ಬೆಂಗಳೂರು : ಪುನೀತ್ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಇಂದು ನಡೆಯುತ್ತಿರುವ ಪುನೀತ್ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನಗೆ ಆಹ್ವಾನಿಸಿಲ್ಲ, ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರಿದೆ. ಆದರೆ ಆದರೆ ಆಹ್ವಾನಿಸಿಲ್ಲ,ನಾನು ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಪತ್ರಿಕೆಯಲ್ಲಿ ನನ್ನ ಹೆಸರಿದೆ, ಆದರೆ ನನಗೆ ಬಂದು ಕರೆದಿಲ್ಲ, ಬಂದು ಕರೆದಿದ್ದರೆ ಹೋಗುತ್ತಿದ್ದೆ, ಪುನೀತ್ ಗೆ ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂತಸವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ನಟ ಪುನೀತ್ ರಾಜಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು,ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ಸೂಪರ್ ಸ್ಟಾರ್ ರಜನಿಕಾಂತ್ ಇಂದು ಚೆನ್ನೈನಿಂದ ಬೆಂಗಳೂರಿ ಗೆ ಆಗಮಿಸಿದ್ದಾರೆ. ಇಂದು ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ನಟ ರಜನಿಕಾಂತ್ ಗೆ ಆಹ್ವಾನ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಟ ರಜನಿಕಾಂತ್ ಅವರು ಇಂದು ಚೆನ್ನೈನಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ನಟ ರಜನಿಕಾಂತ್ ಅವರನ್ನು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವರಾದ ಡಾ.ಸುಧಾಕರ್ ಹಾಗೂ ಸಚಿವ ಮುನಿರತ್ನ ಸ್ವಾಗತಿಸಿದ್ದಾರೆ. ಪುನೀತ್ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ.

BREAKING NEWS: ಚಾಮರಾಜನಗರದಲ್ಲಿ ಮುರಿದು ಬಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ : ಪ್ರಾಣಪಾಯದಿಂದ ಭಕ್ತರು ಪಾರು

BIGG NEWS : ಪುಲ್ವಾಮ ದಾಳಿಯನ್ನು ಸಮರ್ಥಿಸಿ ಪೋಸ್ಟ್ : ಎಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ

BREAKING NEWS: ಚಾಮರಾಜನಗರದಲ್ಲಿ ಮುರಿದು ಬಿದ್ದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ : ಪ್ರಾಣಪಾಯದಿಂದ ಭಕ್ತರು ಪಾರು

Share.
Exit mobile version