Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/12/2025 10:11 AM

BREAKING: ರಷ್ಯಾದ ಮಿಲಿಟರಿ ಸಾರಿಗೆ ಜೆಟ್ ಪತನ: 7 ಮಂದಿ ಸಾವು | Russia plane crash

10/12/2025 10:11 AM

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0914/02/2025 5:02 PM

ಬೆಂಗಳೂರು: “ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಭಾಗವಹಿಸಿ ಮಾತನಾಡಿದರು.

“ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ” ಎಂದು ತಿಳಿಸಿದರು.

“ನಿಮ್ಮ, ಕರ್ನಾಟಕ ರಾಜ್ಯ ಹಾಗೂ ದೇಶದ ಭವಿಷ್ಯಕ್ಕಾಗಿ ನೀವು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಇದು ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಮಾತ್ರವಲ್ಲ ಬೆಂಗಳೂರಿನ ಹೊರತಾಗಿ ಪ್ರಗತಿ ಸಾಧಿಸಲು ನಾವು ಗುರಿ ಹೊಂದಿದ್ದೇವೆ. ನಮ್ಮ ರಾಜ್ಯದಲ್ಲಿ ಏರೋಸ್ಪೇಸ್ ಕ್ಷೇತ್ರದಲ್ಲಿ ನಮ್ಮ ಎಂಎಸ್ಎಂಇಗಳು ದೊಡ್ಡ ಶಕ್ತಿ ತುಬುತ್ತಿವೆ. ಬಾಹ್ಯಾಕಾಶ ಕ್ಷೇತ್ರದ ಸಾಧನೆಗೆ ರಾಕೆಟ್ ಗಳನ್ನು ನಮ್ಮ ಪೀಣ್ಯ ಕೈಗಾರಿಕಾ ಪ್ರದೇಶದಲ್ಲೇ ತಯಾರು ಮಾಡಿದ್ದೆವು” ಎಂದರು.

“ನೆಹರೂ ಅವರ ಕಾಲದಿಂದ ದೊಡ್ಡ ಕೈಗಾರಿಕೆಗಳು ಆರಂಭವಾಗಿ ದೊಡ್ಡ ಮಟ್ಟಕ್ಕೆ ಬೆಳೆದಿವೆ. ದೇಶದ ದೊಡ್ಡ ಕಂಪನಿಗಳು ನಮ್ಮ ರಾಜ್ಯದ ನೀತಿಗಳು, ಸ್ನೇಹ ಸಂಬಂಧವನ್ನು ಮೆಚ್ಚಿ ನಮ್ಮ ರಾಜ್ಯಕ್ಕೆ ಬಂದಿದ್ದಾರೆ. ನಾವೆಲ್ಲರೂ ಒಟ್ಟಾಗಿ ಸೇರಿ ಭವಿಷ್ಯದತ್ತ ಹೆಜ್ಜೆ ಹಾಕೋಣ. ಈ ಸಮಾವೇಶದ ಮೂಲಕ ರಾಜ್ಯಕ್ಕೆ 10 ಲಕ್ಷ ಕೋಟಿ ಗುರಿ ಹೊಂದಿದೆ. ನಮ್ಮ ನೂತನ ಕೈಗಾರಿಕಾ ನೀತಿಯು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಮಾಡುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಿದೆ” ಎಂದು ಭರವಸೆ ನೀಡಿದರು.

“ಸಚಿವ ಹೆಚ್.ಕೆ ಪಾಟೀಲ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಪ್ರವಾಸೋದ್ಯಮ ನೀತಿ ಪ್ರಕಟಿಸಿದೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ 300 ಕಿ.ಮೀ ಕರಾವಳಿ ಪ್ರದೇಶವಿದ್ದು, ಈ ಭಾಗದಲ್ಲಿ ನಮ್ಮ ಐತಿಹಾಸಿಕ ಸ್ಥಳಗಳನ್ನು ಉಳಿಸಿಕೊಂಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ಸಮಾವೇಶ ನಮ್ಮ ರಾಜ್ಯ ಜಾಗತಿಕ ಮಟ್ಟದಲ್ಲಿ ವ್ಯಾಪಾರ ವ್ಯವಹಾರ ಮಾಡುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ನಾವು ದೇಶದ ಇತರೆ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಇದು ನಮ್ಮ ಸಾಮರ್ಥ್ಯ” ಎಂದು ತಿಳಿಸಿದರು.

“ಈ ದೇಶದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆರಂಭಿಸಿದ್ದೆ ಎಸ್.ಎಂ ಕೃಷ್ಣ ಅವರ ಸರ್ಕಾರ ಕರ್ನಾಟಕದಲ್ಲಿ. ಈ ಸಮಾವೇಶ ಕೇವಲ ಆರಂಭವಷ್ಟೇ, ಇಲ್ಲಿಂದ ನಿಮಗೆ ಅವಕಾಶಗಳು ತೆರೆದುಕೊಳ್ಳಲು ಆರಂಭವಾಗುತ್ತವೆ. ವರ್ಷದ 365 ದಿನಗಳು ಕೂಡ ನಿಮಗಾಗಿ ನಾವು ಬಾಗಿಲು ತೆರೆದಿರುತ್ತೇವೆ. ನೀವು ಯಾವಾಗ ಬಂದರೂ ನಾವು ನಿಮಗೆ ಅಗತ್ಯ ನೆರವು ನೀಡಿ ನಿಮ್ಮ ಪ್ರಗತಿ, ಕರ್ನಾಟಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಸಹಕಾರ ನೀಡುತ್ತೇವೆ. ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಈ ಸಮಾವೇಶ ಯಶಸ್ವಿಯಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

Good News: ಶೀಘ್ರವೇ ‘ಗೃಹಲಕ್ಷ್ಮೀ ಯೋಜನೆ’ ಹಣ ಬಿಡುಗಡೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ

Share. Facebook Twitter LinkedIn WhatsApp Email

Related Posts

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/12/2025 10:11 AM1 Min Read

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM1 Min Read

ನಿಮ್ಮ ಮನೆಯಲ್ಲಿ ಬಳಸುವ ಉಪ್ಪಿನ ಡಬ್ಬದಲ್ಲಿ ಈ ವಸ್ತು ಹಾಕಿದ್ರೆ ಸಾಕು, ಯಾವುದೇ ರೀತಿ ಕಷ್ಟಗಳಿದ್ದರೂ ದೂರವಾಗುತ್ತವೆ.!

10/12/2025 9:50 AM2 Mins Read
Recent News

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

10/12/2025 10:11 AM

BREAKING: ರಷ್ಯಾದ ಮಿಲಿಟರಿ ಸಾರಿಗೆ ಜೆಟ್ ಪತನ: 7 ಮಂದಿ ಸಾವು | Russia plane crash

10/12/2025 10:11 AM

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM

ನಿಮ್ಮ ಮನೆಯಲ್ಲಿ ಬಳಸುವ ಉಪ್ಪಿನ ಡಬ್ಬದಲ್ಲಿ ಈ ವಸ್ತು ಹಾಕಿದ್ರೆ ಸಾಕು, ಯಾವುದೇ ರೀತಿ ಕಷ್ಟಗಳಿದ್ದರೂ ದೂರವಾಗುತ್ತವೆ.!

10/12/2025 9:50 AM
State News
KARNATAKA

BREAKING : ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By kannadanewsnow0510/12/2025 10:11 AM KARNATAKA 1 Min Read

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಪುತ್ರನಿಗೂ ಇದೀಗ ಭೂ ಕಬಳಿಕೆ ಆರೋಪ…

BREAKING : ರಾಜ್ಯದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವು!

10/12/2025 9:55 AM

ನಿಮ್ಮ ಮನೆಯಲ್ಲಿ ಬಳಸುವ ಉಪ್ಪಿನ ಡಬ್ಬದಲ್ಲಿ ಈ ವಸ್ತು ಹಾಕಿದ್ರೆ ಸಾಕು, ಯಾವುದೇ ರೀತಿ ಕಷ್ಟಗಳಿದ್ದರೂ ದೂರವಾಗುತ್ತವೆ.!

10/12/2025 9:50 AM

ALERT : ಮಹಿಳೆಯರೇ ಎಚ್ಚರ : ಈ 5 ಆಹಾರಗಳನ್ನು `ಫ್ರಿಡ್ಜ್’ನಲ್ಲಿ ಇಡಬೇಡಿ, ಇವು ವಿಷಕ್ಕೆ ಸಮ.!

10/12/2025 9:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.