Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ

06/11/2025 9:13 PM

518 ಕೋಟಿ ನವೋದ್ಯಮ ನೀತಿಗೆ ಸಚಿವ ಸಂಪುಟ ಒಪ್ಪಿಗೆ: ಸಚಿವಪ್ರಿಯಾಂಕ್‌ ಖರ್ಗೆ

06/11/2025 8:35 PM

ನ.14ರಂದು ರಾಜ್ಯದ 56,000 ಶಾಲೆ, ಕಾಲೇಜುಗಳಲ್ಲಿ ‘ಮೆಗಾ ಪೋಷಕ-ಶಿಕ್ಷಕರ ಸಭೆ’: ಸಚಿವ ಮಧು ಬಂಗಾರಪ್ಪ

06/11/2025 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ: ಆರ್‌.ಅಶೋಕ್ ಕಿಡಿ
KARNATAKA

ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ: ಆರ್‌.ಅಶೋಕ್ ಕಿಡಿ

By kannadanewsnow0904/02/2025 6:57 PM

ಹಾಸನ: ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಶನ್‌ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್‌ ದರೋಡೆ ನಡೆಯುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಸುಮಾರು 24-25 ಜನರು ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ಸುಗ್ರೀವಾಜ್ಞೆ ಎನ್ನುತ್ತಿದೆಯೇ ಹೊರತು, ಒಂದೇ ಒಂದು ಮೈಕ್ರೋ ಫೈನಾನ್ಸ್‌ನ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಎಷ್ಟು ಗುಡುಗಿದರೂ ಮೈಕ್ರೋ ಫೈನಾನ್ಸ್‌ಗಳು ಕ್ಯಾರೇ ಎಂದಿಲ್ಲ. ಕುಂಭಮೇಳದಲ್ಲಿ ಜನರು ಸತ್ತಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಂಡರು. ಆದರೆ ಸಾಲ ವಸೂಲಿಗಾರರ ಕಿರುಕುಳದಿಂದ ಸತ್ತವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿಲ್ಲ ಎಂದರು.

ನಿಗಮಗಳಿಗೆ ಹಣವಿಲ್ಲ

ಅಭಿವೃದ್ಧಿ ನಿಗಮಗಳಿಗೆ ಹೆಚ್ಚು ಅನುದಾನ ನೀಡಿ ಸಾಲ ಕೊಟ್ಟಿದ್ದರೆ, ಜನರು ಮೈಕ್ರೋ ಫೈನಾನ್ಸ್‌ ಮೊರೆ ಹೋಗುತ್ತಿರಲಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಗ್ಯಾರಂಟಿ ಬಗ್ಗೆ ಹೇಳಿದ್ದಕ್ಕೆ ಬಾಯಿ ಬಡಿದುಕೊಂಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 1.5 ಲಕ್ಷ ಕೋಟಿ ರೂ. ಗೂ ಅಧಿಕ ಸಾಲವನ್ನು ಕಾಂಗ್ರೆಸ್‌ ಸರ್ಕಾರ ಮಾಡಲಿದೆ ಎಂದರು.

ತುರ್ತಾಗಿ ನಿಗಮಗಳಿಗೆ 5,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಜನರಿಗೆ ಸಾಲ ಕೊಟ್ಟರೆ ಅನುಕೂಲವಾಗುತ್ತದೆ. ಜೊತೆಗೆ ಇರುವ ಕಾನೂನನ್ನೇ ಬಳಸಿ ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಬೇಕು. ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್‌ ಸಮ್ಮಾನ್‌ ಸೇರಿದಂತೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಅದೇ ರೀತಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಳಸಬೇಕು. ಅಭಿವೃದ್ಧಿ ಕಾರ್ಯಕ್ಕೆ 80,000 ಕೋಟಿ ರೂ. ಸಿಗುತ್ತದೆ. ಅದರಲ್ಲಿ 55,000 ಕೋಟಿ ರೂ. ಅನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಇನ್ನುಳಿದ ಹಣದಲ್ಲಿ ಅಭಿವೃದ್ಧಿ ಹೇಗಾಗುತ್ತದೆ? ಶಾಸಕ ಬಿ.ಆರ್‌.ಪಾಟೀಲ್‌ ಇದನ್ನೇ ಪ್ರಶ್ನೆ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.

BREAKING: ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ ಯುವಕ ವಿದ್ಯುತ್ ಪ್ರವಹಿಸಿ ಸಾವು

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ

06/11/2025 9:13 PM3 Mins Read

518 ಕೋಟಿ ನವೋದ್ಯಮ ನೀತಿಗೆ ಸಚಿವ ಸಂಪುಟ ಒಪ್ಪಿಗೆ: ಸಚಿವಪ್ರಿಯಾಂಕ್‌ ಖರ್ಗೆ

06/11/2025 8:35 PM2 Mins Read

ನ.14ರಂದು ರಾಜ್ಯದ 56,000 ಶಾಲೆ, ಕಾಲೇಜುಗಳಲ್ಲಿ ‘ಮೆಗಾ ಪೋಷಕ-ಶಿಕ್ಷಕರ ಸಭೆ’: ಸಚಿವ ಮಧು ಬಂಗಾರಪ್ಪ

06/11/2025 7:59 PM2 Mins Read
Recent News

ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ

06/11/2025 9:13 PM

518 ಕೋಟಿ ನವೋದ್ಯಮ ನೀತಿಗೆ ಸಚಿವ ಸಂಪುಟ ಒಪ್ಪಿಗೆ: ಸಚಿವಪ್ರಿಯಾಂಕ್‌ ಖರ್ಗೆ

06/11/2025 8:35 PM

ನ.14ರಂದು ರಾಜ್ಯದ 56,000 ಶಾಲೆ, ಕಾಲೇಜುಗಳಲ್ಲಿ ‘ಮೆಗಾ ಪೋಷಕ-ಶಿಕ್ಷಕರ ಸಭೆ’: ಸಚಿವ ಮಧು ಬಂಗಾರಪ್ಪ

06/11/2025 7:59 PM

ಅತ್ಯಾಚಾರ ಪ್ರಕರಣ: ದೇವಮಾನವ ಅಸಾರಾಂ ಬಾಪುಗೆ ಆರು ತಿಂಗಳು ಜಾಮೀನು

06/11/2025 7:49 PM
State News
KARNATAKA

ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ

By kannadanewsnow0906/11/2025 9:13 PM KARNATAKA 3 Mins Read

ಬೆಂಗಳೂರು: ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ…

518 ಕೋಟಿ ನವೋದ್ಯಮ ನೀತಿಗೆ ಸಚಿವ ಸಂಪುಟ ಒಪ್ಪಿಗೆ: ಸಚಿವಪ್ರಿಯಾಂಕ್‌ ಖರ್ಗೆ

06/11/2025 8:35 PM

ನ.14ರಂದು ರಾಜ್ಯದ 56,000 ಶಾಲೆ, ಕಾಲೇಜುಗಳಲ್ಲಿ ‘ಮೆಗಾ ಪೋಷಕ-ಶಿಕ್ಷಕರ ಸಭೆ’: ಸಚಿವ ಮಧು ಬಂಗಾರಪ್ಪ

06/11/2025 7:59 PM

ನವೆಂಬರ್, ಡಿಸೆಂಬರ್ ನಲ್ಲಿ ಏನೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋ ಮೂಲಕ: ಡಿಕೆಶಿ

06/11/2025 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.