ ನೇಮಕಾತಿ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ತೋರಿದೆ. ಮುಂದಿನ 30 ದಿನಗಳ ಒಳಗಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಎಲ್ಲಾ ಇಲಾಖೆಗಳು ಹಾಗೂ ನೇಮಕಾತಿ ಪ್ರಾಧಿಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ 2022ರಲ್ಲಿ ತರಲಾಗಿದ್ದ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ 27, 2025 ರಂದು ಮಧ್ಯಂತರ ಆದೇಶ ನೀಡಿದ್ದ ಮಾನ್ಯ ಉಚ್ಚ ನ್ಯಾಯಾಲಯವು, ಹೆಚ್ಚಿಸಿದ ಮೀಸಲಾತಿ ಆಧಾರದ ಮೇಲೆ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ತಡೆ ನೀಡಿತ್ತು. ಇದರಿಂದಾಗಿ ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಫೆಬ್ರವರಿ 27, 2026 ರಂದು ಹೊಸ ಆದೇಶ (ಸಂಖ್ಯೆ: ಸಿಆಸುಇ 01 ಸೇಹಿಮ 2026) ಹೊರಡಿಸುವ ಮೂಲಕ ಈ ಕಾನೂನು ತೊಡಕಿಗೆ ತಾತ್ಕಾಲಿಕ ಪರಿಹಾರ ಕಂಡುಕೊಂಡಿದೆ.

ಹೊಸ ಆದೇಶದಲ್ಲಿ ಏನಿದೆ? ನೇಮಕಾತಿ ಹೇಗೆ ನಡೆಯಲಿದೆ?
ನಿರುದ್ಯೋಗಿ ಅಭ್ಯರ್ಥಿಗಳ ಹಿತದೃಷ್ಟಿ ಹಾಗೂ ಆಡಳಿತಾತ್ಮಕ ವ್ಯವಸ್ಥೆಯ ಮೇಲಾಗುತ್ತಿರುವ ಪರಿಣಾಮವನ್ನು ಅರಿತ ಸರ್ಕಾರ, ನೇಮಕಾತಿ ಪ್ರಕ್ರಿಯೆಯನ್ನು ತುರ್ತಾಗಿ ಮುಂದುವರೆಸಲು ಈ ಕೆಳಗಿನ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ:

1. ಹಳೆಯ ಮೀಸಲಾತಿ ಪದ್ಧತಿಯಂತೆ ಹೊಸ ಅಧಿಸೂಚನೆ: ಹೈಕೋರ್ಟ್‌ನ ಅಂತಿಮ ತೀರ್ಪಿಗೆ ಒಳಪಟ್ಟು, 27.11.2025ರ ನಂತರ ಹೊರಡಿಸುವ ಯಾವುದೇ ಹೊಸ ನೇರ ನೇಮಕಾತಿ ಅಧಿಸೂಚನೆಗಳಿಗೆ 2022ರ ಕಾಯ್ದೆಗೂ ಮುನ್ನ ಜಾರಿಯಲ್ಲಿದ್ದ (ಶೇ. 50ರ ಮಿತಿಯೊಳಗಿನ) ಮೀಸಲಾತಿ ಆದೇಶ ಹಾಗೂ ರೋಸ್ಟರ್ ಬಿಂದುಗಳನ್ನು ಅನ್ವಯಿಸಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಅಂದರೆ ಹಳೆಯ ರೋಸ್ಟರ್ ಎಲ್ಲಿಗೆ ನಿಂತಿತ್ತೋ, ಅಲ್ಲಿಂದಲೇ ಮುಂದಿನ ಬಿಂದುವಿನಿಂದ ಆಯ್ಕೆ ಮಾಡಬೇಕು.

karnataka-govt-jobs-56432-posts-recruitment-new-guidelines-reservation
karnataka-govt-jobs-56432-posts-recruitment-new-guidelines-reservation

2. ಹಳೆಯ ನೇಮಕಾತಿಗಳು ಯಥಾಸ್ಥಿತಿ ಮುಂದುವರಿಕೆ:
ಹೈಕೋರ್ಟ್ ಆದೇಶಕ್ಕೂ ಮುನ್ನ (27.11.2025 ಕ್ಕಿಂತ ಹಿಂದೆ) ಅಧಿಸೂಚನೆ ಹೊರಡಿಸಲಾಗಿರುವ ಪ್ರಕ್ರಿಯೆಗಳು ಯಾವುದೇ ಅಡೆತಡೆಯಿಲ್ಲದೆ ಯಥಾಪ್ರಕಾರ ಮುಂದುವರಿಯಲಿವೆ. ಆದರೆ, ಈ ಹುದ್ದೆಗಳಿಗೆ ನೀಡುವ ನೇಮಕಾತಿ ಆದೇಶದಲ್ಲಿ “ಈ ನೇಮಕಾತಿಯು ಮಾನ್ಯ ಉಚ್ಚ ನ್ಯಾಯಾಲಯದ ಅಂತಿಮ ಆದೇಶಕ್ಕೊಳಪಟ್ಟಿರುತ್ತದೆ” ಎಂದು ಸ್ಪಷ್ಟವಾಗಿ ನಮೂದಿಸುವುದು ಕಡ್ಡಾಯವಾಗಿದೆ.

3. ಶೇಕಡಾ 6ರಷ್ಟು ಹುದ್ದೆಗಳ ಕಾಯ್ದಿರಿಸುವಿಕೆ:
ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳದ ಪ್ರಕರಣವು ನ್ಯಾಯಾಲಯದಲ್ಲಿರುವುದರಿಂದ, ಆಯ್ಕೆ ಇಲಾಖೆಗಳು ಭವಿಷ್ಯದ ನೇಮಕಾತಿಗಳಲ್ಲಿ ಶೇ. 6ರಷ್ಟು ಹುದ್ದೆಗಳನ್ನು ಕಾಯ್ದಿರಿಸಬೇಕು (ಪರಿಶಿಷ್ಟ ಜಾತಿಗೆ ಶೇ. 2 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 4) ಎಂದು ಸರ್ಕಾರ ಆದೇಶಿಸಿದೆ. ನ್ಯಾಯಾಲಯದ ಅಂತಿಮ ತೀರ್ಪಿನ ಆಧಾರದ ಮೇಲೆ ಈ ಕಾಯ್ದಿರಿಸಿದ ಹುದ್ದೆಗಳ ಭವಿಷ್ಯ ನಿರ್ಧಾರವಾಗಲಿದೆ.

30 ದಿನಗಳ ಗಡುವು: ಅಭ್ಯರ್ಥಿಗಳಿಗೆ ಸುವರ್ಣಾವಕಾಶ
ಆದೇಶದ ಅತ್ಯಂತ ಪ್ರಮುಖ ಅಂಶವೆಂದರೆ 6ನೇ ಕಂಡಿಕೆ. ಇದರಲ್ಲಿ “ಖಾಲಿಯಿರುವ ನೇರ ನೇಮಕಾತಿ ಹುದ್ದೆಗಳಲ್ಲಿ ಸುಮಾರು 56,432 ಹುದ್ದೆಗಳನ್ನು ತುಂಬುವ ಪ್ರಕ್ರಿಯೆಯನ್ನು ಮುಂದಿನ 30 ದಿನಗಳಲ್ಲಿ ಪ್ರಾರಂಭಿಸುವಂತೆ ಎಲ್ಲಾ ಇಲಾಖೆಗಳಿಗೆ/ನೇಮಕಾತಿ ಪ್ರಾಧಿಕಾರಗಳಿಗೆ ತಿಳಿಸಿದೆ” ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ಆದೇಶಗಳು ಸರ್ಕಾರದ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತವೆ.

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳೇ ಗಮನಿಸಿ:
ಕೆಪಿಎಸ್‌ಸಿ (KPSC), ಪೊಲೀಸ್ ಇಲಾಖೆ (KSP), ಶಿಕ್ಷಣ ಇಲಾಖೆ, ಕೆಇಎ (KEA) ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಇದೀಗ ಮೀಸಲಾತಿ ಗೊಂದಲಕ್ಕೆ ತಾತ್ಕಾಲಿಕ ತೆರೆ ಬಿದ್ದಿರುವುದರಿಂದ, ಸತತವಾಗಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ತಮ್ಮ ಓದಿನ ವೇಗವನ್ನು ಹೆಚ್ಚಿಸುವ ಸಮಯ ಬಂದಿದೆ. ಮುಂದಿನ ಒಂದು ತಿಂಗಳೊಳಗೆ ಸಾಲು ಸಾಲು ನೇಮಕಾತಿ ಅಧಿಸೂಚನೆಗಳು ಪ್ರಕಟವಾಗುವ ನಿರೀಕ್ಷೆ ದಟ್ಟವಾಗಿದೆ.

karnataka-govt-jobs-56432-posts-recruitment-new-guidelines-reservation
karnataka-govt-jobs-56432-posts-recruitment-new-guidelines-reservation
karnataka-govt-jobs-56432-posts-recruitment-new-guidelines-reservation
karnataka-govt-jobs-56432-posts-recruitment-new-guidelines-reservation
karnataka-govt-jobs-56432-posts-recruitment-new-guidelines-reservation
karnataka-govt-jobs-56432-posts-recruitment-new-guidelines-reservation

Share. Facebook Twitter LinkedIn WhatsApp Email

Related Posts

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM2 Mins Read

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM1 Min Read

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM2 Mins Read
Recent News

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

BIG BREAKING: ವಿಧಾನಸಭೆಯಲ್ಲಿ ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ

23/03/2026 8:12 PM
State News
KARNATAKA

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

By kannadanewsnow0923/03/2026 8:58 PM KARNATAKA 2 Mins Read

ಶಿವಮೊಗ್ಗ: ಶಿಕ್ಷಕ ಎಂದರೆ ವಿದ್ಯಾರ್ಥಿಯ ಪಾಲಿಗೆ ಕತ್ತಲೆಯಲ್ಲಿ ದಾರಿದೀಪವಾಗಬೇಕಾದವನು. ಬೆಳೆಯುವ ಸಿರಿಯನ್ನು ತಿದ್ದಿ ತೀಡಿ ಹೆಮ್ಮರವನ್ನಾಗಿಸಬೇಕಾದ ಗುರುಗಳು ಇಂದು ಅಕ್ಷರಶಃ…

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

BIG BREAKING: ವಿಧಾನಸಭೆಯಲ್ಲಿ ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ

23/03/2026 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.