ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಬೇಸರವಾಗಿರುವ ಮಧ್ಯಪ್ರಿಯರಿಗೆ ಮತ್ತೊಂದು ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು, ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಮತ್ತೊಮ್ಮೆ ಹೆಚ್ಚಿಸಲು ಮುಂದಾಗಿದ್ದು, ಎಲ್ಲವೂ ಅಂದುಕೊಂಡತೇ ಆದರೆ ಪ್ರತಿ 650 ಮಿಲಿ ಬಾಟಲಿಗೆ 8-10 ರೂ ಹೆಚ್ಚಳವಾಗುವ ಸಾಧ್ಯತೆ ಇದೆಯಂತೆ. ಈ ತಿಂಗಳು ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಬಗ್ಗೆ ಅಬಕಾರಿ ಇಲಾಖೆಯಿಂದ ಆಕ್ಷೇಪಣೆ ಸಲ್ಲಿಕೆಗೆ 7 ದಿನ ಅವಕಾಶ ನೀಡಿಲಾಗಿದೆ. ಸಾರ್ವಜನಿಕರು ಹಣಕಾಸು ಇಲಾಖೆಯ ಮುಖ್ಯಕಾರ್ಯದರ್ಶಿಗೆ ಆಕ್ಷೇಪಣೆ ಅರ್ಜಿ ಸಲ್ಲಿಸಬಹುದಾಗಿದೆ.
ಬಿಹಾರದಲ್ಲಿ ‘ಪೊಲೀಟಕಲ್ ಹೈಡ್ರಾಮ’, ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ‘ನಿತೀಶ್ ಕುಮಾರ್”!
PSI-CTI ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಪ್ರಕರಣ : ಕೊನೆಗೂ ಸಿಸಿಬಿ ಅಧಿಕಾರಿಗಳು ಮುಂದೆ ಬಾಯಿಬಿಟ್ಟ SI ಲಿಂಗಯ್ಯ
ಬಿಯರ್ ಮಾರಾಟದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿರುವುದರಿಂದ ಆ ಮೂಲದಿಂದ ಹೆಚ್ಚು ಆದಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ಸುಂಕವನ್ನು ಹೆಚ್ಚಿಸುವತ್ತ ಮನ ಮಾಡಿದೆ ಎನ್ನಲಾಗಿ ಗ್ಯಾರಂಟಿ ಹೊರೆ ವಿಪರೀತವಾಗಿರುವುದರಿಂದ ಮತ್ತೊಮ್ಮೆ ಬೆಲೆ ಏರಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತೀಯ ನಿರ್ಮಿತ ಮದ್ಯದ ಮೇಲೆ ಶೇ. 20ರಷ್ಟು ಮತ್ತು ಬಿಯರ್ ಮೇಲೆ ಶೇ. 175ರಿಂದ ಶೇ. 185ಕ್ಕೆ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದರು. ಈ ನಡುವೆ 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕ ಅಬಕಾರಿಯಿಂದ 36,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಿದೆ.