ಶ್ರೀನಗರ: ಶೋಪಿಯಾನ್ನ ಸೇಬಿನ ತೋಟದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ. ಈ ಇಬ್ಬರೂ ಕೂಡ ಹಿಂದೂಗಳು ಎಂದು ಪೊಲೀಸರು ತಿಳಿಸಿದ್ದಾರೆ.
“ಶೋಪಿಯಾನ್ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಭಯೋತ್ಪಾದಕರು ನಾಗರಿಕರ ಮೇಲೆ ಗುಂಡು ಹಾರಿಸಿದ್ದಾರೆ. ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇಬ್ಬರೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ಪೊಲೀಸರು ತಮ್ಮ ಅಧಿಕೃತ ಹ್ಯಾಂಡಲ್ನಿಂದ ಟ್ವೀಟ್ ಮಾಡಿದ್ದಾರೆ.
BIGG NEWS : ಶಿವಮೊಗ್ಗದಲ್ಲಿ ನಿನ್ನೆ ಸಾವರ್ಕರ್ ಫ್ಲೆಕ್ಸ್ ವಿವಾದ : 50-60 ಮಂದಿಯ ವಿರುದ್ಧ ಎಫ್ಐಆರ್ ದಾಖಲು
Breaking news: ಬಿಹಾರ ಸಚಿವ ಸಂಪುಟ ವಿಸ್ತರಣೆ: ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರು