ಬೆಂಗಳೂರು: ವಿದ್ಯಾರ್ಥಿ ಮತ್ತು ಯುವಕರಲ್ಲಿ ಮಾದಕ ಪದಾರ್ಥಗಳ ಸೇವನೆ ವಿರುದ್ಧ ಅರಿವು ಮೂಡಿಸುವ ನಿಟ್ಟಿನಲ್ಲಿ, ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮಾದಕ ವ್ಯಸನ ನಿಗ್ರಹ ಕ್ಲಬ್ ರಚನೆ ಮಾಡುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಸೂಚಿಸಿದೆ.

Job Alert: ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ‘ಬ್ಯಾಕ್ ಲಾಗ್ ಹುದ್ದೆ’ ಭರ್ತಿಗೆ ಗ್ರೀನ್ ಸಿಗ್ನಲ್

ಈ ಕುರಿತಂತೆ ಪ್ರಾಧಿಕಾರದ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಾದಕ ವ್ಯಸನ ನಿಗ್ರಹ ಕ್ಲಬ್ ಸ್ಥಾಪಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಹಾಸ್ಟೆಲ್​ಗೆ ನುಗ್ಗಿ ಯುವತಿಯನ್ನು ತಬ್ಬಿದ ಸೆಕ್ಯುರಿಟಿ ಗಾರ್ಡ್​: ಸಿಸಿಟಿವಿಯಲ್ಲಿ ಭಯಾನಕ ವಿಡಿಯೋ ಸೆರೆ

ಮಾದಕ ಪದಾರ್ಥಗಳ ದುಷ್ಪರಿಣಾಮದ ಅರಿವು ಮೂಡಿಸಲು ಅಲಯನ್ಸ್ ಯೂನಿವರ್ಸಿಟಿ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ 2022ರ ಆಗಸ್ಟ್ 26ರಂದು ಆನೇಕಲ್ ನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ ಕೂಡ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಗಿದೆ.

BIG NEWS: ‘ಗಣೇಶೋತ್ಸವ’ ಸಂದರ್ಭದಲ್ಲಿ ‘ಉಗ್ರರ ದಾಳಿ’ಯ ಸಂಚು.?! ಮಹಾರಾಷ್ಟ್ರ ಕರಾವಳಿಯಲ್ಲಿ ಎಕೆ47 ಶಸ್ತ್ರಾಸ್ತ್ರ ತುಂಬಿದ್ದ ದೋಣಿ ಪತ್ತೆ.!

Share.
Exit mobile version