Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

23/05/2025 9:39 PM

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM

BIG NEWS: ದೇಶದಲ್ಲೇ ಮೊದಲು: ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ‘ಕೀಮೋಥೆರಪಿ ಚಿಕಿತ್ಸೆ’ ಆರಂಭ

23/05/2025 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕುವೆಂಪು ವಿವಿಯಲ್ಲಿ ಕರ್ನಾಟಕ ‘ಹಕ್ಕಿ ಹಬ್ಬ’ ಆಚರಣೆ: ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ ಅಗತ್ಯ: ಕುಮಾರ್ ಪುಷ್ಕರ್
KARNATAKA

ಕುವೆಂಪು ವಿವಿಯಲ್ಲಿ ಕರ್ನಾಟಕ ‘ಹಕ್ಕಿ ಹಬ್ಬ’ ಆಚರಣೆ: ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ ಅಗತ್ಯ: ಕುಮಾರ್ ಪುಷ್ಕರ್

By kannadanewsnow0914/06/2024 8:17 PM

ಶಿವಮೊಗ್ಗ: ವನ್ಯಜೀವಿಗಳು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಮೂಡಿಸಲು ಪರಿಸರ ಪ್ರವಾಸೋದ್ಯಮವು ಅತ್ಯವಶ್ಯವಾಗಿದೆ. ಇದನ್ನು ಉತ್ತೇಜಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹೆಚ್ಚುವರಿ ಮುಖ್ಯ ಸಂರಕ್ಷಣಾಧಿಕಾರಿ ಹಾಗು ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಪುಷ್ಕರ್ ಅಭಿಪ್ರಾಯಪಟ್ಟರು.

ಭದ್ರಾ ಹುಲಿ ಸಂರಕ್ಷಿತ ಅರಣ್ಯ 25ನೇ ವರ್ಷದ ವಿಶೇಷ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ, ಭದ್ರಾ ಹುಲಿ ಸಂರಕ್ಷಿತ ಅರಣ್ಯ ಮಂಡಳಿ ಹಾಗು ಕುವೆಂಪು ವಿ ವಿ ಸಂಸ್ಥೆಗಳು ಜಂಟಿಯಾಗಿ 11ನೇ ಹಕ್ಕಿ ಹಬ್ಬವನ್ನು ಭದ್ರಾ ಹುಲಿ ಸಂರಕ್ಷಿತ ಅರಣ್ಯ ಚಿಕ್ಕಮಗಳೂರಿನಲ್ಲಿ ಜೂ. 14-16 ರ ವರೆಗೆ 3 ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಯ ಬಸವ ಸಭಾ ಭವನದಲ್ಲಿ ಶುಕ್ರವಾರ ಹಕ್ಕಿ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ಪ್ರವಾಸೋದ್ಯಮ ನೀತಿಯನ್ನು ರೂಪಿಸಿದ್ದು ಸದ್ಯದಲ್ಲೇ ಅನುಮೋದನೆ ಪಡೆಯಲಾಗುವುದು ಜೊತೆಗೆ ಪರಿಸರ ಪ್ರವಾಸೋದ್ಯಮದ ಕುರಿತು ಸಂಶೋಧನೆಗಳನ್ನು ನಡೆಸಲಾಗುತ್ತಿದೆ. ಪ್ರಕೃತಿ ಪ್ರಿಯರಿಗೆ ಟ್ರಕಿಂಗ್ ಸೇರಿದಂತೆ ವಿವಿಧ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಮಾರ್ ಪುಷ್ಕರ್ ತಿಳಿಸಿದರು.

ರಾಜ್ಯವು ಅತಿಹೆಚ್ಚು ಪಕ್ಷಿಪ್ರಭೇದಗಳಿಗೆ ತವರಾಗಿದೆ. ಬೇರೆಲ್ಲ ರೀತಿಯ ಪ್ರಾಣಿಗಳಿಗಿಂತಲ್ಲೂ ಹೆಚ್ಚಿನ ಪಕ್ಷಿಗಳ ಪ್ರಭೇದಗಳು ಇಲ್ಲಿ ಹೆಚ್ಚಿವೆ. ಕರ್ನಾಟಕವು 1359 ಪಕ್ಷಿಪಭೇದಗಳ ಬೀಡಾಗಿದೆ. ಜಾಗತಿಕವಾಗಿ ಇರುವ ಪಕ್ಷಿಗಳ ಸಂಕುಲದ ಶೇ. 10 ರಷ್ಟು ಭಾರತದಲ್ಲಿವೆ. ಅನೇಕ ಅಳಿವಿನಂಚಿನಲ್ಲಿರುವ ಪಕ್ಷಿಗಳು ಕರ್ನಾಟಕದಲ್ಲಿ ಸಂರಕ್ಷಣೆಗೆ ಒಳಪಟ್ಟಿವೆ ಎಂದು ಅವರು ತಿಳಿಸಿದರು.

ಕುಲಪತಿ ಪ್ರೊಫೆಸರ್ ಶರತ್ ಅನಂತಮೂರ್ತಿ ಮಾತನಾಡಿ, ಸಫಾರಿ ಇಂದು ಜನಪ್ರಿಯ ಚಟುವಟಿಕೆ ಆಗಿದೆ. ಸಫಾರಿ ಹೋದಾಗ ಪ್ರಾಣಿ ಪಕ್ಷಿಗಳು ನಮ್ಮ ಮುಂದೆ ಬಂದು ನಿಲ್ಲುತ್ತವೆ, ಕೆಲವೇ ಘಂಟೆಯಲ್ಲಿ ಎಲ್ಲವನ್ನೂ ನೋಡುವ ಹಂಬಲ ಜನರಿಗಿರುತ್ತದೆ. ಆದರೆ ಇದೊಂದು ಧ್ಯಾನ. ಮಾನವ-ಪ್ರಕೃತಿ-ಪ್ರಾಣಿ ಸಂಕುಲದ ನಂಟು-ಸೂಕ್ಷ್ಮತೆಗಳನ್ನು ಅರಿತು ನಂತರ ನೋಡಲು ತೆರಳಬೇಕು. ಸಾಕಷ್ಟು ತಾಳ್ಮೆ ಬೇಕು, ನಿರಂತರ ಅಲೋಚನೆಗೆ ಅಲ್ಲಿಂದ ಪ್ರಕ್ರಿಯೆ ಆರಂಭ ಆಗಬೇಕು. ಕೇವಲ ಮನರಂಜನೆ ಅಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ಯಶ್ಪಾಲ್ ಕ್ಷೀರಸಾಗರ್, ಕಾರ್ಯಯೋಜನೆ ಅಧಿಕಾರಿಯಾದ ಸೋನಾಲ್ ವ್ರುಷ್ಟಿ, ಶಿವಮೊಗ್ಗ ವಲಯದ ಉಪ ಅರಣ್ಯಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್, ನಂದೀಶ್ ಎಲ್, ಆನಂದ್ ಕೆಸಿ, ರಮೇಶ್ ಬಾಬು, ಕುಲಸಚಿವರಾದ ಮಂಜುನಾಥ್ ಎ ಎಲ್, ಪರೀಕ್ಷಾಂಗ ಕುಲಸಚಿವ ಪ್ರೊ. ಗೋಪಿನಾಥ್ ಎಸ್ ಎಂ,ವನ್ಯಜೀವಿ ವಿಭಾಗದ ಅಧ್ಯಕ್ಷ ಪ್ರೊ ವಿಜಯ್ ಕುಮಾರ್ ಉಪಸ್ಥಿತರಿದ್ದರು. ಹಕ್ಕಿ ಹಬ್ಬದ ಕಾರ್ಯಕ್ರಮದಲ್ಲಿ ವಿವಿಯ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿವಿಧ ವಿಭಾಗಗಳ ವಿದ್ಯಾರ್ಥಿಗಳು ತೆಗೆದಿದ್ದ ಹಕ್ಕಿಗಳ ವಿಶೇಷ ಛಾಯಾಚಿತ್ರಗಳನ್ನು ಕಾರ್ಯಕ್ರಮದಲ್ಲಿ ಪ್ರದರ್ಷಿಸಲಾಗಿತ್ತು ಮತ್ತು ಅವುಗಳ ಮಾಹಿತಿಯನ್ನು ಆಗಮಿಸಿದವರಿಗೆ ನೀಡಲಾಯಿತು.

ಕರ್ನಾಟಕದ ಪಕ್ಷಿ ಪ್ರಭೇದಗಳನ್ನು ನೆನೆಯಲು, ಸಂರಕ್ಷಿಸಲು 2015ರಿಂದ ಪ್ರತಿವರ್ಷ ಪಕ್ಷಿ ಹಬ್ಬ ಆಚರಿಸಲಾಗುತ್ತಿದೆ. ಹಕ್ಕಿಗಳ ಕಾಡುಗಳ ವೃದ್ಧಿಗೆ, ಅಧಿಕವಾಗುವ ಕೀಟಗಳ ನಾಶಕ್ಕೆ ಕಾರಣವಾಗುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸಮತೋಲನ ಮಾಡುತ್ತವೆ. ಭದ್ರಾ ಹುಲಿ ಸಂರಕ್ಷಿತ ಅರಣ್ಯದ 25ನೇ ವರ್ಷದ ಸಲುವಾಗಿ ಇಲ್ಲಿ ಪಕ್ಷಿ ಹಬ್ಬ ಏರ್ಪಡಿಸಲಾಗಿದೆ. ಆಗ ಇದ್ದ 5 ಹುಲಿಗಳ ಸಂಖ್ಯೆ ಈಗ 35ಕ್ಕೆ ಏರಿದೆ ಎಂದು ಪುಷ್ಕರ್ ತಿಳಿಸಿದರು.

ಈ ಬಾರಿ ‘ಕಪ್ಪು ತಲೆಯ ಹೊನ್ನಕ್ಕಿ’ 11ನೇ ಹಕ್ಕಿ ಹಬ್ಬದ ರಾಯಭಾರಿ ಹಕ್ಕಿ ಎಂದು ಕರ್ನಾಟಕ ಅರಣ್ಯ ಇಲಾಖೆ ಘೋಷಿಸಿದೆ. ಈ ಹಕ್ಕಿಯ ಕುರಿತು ಅರಿವು ಮೂಡಿಸಲು ಪುಸ್ತಕವೊಂದನ್ನು ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಪ್ರಕಟಿಸಿದ್ದು ಇಲ್ಲಿ ಬಿಡುಗಡೆಗೊಳಿಸಿತು. ಪ್ರತಿ ವರ್ಷ ಒಂದೊಂದು ಹಕ್ಕಿಯನ್ನು ರಾಯಭಾರಿ ಹಕ್ಕಿಯಾಗಿ ಘೋಷಿಸಲಾಗಿತ್ತು.

ನಾನು ‘ಕೇಂದ್ರ ಸಚಿವ’ನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ: ಡಿಕೆಶಿ ವಿರುದ್ಧ HDK ಆಕ್ರೋಶ

ತಳಮಟ್ಟದಲ್ಲಿ ಕಾರ್ಯಕರ್ತರ ಬಲವರ್ಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

23/05/2025 9:39 PM1 Min Read

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM1 Min Read

BIG NEWS: ದೇಶದಲ್ಲೇ ಮೊದಲು: ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ‘ಕೀಮೋಥೆರಪಿ ಚಿಕಿತ್ಸೆ’ ಆರಂಭ

23/05/2025 9:22 PM2 Mins Read
Recent News

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

23/05/2025 9:39 PM

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM

BIG NEWS: ದೇಶದಲ್ಲೇ ಮೊದಲು: ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ‘ಕೀಮೋಥೆರಪಿ ಚಿಕಿತ್ಸೆ’ ಆರಂಭ

23/05/2025 9:22 PM

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM
State News
KARNATAKA

ಬೆಂಗಳೂರಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ 5 ಸಿಬ್ಬಂದಿ ಸಸ್ಪೆಂಡ್

By kannadanewsnow0923/05/2025 9:39 PM KARNATAKA 1 Min Read

ಬೆಂಗಳೂರು: ಪರಿಶಿಷ್ಟ ಜಾತಿ/ಮೂಲ ಜಾತಿ ಸಮಗ್ರ ಸಮೀಕ್ಷೆಗಾಗಿ ಗೌರವಾನ್ವಿತ ನೀವೃತ್ತಿ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್ ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ…

BREAKING : 3 ಪ್ರಕರಣಗಳಲ್ಲಿ ಸಾಕ್ಷಿ ಒದಗಿಸಲು ವಿಫಲ : ಮುಂಡಗಾರು ಲತಾ ಸೇರಿದಂತೆ ಮಾಜಿ ನಕ್ಸಲರು ಖುಲಾಸೆ!

23/05/2025 9:28 PM

BIG NEWS: ದೇಶದಲ್ಲೇ ಮೊದಲು: ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ‘ಕೀಮೋಥೆರಪಿ ಚಿಕಿತ್ಸೆ’ ಆರಂಭ

23/05/2025 9:22 PM

ಮೇ.28ರಂದು ಬಾನು ಮುಷ್ತಾಕ್, ದೀಪ್ತಿ ಭಾಸ್ತಿಗೆ KUWJ ಅಭಿನಂದನೆ: ಅಧ್ಯಕ್ಷ ಶಿವಾನಂದ ತಗಡೂರ

23/05/2025 9:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.