Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದಲ್ಲೇ ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಪ್ರಥಮ ಸ್ಥಾನ
KARNATAKA

ದೇಶದಲ್ಲೇ ‘ಪವನ ವಿದ್ಯುತ್ ಉತ್ಪಾದನೆ’ಯಲ್ಲಿ ‘ಕರ್ನಾಟಕ’ಕ್ಕೆ ಪ್ರಥಮ ಸ್ಥಾನ

By kannadanewsnow0915/06/2025 6:30 PM

ಬೆಂಗಳೂರು : ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರಶಸ್ತಿ ಸ್ವೀಕರಿಸಿದರು.

2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ.

ಕಳೆದ ಸಾಲಿನಲ್ಲಿ ಗುಜರಾತ್‌ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌,”2025ರ ಮೇ ವೇಳೆಗೆ ಪವನ ವಿದ್ಯುತ್ತಿನ ಸ್ಥಾಪಿತ ಸಾಮರ್ಥ್ಯ 7,351 ಮೆಗಾವ್ಯಾಟ್‌ನಷ್ಟಿತ್ತು. ಕಳೆದ ಆರ್ಥಿಕ ಸಾಲಿನಲ್ಲಿ 1,331 ಮೆಗಾವ್ಯಾಟ್‌ಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿದ್ದೇವೆ,” ಎಂದು ತಿಳಿಸಿದರು.

“ಇದು ಕೇವಲ ಅಂಕಿ-ಅಂಶವಲ್ಲ. ನಮ್ಮ ಬದ್ಧತೆ, ಯೋಜನೆಗಳನ್ನು ಕಾರ್ಯಗತಗೊಳಿಸುವ ನಮ್ಮ ಸಾಮರ್ಥ್ಯದ ಪ್ರತೀಕ. ರಾಜ್ಯದ ಕೈಗಾರಿಕೆಗಳಿಗೆ, ನಮ್ಮ ರೈತರಿಗೆ, ಮನೆಗಳಿಗೆ ಶುದ್ಧ ಇಂಧನ ಒದಗಿಸುವ ಇಚ್ಛಾ ಶಕ್ತಿಯಾಗಿದೆ,” ಎಂದು ಹೇಳಿದರು.

“ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕದ ಹೆಜ್ಜೆಗಳು ಹೊಸತೇನಲ್ಲ. 2009ರಲ್ಲಿ ನವೀಕರಿಸಬಹುದಾದ ಇಂಧನ ನೀತಿಯನ್ನು ಪ್ರಕಟಿಸಿದ ದೇಶದ ಮೊದಲ ರಾಜ್ಯ ನಮ್ಮದು. ನಾವು ಇಂದು ಈ ಎತ್ತರಕ್ಕೆ ಏರಲು ಅಂದೇ ಅಡಿಪಾಯ ಹಾಕಲಾಗಿತ್ತು. ನವೀಕರಿಸಬಹುದಾದ ಇಂಧನ ನೀತಿ 2022–2027 ನಮ್ಮ ದೂರದೃಷ್ಟಿಯ ಪ್ರತೀಕ. ಕೇವಲ ಸಾಮರ್ಥ್ಯ ಸೇರ್ಪಡೆ ಮಾತ್ರವಲ್ಲದೇ, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರೂಪಿಸಲಾದ ನೀತಿ ಇದು. ಐಎಸ್‌ಟಿಎಸ್‌ ಮತ್ತು ಐಎನ್‌ಎಸ್‌ಟಿಎಸ್‌ ಯೋಜನೆಗಳು, ಹೈಬ್ರಿಡ್ ಮಾದರಿಗಳು, ಹಳೆಯ ಟರ್ಬೈನ್‌ಗಳಿಗೆ ಮರುಶಕ್ತಿ ತುಂಬುವುದು ಸೇರಿದಂತೆ ಡಿಜಿಟಲೀಕರಣ ಮತ್ತು ಜಿಯೋ-ಟ್ಯಾಗಿಂಗ್ ಮೂಲಕ ಸುಲಲಿತ ವ್ಯವಹಾರವನ್ನು ಬೆಂಬಲಿಸುತ್ತಿದೆ,” ಎಂದು ವಿವರಿಸಿದರು.

“ಕೇಂದ್ರ ಸರ್ಕಾರವು 2030ರ ವೇಳೆಗೆ 500 ಗಿಗಾವ್ಯಾಟ್‌ಗಳಷ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ ಹೊಂದಿದ್ದು, ಪವನ ಶಕ್ತಿಯಿಂದಲೇ 100 ಗಿಗಾವ್ಯಾಟ್‌ಗಳಷ್ಟು ವಿದ್ಯುತ್‌ ಉತ್ಪಾದಿಸುವ ಗುರಿ ಹೊಂದಿದೆ.ಈ ಗುರಿ ಸಾಧನೆಗೆ ಕರ್ನಾಟಕ ಬದ್ಧವಾಗಿದ್ದು, 17 ಗಿಗಾವ್ಯಾಟ್‌ ಪವನ ಶಕ್ತಿ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ನವೀಕರಿಸಬಹುದಾದ ಇಂಧನ ಕ್ಲಸ್ಟರ್‌ ಕಾರ್ಯಕ್ರಮದಡಿ, 5 ಗಿಗಾವ್ಯಾಟ್‌ಗಿಂತ ಹೆಚ್ಚು ಪವನ ವಿದ್ಯುತ್‌ ಸಾಮರ್ಥ್ಯ ಸೇರ್ಪಡೆಗೊಳಿಸಲಿದ್ದೇವೆ. ಇದನ್ನು ಸಾಧ್ಯವಾಗಲಿಸಲು 20ಕ್ಕೂ ಹೆಚ್ಚು ಸಬ್‌ ಸ್ಟೇಷನ್‌ಗಳು, 400 ಕೆ.ವಿ. ಕಾರಿಡಾರ್‌ಗಳು ಹಾಗೂ ನವೀಕರಿಸಬಹುದಾದದ ಇಂಧನದ ಮೀಸಲು ವಲಯ ಮುಂತಾದ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ,” ಎಂದು ಮಾಹಿತಿ ನೀಡಿದರು.

“ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದರಲ್ಲೂ ಮುಂಚೂಣಿಯಲ್ಲಿದ್ದು, ಹೂಡಿಕೆದಾರರಿಗೆ ರಾಜ್ಯದ ಬಗ್ಗೆ ಇರುವ ವಿಶ್ವಾಸವನ್ನು ಇದು ಎತ್ತಿ ತೋರಿಸುತ್ತದೆ. 2025ರ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ನವೀಕರಿಸಬಹುದಾದ ಇಂಧನ ವಲಯಕ್ಕೆ 4 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಇದು ರಾಜ್ಯವು ಪಡೆದುಕೊಂಡಿರುವ ಒಟ್ಟು ಹೂಡಿಕೆಯ ಸುಮಾರು ಶೇ.40 ರಷ್ಟು,” ಎಂದರು.

ಹನುಮನ ನಾಡಿನಲ್ಲಿ ಪವನ ಶಕ್ತಿಯ ಸಾಧನೆ: ಪ್ರಲ್ಹಾದ್‌ ಜೋಶಿ

ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ,”ಕರ್ನಾಟಕದವನಾಗಿ ರಾಜ್ಯ ಪವನ ವಿದ್ಯುತ್‌ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಇದು ಹನುಮನ ಜನ್ಮ ಭೂಮಿ. ಇಲ್ಲಿ ವಿಶ್ವ ಪವನ ದಿನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ,” ಎಂದರು.

“ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದ್ದು, 51.5 ಗಿಗಾವ್ಯಾಟ್‌ ಸಾಮರ್ಥ್ಯವನ್ನು ಈಗಾಗಲೇ ಸ್ಥಾಪಿಸಲಾಗಿದೆ. 2030ರ ವೇಳೆಗೆ ಒಟ್ಟಾರೆ ವಿದ್ಯುತ್‌ ಉತ್ಪಾದನೆಯಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಶೇ. 50ಕ್ಕೆ ಏರಿಸುವ ಜತೆಗೆ 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆ ನಿವ್ವಳ ಶೂನ್ಯದ ಗುರಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ,”ಎಂದರು.

“2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದು. ಈ ಪೈಕಿ 30 ಗಿಗಾವ್ಯಾಟ್‌ ಕಡಲಾಚೆಯ ಪವನ ಶಕ್ತಿಯೂ ಸೇರಿ ಒಟ್ಟು 100 ಗಿಗಾವ್ಯಾಟ್‌ ಪವನ ವಿದ್ಯುತ್‌ ಕ್ಷೇತ್ರದ್ದಾಗಿರಲಿದೆ. ದೇಶೀಯ ನಿಯೋಜನೆ ಮಾತ್ರವಲ್ಲದೇ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳ ಭಾಗವಾಗಿಯೂ ದೇಶ ದೃಢ ಹೆಜ್ಜೆ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು 3.5 ರಿಂದ 4 ಗಿ.ವ್ಯಾ. ಪವನ ಟರ್ಬೈನ್‌ಗಳು ಮತ್ತು ಘಟಕಗಳನ್ನು ರಫ್ತು ಮಾಡಿದೆ,”ಎಂದರು

ಪಂಪ್ಡ್‌ ಸ್ಟೋರೇಜ್‌ಗೆ ಒತ್ತು ನೀಡಬೇಕು

ಸದ್ಯದ ಮೂರು ಪ್ರಮುಖ ಸವಾಲುಗಳನ್ನು ಎದುರಿಸಲು ನಾವು ಸಜ್ಜಾಗಬೇಕು. ಮೊದಲನೆಯದಾಗಿ, ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮತ್ತು ಗ್ರಿಡ್ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸೌರ ಹಾಗೂ ಪವನ ವಿದ್ಯುತ್ ಉತ್ಪಾದನೆ ಜತೆಗೆ ಸಂಗ್ರಹಣೆಯನ್ನು ಸಂಯೋಜಿಸಬೇಕು ಅದಕ್ಕಾಗಿ, ಪಂಪ್ಡ್‌ ಸ್ಟೋರೇಜ್‌ನಂಥ ವ್ಯವಸ್ಥೆಗೆ ಒತ್ತು ನೀಡಬೇಕು. ಎರಡನೆಯದಾಗಿ, ವಿದ್ಯುತ್‌ ದರ ಸ್ಪರ್ಧಾತ್ಮಕವಾಗಿರಬೇಕು. ಮೂರನೆಯದಾಗಿ, ದೇಶೀಯ ಉತ್ಪಾದನೆಯಲ್ಲದೇ, ರಫ್ತು ಹೆಚ್ಚಳಕ್ಕೂ ಆದ್ಯತೆ ನೀಡಬೇಕು,”ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ಇದೇ ವೇಳೆ, ‘ರ‍್ಯಾಂಪಿಂಗ್‌ಅಪ್‌ ಲೋಕಲ್‌ ಮ್ಯಾನುಫ್ಯಾಕ್ಚರಿಂಗ್‌ ಫಾರ್‌ ವಿಂಡ್‌ ಟರ್ಬೈನ್ಸ್‌ ಇನ್‌ ಇಂಡಿಯಾ’ವರದಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್, ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಕಾರ್ಯದರ್ಶಿ ಸಂತೋಷ್‌ ಕುಮಾರ್ ಸಾರಂಗಿ, ಕ್ರೆಡಲ್‌ ಅಧ್ಯಕ್ಷ ಟಿ.ಡಿ.ರಾಜೇಗೌಡ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಮತ್ತಿತ್ತರರು ಉಪಸ್ಥಿತರಿದ್ದರು.

BIG NEWS: ಶಾಸಕ ಕದಲೂರು ಉದಯ್ ಯೂಟರ್ನ್: ನಾನು ಒಬ್ಬ ವ್ಯಕ್ತಿಗೆ ಮಾತನಾಡಿರೋ ಸ್ಪಷ್ಟನೆ

BREAKING : ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಗೆ-ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯ : ದಿನೇಶ್ ಗುಂಡೂರಾವ್

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM1 Min Read

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM2 Mins Read

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM1 Min Read
Recent News

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM
State News
KARNATAKA

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

By kannadanewsnow0510/04/2026 1:45 PM KARNATAKA 1 Min Read

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಒಬ್ಬಳು ಸಾವನಪ್ಪಿದ್ದಾಳೆ. ಇದೀಗ ಇವೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ…

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.