ಬೆಂಗಳೂರು: ಮಂಡ್ಯದಲ್ಲಿ ಕಾವೇರಿ ಆರತಿ ನಡೆಸೋದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈಗಾಗಲೇ ಇದಕ್ಕಾಗಿ ಹಣವನ್ನು ಮಂಜೂರು ಮಾಡಲಾಗಿತ್ತು. ಎಲ್ಲಾ ಸಿದ್ಧತೆಗಳು ಕೂಡ ನಡೆಸಲಾಗುತ್ತಿತ್ತು. ಆದರೇ ಇದೀಗ ಹೈಕೋರ್ಟ್ ಕಾವೇರಿ ಆರತಿ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ.
ಈ ಸಂಬಂಧ ರೈತ ಸಂಘದಿಂದ ಕರ್ನಾಟಕ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯಲ್ಲಿ ಕಾವೇರಿ ಆರತಿಯಿಂದ ಆಗಬಹುದಾದಂತ ಕೆ ಆರ್ ಎಸ್ ಅಣೆಕಟ್ಟಿಗೆ ಹಾನಿ, ಪರಿಸರ, ನದಿಗೆ ಅಪಾಯದ ಬಗ್ಗೆ ವಿವರಿಸಲಾಗಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಕಾವೇರಿ ಆರತಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಲ್ಲದೇ ಈ ಸಂಬಂಧ 2 ವಾರಗಳಲ್ಲಿ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ಹೀಗಾಗಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಂತೆ ಆಗಿದೆ.
SHOCKING : ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ : ಮೂವರು ವಿದ್ಯಾರ್ಥಿಗಳು ಅರೆಸ್ಟ್.!