Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM

BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ

16/06/2025 4:55 PM

BREAKING: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ

16/06/2025 4:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ
KARNATAKA

BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ

By kannadanewsnow0916/06/2025 4:55 PM

ಬೆಂಗಳೂರು: ಪವನ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ ಲಭಿಸಿದೆ. ಬರೋಬ್ಬರಿ 1331.48 ಮೆಗಾವ್ಯಾಟ್ ಪವನ ವಿದ್ಯುತ್ ಸಾಮರ್ಥ್ಯ ಸಾಧಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರಶಸ್ತಿ ಸ್ವೀಕರಿಸಿದರು.

2024-25ನೇ ಸಾಲಿನಲ್ಲಿ ರಾಜ್ಯದ ವಿದ್ಯುತ್‌ ಜಾಲಕ್ಕೆ 1331.48 ಮೆಗಾವ್ಯಾಟ್‌ ಪವನ ವಿದ್ಯುತ್‌ ಸೇರ್ಪಡೆ ಮಾಡುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನಗಳಿಸಿದ್ದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

1331.48 ಮೆಗಾವ್ಯಾಟ್‌ ಸೇರ್ಪಡೆ ಮಾಡುವ ಮೂಲಕ ಕರ್ನಾಟಕ ಪ್ರಥಮ ಸ್ಥಾನದಲ್ಲಿದ್ದರೆ ತಮಿಳುನಾಡು( 1136.37 ಮೆಗಾವ್ಯಾಟ್‌) ಎರಡನೇ ಸ್ಥಾನ… pic.twitter.com/p8XnoKb4mS

— DIPR Karnataka (@KarnatakaVarthe) June 16, 2025

2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ.

ಕಳೆದ ಸಾಲಿನಲ್ಲಿ ಗುಜರಾತ್‌ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌,”2025ರ ಮೇ ವೇಳೆಗೆ ಪವನ ವಿದ್ಯುತ್ತಿನ ಸ್ಥಾಪಿತ ಸಾಮರ್ಥ್ಯ 7,351 ಮೆಗಾವ್ಯಾಟ್‌ನಷ್ಟಿತ್ತು. ಕಳೆದ ಆರ್ಥಿಕ ಸಾಲಿನಲ್ಲಿ 1,331 ಮೆಗಾವ್ಯಾಟ್‌ಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿದ್ದೇವೆ,” ಎಂದು ತಿಳಿಸಿದರು.

“ಇದು ಕೇವಲ ಅಂಕಿ-ಅಂಶವಲ್ಲ. ನಮ್ಮ ಬದ್ಧತೆ, ಯೋಜನೆಗಳನ್ನು ಕಾರ್ಯಗತಗೊಳಿಸುವ ನಮ್ಮ ಸಾಮರ್ಥ್ಯದ ಪ್ರತೀಕ. ರಾಜ್ಯದ ಕೈಗಾರಿಕೆಗಳಿಗೆ, ನಮ್ಮ ರೈತರಿಗೆ, ಮನೆಗಳಿಗೆ ಶುದ್ಧ ಇಂಧನ ಒದಗಿಸುವ ಇಚ್ಛಾ ಶಕ್ತಿಯಾಗಿದೆ,” ಎಂದು ಹೇಳಿದರು.

“ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕದ ಹೆಜ್ಜೆಗಳು ಹೊಸತೇನಲ್ಲ. 2009ರಲ್ಲಿ ನವೀಕರಿಸಬಹುದಾದ ಇಂಧನ ನೀತಿಯನ್ನು ಪ್ರಕಟಿಸಿದ ದೇಶದ ಮೊದಲ ರಾಜ್ಯ ನಮ್ಮದು. ನಾವು ಇಂದು ಈ ಎತ್ತರಕ್ಕೆ ಏರಲು ಅಂದೇ ಅಡಿಪಾಯ ಹಾಕಲಾಗಿತ್ತು. ನವೀಕರಿಸಬಹುದಾದ ಇಂಧನ ನೀತಿ 2022–2027 ನಮ್ಮ ದೂರದೃಷ್ಟಿಯ ಪ್ರತೀಕ. ಕೇವಲ ಸಾಮರ್ಥ್ಯ ಸೇರ್ಪಡೆ ಮಾತ್ರವಲ್ಲದೇ, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರೂಪಿಸಲಾದ ನೀತಿ ಇದು. ಐಎಸ್‌ಟಿಎಸ್‌ ಮತ್ತು ಐಎನ್‌ಎಸ್‌ಟಿಎಸ್‌ ಯೋಜನೆಗಳು, ಹೈಬ್ರಿಡ್ ಮಾದರಿಗಳು, ಹಳೆಯ ಟರ್ಬೈನ್‌ಗಳಿಗೆ ಮರುಶಕ್ತಿ ತುಂಬುವುದು ಸೇರಿದಂತೆ ಡಿಜಿಟಲೀಕರಣ ಮತ್ತು ಜಿಯೋ-ಟ್ಯಾಗಿಂಗ್ ಮೂಲಕ ಸುಲಲಿತ ವ್ಯವಹಾರವನ್ನು ಬೆಂಬಲಿಸುತ್ತಿದೆ,” ಎಂದು ವಿವರಿಸಿದರು.

“ಕೇಂದ್ರ ಸರ್ಕಾರವು 2030ರ ವೇಳೆಗೆ 500 ಗಿಗಾವ್ಯಾಟ್‌ಗಳಷ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ ಹೊಂದಿದ್ದು, ಪವನ ಶಕ್ತಿಯಿಂದಲೇ 100 ಗಿಗಾವ್ಯಾಟ್‌ಗಳಷ್ಟು ವಿದ್ಯುತ್‌ ಉತ್ಪಾದಿಸುವ ಗುರಿ ಹೊಂದಿದೆ.ಈ ಗುರಿ ಸಾಧನೆಗೆ ಕರ್ನಾಟಕ ಬದ್ಧವಾಗಿದ್ದು, 17 ಗಿಗಾವ್ಯಾಟ್‌ ಪವನ ಶಕ್ತಿ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ನವೀಕರಿಸಬಹುದಾದ ಇಂಧನ ಕ್ಲಸ್ಟರ್‌ ಕಾರ್ಯಕ್ರಮದಡಿ, 5 ಗಿಗಾವ್ಯಾಟ್‌ಗಿಂತ ಹೆಚ್ಚು ಪವನ ವಿದ್ಯುತ್‌ ಸಾಮರ್ಥ್ಯ ಸೇರ್ಪಡೆಗೊಳಿಸಲಿದ್ದೇವೆ. ಇದನ್ನು ಸಾಧ್ಯವಾಗಲಿಸಲು 20ಕ್ಕೂ ಹೆಚ್ಚು ಸಬ್‌ ಸ್ಟೇಷನ್‌ಗಳು, 400 ಕೆ.ವಿ. ಕಾರಿಡಾರ್‌ಗಳು ಹಾಗೂ ನವೀಕರಿಸಬಹುದಾದದ ಇಂಧನದ ಮೀಸಲು ವಲಯ ಮುಂತಾದ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ,” ಎಂದು ಮಾಹಿತಿ ನೀಡಿದರು.

“ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದರಲ್ಲೂ ಮುಂಚೂಣಿಯಲ್ಲಿದ್ದು, ಹೂಡಿಕೆದಾರರಿಗೆ ರಾಜ್ಯದ ಬಗ್ಗೆ ಇರುವ ವಿಶ್ವಾಸವನ್ನು ಇದು ಎತ್ತಿ ತೋರಿಸುತ್ತದೆ. 2025ರ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ನವೀಕರಿಸಬಹುದಾದ ಇಂಧನ ವಲಯಕ್ಕೆ 4 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಇದು ರಾಜ್ಯವು ಪಡೆದುಕೊಂಡಿರುವ ಒಟ್ಟು ಹೂಡಿಕೆಯ ಸುಮಾರು ಶೇ.40 ರಷ್ಟು,” ಎಂದರು.

ಹನುಮನ ನಾಡಿನಲ್ಲಿ ಪವನ ಶಕ್ತಿಯ ಸಾಧನೆ: ಪ್ರಲ್ಹಾದ್‌ ಜೋಶಿ

ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ,”ಕರ್ನಾಟಕದವನಾಗಿ ರಾಜ್ಯ ಪವನ ವಿದ್ಯುತ್‌ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಇದು ಹನುಮನ ಜನ್ಮ ಭೂಮಿ. ಇಲ್ಲಿ ವಿಶ್ವ ಪವನ ದಿನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ,” ಎಂದರು.

“ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದ್ದು, 51.5 ಗಿಗಾವ್ಯಾಟ್‌ ಸಾಮರ್ಥ್ಯವನ್ನು ಈಗಾಗಲೇ ಸ್ಥಾಪಿಸಲಾಗಿದೆ. 2030ರ ವೇಳೆಗೆ ಒಟ್ಟಾರೆ ವಿದ್ಯುತ್‌ ಉತ್ಪಾದನೆಯಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಶೇ. 50ಕ್ಕೆ ಏರಿಸುವ ಜತೆಗೆ 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆ ನಿವ್ವಳ ಶೂನ್ಯದ ಗುರಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ,”ಎಂದರು.

“2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದು. ಈ ಪೈಕಿ 30 ಗಿಗಾವ್ಯಾಟ್‌ ಕಡಲಾಚೆಯ ಪವನ ಶಕ್ತಿಯೂ ಸೇರಿ ಒಟ್ಟು 100 ಗಿಗಾವ್ಯಾಟ್‌ ಪವನ ವಿದ್ಯುತ್‌ ಕ್ಷೇತ್ರದ್ದಾಗಿರಲಿದೆ. ದೇಶೀಯ ನಿಯೋಜನೆ ಮಾತ್ರವಲ್ಲದೇ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳ ಭಾಗವಾಗಿಯೂ ದೇಶ ದೃಢ ಹೆಜ್ಜೆ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು 3.5 ರಿಂದ 4 ಗಿ.ವ್ಯಾ. ಪವನ ಟರ್ಬೈನ್‌ಗಳು ಮತ್ತು ಘಟಕಗಳನ್ನು ರಫ್ತು ಮಾಡಿದೆ,”ಎಂದರು

ಪಂಪ್ಡ್‌ ಸ್ಟೋರೇಜ್‌ಗೆ ಒತ್ತು ನೀಡಬೇಕು

ಸದ್ಯದ ಮೂರು ಪ್ರಮುಖ ಸವಾಲುಗಳನ್ನು ಎದುರಿಸಲು ನಾವು ಸಜ್ಜಾಗಬೇಕು. ಮೊದಲನೆಯದಾಗಿ, ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮತ್ತು ಗ್ರಿಡ್ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸೌರ ಹಾಗೂ ಪವನ ವಿದ್ಯುತ್ ಉತ್ಪಾದನೆ ಜತೆಗೆ ಸಂಗ್ರಹಣೆಯನ್ನು ಸಂಯೋಜಿಸಬೇಕು ಅದಕ್ಕಾಗಿ, ಪಂಪ್ಡ್‌ ಸ್ಟೋರೇಜ್‌ನಂಥ ವ್ಯವಸ್ಥೆಗೆ ಒತ್ತು ನೀಡಬೇಕು. ಎರಡನೆಯದಾಗಿ, ವಿದ್ಯುತ್‌ ದರ ಸ್ಪರ್ಧಾತ್ಮಕವಾಗಿರಬೇಕು. ಮೂರನೆಯದಾಗಿ, ದೇಶೀಯ ಉತ್ಪಾದನೆಯಲ್ಲದೇ, ರಫ್ತು ಹೆಚ್ಚಳಕ್ಕೂ ಆದ್ಯತೆ ನೀಡಬೇಕು,”ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

BREAKING: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM1 Min Read

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

16/06/2025 4:24 PM2 Mins Read

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM1 Min Read
Recent News

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM

BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ

16/06/2025 4:55 PM

BREAKING: ಏರ್ ಇಂಡಿಯಾದ ಮತ್ತೊಂದು ವಿಮಾನದಲ್ಲಿ ತಾಂತ್ರಿಕ ದೋಷ

16/06/2025 4:49 PM

ಇಂದಿನಿಂದ ಗೂಗಲ್‌ ಪೇ, ಫೋನ್‌ ಪೇ ಮತ್ತಷ್ಟು ಫಾಸ್ಟ್‌: ಏನೇನು ಬದಲಾವಣೆ? ಇಲ್ಲಿದೆ ಡೀಟೆಲ್ಸ್

16/06/2025 4:42 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

By kannadanewsnow0916/06/2025 5:00 PM KARNATAKA 1 Min Read

ಬೆಂಗಳೂರು: ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ…

BIG NEWS: ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಮೊದಲ ಸ್ಥಾನ

16/06/2025 4:55 PM

ತೋಟಗಾರಿಕೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

16/06/2025 4:24 PM

ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

16/06/2025 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.