Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇವತ್ತು ಕರ್ನಾಟಕವು ಕರಾಳ ದಿನ ಎದುರಿಸುವಂತಾಗಿದೆ – ಬಿಜೆಪಿ ಪಿ.ರಾಜೀವ್ ಕಿಡಿ
KARNATAKA

ಇವತ್ತು ಕರ್ನಾಟಕವು ಕರಾಳ ದಿನ ಎದುರಿಸುವಂತಾಗಿದೆ – ಬಿಜೆಪಿ ಪಿ.ರಾಜೀವ್ ಕಿಡಿ

By kannadanewsnow0923/04/2024 1:10 PM

ಬೆಂಗಳೂರು: ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು.

ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ. ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೋಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು.

ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ; ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್‍ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು. ಒಬ್ಬ ದಲಿತ ಯುವಕನ ಕೊಲೆಯನ್ನು ಮುಚ್ಚಿ ಹಾಕುವ ಕೆಲಸ ಈ ರಾಜ್ಯದಲ್ಲಿ ನಡೆದಿದೆಯಲ್ಲವೇ? ಒಬ್ಬ ದಲಿತನ ಹತ್ಯೆಯಾಗಿ 14 ಗಂಟೆ ವರೆಗೆ ಎಫ್‍ಐಆರ್ ಮಾಡಲು ಪೊಲೀಸ್ ಇಲಾಖೆಗೆ ಸಾಧ್ಯವಿಲ್ಲವೆಂದಾದರೆ ದಲಿತ ಸಮುದಾಯದಿಂದ ಬಂದ ಗೃಹ ಸಚಿವರು ಯಾವ ಮಾನ ಮರ್ಯಾದೆ ಇಟ್ಟುಕೊಂಡು ತಮ್ಮ ಸಚಿವ ಸ್ಥಾನದ ಬಗ್ಗೆ ಹೇಳುತ್ತಾರೆ? ಯಾವ ಮುಖವನ್ನು ದಲಿತರಿಗೆ ತೋರಿಸುತ್ತೀರಿ ಎಂದು ಕೇಳಿದರು.

ಗೃಹಸಚಿವರು ರಾಜೀನಾಮೆ ಕೊಡಲಿ…

ದಲಿತರ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯೂ ಈ ಗೃಹಸಚಿವರಿಗೆ ಇಲ್ಲ; ಒಬ್ಬ ದಲಿತ ಯುವಕನ ಹತ್ಯೆಯಾಗಿ 14 ಗಂಟೆವರೆಗೆ ಅವರ ಶವ ಇಟ್ಟುಕೊಂಡು ದಲಿತ ಪೋಷಕರು ಅಂಗಲಾಚುವಂತಾಗಿದೆ. ಮಾನ, ಮರ್ಯಾದೆ, ದಲಿತ ಎಂಬ ಸ್ವಾಭಿಮಾನ ಇದ್ದರೆ ಪರಮೇಶ್ವರ್ ಅವರು ಈ ಕ್ಷಣವೇ ರಾಜೀನಾಮೆ ಕೊಡಬೇಕು ಎಂದು ಪಿ.ರಾಜೀವ್ ಅವರು ಆಗ್ರಹಿಸಿದರು.

ಕರ್ನಾಟಕದಲ್ಲಿ ಆರ್ಥಿಕ ದಿವಾಳಿತನ ಎದ್ದಿದೆ. ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಇಲ್ಲಸಲ್ಲದ ಆರೋಪ ಮಾಡುವುದರಲ್ಲಿ ಮುಖ್ಯಮಂತ್ರಿಗಳು ಬ್ಯುಸಿಯಾಗಿದ್ದಾರೆ. ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಇವರು. ರಾಜ್ಯದಿಂದ 2 ಲಕ್ಷದ 38 ಸಾವಿರ ಕೋಟಿ ಸಂಗ್ರಹಿಸುವುದಾಗಿ ಹೇಳಿಕೊಂಡಿದ್ದ ಮುಖ್ಯಮಂತ್ರಿ ತಾನು ಘೋಷಿಸಿದ ಗುರಿ ಮುಟ್ಟುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಆಕ್ಷೇಪಿಸಿದರು. ಫೆಬ್ರವರಿ ಅಂತ್ಯಕ್ಕೆ 2 ಲಕ್ಷದ 5 ಕೋಟಿಯಷ್ಟೇ ಸಂಗ್ರಹವಾಗಿದೆ ಎಂದು ಟೀಕಿಸಿದರು.

ನೀತಿಸಂಹಿತೆ ಜಾರಿಯಲ್ಲಿದ್ದರೂ ಸಚಿವ ಕೃಷ್ಣಬೈರೇಗೌಡರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದಾರೆ. ಇವತ್ತು ಕಾಂಗ್ರೆಸ್ ಸಚಿವರ- ಶಾಸಕರ ದಂಡು ವಿಧಾನಸೌಧದಲ್ಲಿ ಹೋರಾಟವನ್ನು ಮಾಡುತ್ತಿದೆ. ವಿಧಾನಸೌಧ ಪ್ರಜಾತಂತ್ರದ ಪ್ರತೀಕವೇ? ಕಾಂಗ್ರೆಸ್ಸಿನ ಕಾರ್ಯಾಲಯವೇ ಎಂದು ಕೇಳಿದರು.

ರಾಜ್ಯದಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣ, ಸಾಮೂಹಿಕ ಅತ್ಯಾಚಾರ, ರಾಮೇಶ್ವರಂ ಕೆಫೆ ಸ್ಫೋಟ, ಕುಕ್ಕರ್ ಬಾಂಬ್ ಸ್ಫೋಟ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಪ್ರಕರಣಗಳನ್ನು ನಾನು ನೆನಪಿಸಲು ಹೋಗುವುದಿಲ್ಲ. ಕರ್ನಾಟಕದಲ್ಲಿ ಕೇವಲ 3 ದಿನಗಳಲ್ಲಿ 8 ಕೊಲೆ ಪ್ರಕರಣಗಳು ನಡೆದಿವೆ. ಯಾಕೆ ಎಂದ ಅವರು, ರಾಜ್ಯದಲ್ಲಿ ಜನಪರ ಸರಕಾರ ಇದೆಯೇ ಅಥವಾ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಯಾಕೆ ಎಂದು ಪ್ರಶ್ನಿಸಿದರು.

ಕರ್ನಾಟಕವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಅತ್ಯಂತ ಉನ್ನತ ಸ್ಥಿತಿಯಲ್ಲಿ, ದೇಶಕ್ಕೆ ಮಾದರಿ ರಾಜ್ಯವಾಗಿತ್ತು. ಭಿಕ್ಷೆ ಬೇಡುವ ಮುಖ್ಯಮಂತ್ರಿ, ಮೈ ಪರಚಿಕೊಳ್ಳುವ ಸಿಎಂ, ವಿಚಾರಣೆಗೆ ಮೊದಲೇ ತೀರ್ಪನ್ನು ನೀಡುವ ಗೃಹ ಸಚಿವ, ಪ್ರಕರಣದ ಪ್ರಾಥಮಿಕ ಮಾಹಿತಿಯನ್ನು ತಿಳಿದುಕೊಳ್ಳದೆ ಉತ್ತರಿಸುವ ಪೊಲೀಸ್ ಸಚಿವರಿರುವುದು ರಾಜ್ಯದ ದುರ್ದೈವ ಎಂದು ನುಡಿದರು.

ಆರೋಪಿಗಳಿಗೆ ಪೊಲೀಸ್ ರಾಜಾತಿಥ್ಯ..

ರಾಜ್ಯದಲ್ಲಿ ಕೊಲೆ, ಅತ್ಯಾಚಾರ, ಭಯೋತ್ಪಾದನಾ ಕೃತ್ಯಗಳು ಜಾಸ್ತಿ ಆಗುತ್ತಿವೆ ಯಾಕೆ ಎಂದು ಕೇಳಿದ ಅವರು, ಪೊಲೀಸ್ ಠಾಣೆಯಲ್ಲಿ ನಮಗೆ ರಾಜಾತಿಥ್ಯ ಇದೆ ಎಂದು ಡಿ.ಕೆ.ಶಿವಕುಮಾರರ ಬ್ರದರ್ಸ್‍ಗೆ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ನಾವು ಯಾವುದೇ ಅಪರಾಧ ಮಾಡಿದರೂ ನಮ್ಮ ಮನೆಗೆ ಪೊಲೀಸ್ ರಕ್ಷಣೆ ಕೊಡುತ್ತಾರೆ. ಅಮಾಯಕ ಯುವತಿಯನ್ನು ಕೊಲೆ ಮಾಡಿದರೆ ಪೊಲೀಸ್ ಠಾಣೆಯಲ್ಲಿ ನನಗೆ ರಾಜಾತಿಥ್ಯ ಕೊಟ್ಟು, ನನ್ನ ಮನೆಗೆ ರಕ್ಷಣೆ ನೀಡಲು ಕಾಂಗ್ರೆಸ್ ಸರಕಾರ ಸನ್ನದ್ಧವಾಗಿದೆ ಎಂಬ ಭಾವನೆಯಿಂದ ಇಂಥ ಕೃತ್ಯಗಳು ನಡೆಯುತ್ತಿವೆ ಎಂದು ಪಿ.ರಾಜೀವ್ ಆರೋಪಿಸಿದರು.

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ರಾಜ್ಯ ವಕ್ತಾರ ಎಂ.ಜಿ.ಮಹೇಶ್, ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.

ರಾಜ್ಯದ ವಿವಿಧೆಡೆ ಅತೀ ಹೆಚ್ಚು ‘ತಾಪಮಾನ’: ಸಾರ್ವಜನಿಕರೇ ತಪ್ಪದೇ ‘ಈ ಸಲಹೆ’ ಪಾಲಿಸಿ

ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ

Share. Facebook Twitter LinkedIn WhatsApp Email

Related Posts

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

07/07/2025 8:29 PM1 Min Read

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM2 Mins Read

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM1 Min Read
Recent News

ವಿಷಕ್ಕೆ ಸಮಾನ.! ಈ ಸಮಸ್ಯೆ ಇರುವವರು ಮರೆತು ಕೂಡ ‘ಬೀಟ್ರೂಟ್’ ತಿನ್ನಬಾರದು.!

07/07/2025 10:09 PM

ನಿಮ್ಮ ಮಕ್ಕಳು ಊಟ ಮಾಡುವುಕ್ಕೆ ಹಟ ಮಾಡ್ತಿದ್ದಾರಾ.? ಈ ಬಾರಿ ಇದನ್ನ ಟ್ರೈ ಮಾಡಿ!

07/07/2025 9:42 PM

‘YouTube’ ಹೊಸ ರೂಲ್ಸ್ ; ಇನ್ಮುಂದೆ ‘AI- ರಚಿತ, ಪುನರಾವರ್ತಿತ ವಿಷಯ’ ಹಾಕಿದ್ರೆ ‘ಹಣ’ ಸಿಗೋದಿಲ್ಲ

07/07/2025 9:33 PM

‘ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್’ನ್ನ ಹೊಸ ರೂಪದಲ್ಲಿ ವ್ಯಾಖ್ಯಾನಿಸಲಾಗುವುದು’ : ಬ್ರೆಜಿಲ್ ಸಭೆಯಲ್ಲಿ ಪ್ರಧಾನಿ ಮೋದಿ

07/07/2025 8:56 PM
State News
KARNATAKA

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

By kannadanewsnow0907/07/2025 8:29 PM KARNATAKA 1 Min Read

ಕೋಲಾರ: ವಿವಾಹಿತೆಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡಿದ್ದಲ್ಲದೇ, ಗರ್ಭಿಣಿಯಾಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದಂತ ಪ್ರಿಯಕರನ ಮನೆ ಮುಂದೆ ಮಹಿಳೆ…

ರಾಜ್ಯದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

07/07/2025 8:00 PM

ವೈದ್ಯಕೀಯ ಸೀಟು ಕುರಿತಂತೆ KEAಯಿಂದ ಮಹತ್ವದ ಮಾಹಿತಿ

07/07/2025 7:48 PM

BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

07/07/2025 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.