ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ತೆಲಂಗಾಣ ಸಿಎಂ ಪುತ್ರಿ ಮತ್ತು ಟಿಆರ್ಎಸ್ ಎಂಎಲ್ಸಿ ಕೆ ಕವಿತಾ ಸಿಬಿಐ ವಿಚಾರಣೆ ಎದುರಿಸಲು ಕಾಲಾವಕಾಶ ಕೋರಿ ಪತ್ರ ಬರೆದಿದ್ದಾರೆ.
ತನಿಖಾ ಸಂಸ್ಥೆಗೆ ಪತ್ರ ಬರೆದಿರುವ ಕವಿತಾ, ಎಫ್ಐಆರ್ ಪ್ರತಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ವೆಬ್ಸೈಟ್ನಲ್ಲಿ ಲಭ್ಯವಿರುವ ದೂರಿನ ವಿಷಯಗಳನ್ನು ಪರಿಶೀಲಿಸಿದ್ದೇನೆ. ಅದರಲ್ಲಿ ನನ್ನ ಹೆಸರು ಎಲ್ಲಿಯೂ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
ಕವಿತಾಗೆ ಡಿಸೆಂಬರ್ 6(ಮಂಗಳವಾರ)ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು. ಆದ್ರೆ, ಪೂರ್ವಭಾವಿ ಕಾರ್ಯಕ್ರಮಗಳಿರುವ ಕಾರಣ, ಮಂಗಳವಾರ ವಿಚಾರಣೆಗೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದು, ಡಿಸೆಂಬರ್ 11-15 (13 ರಂದು ಹೊರತುಪಡಿಸಿ) ನಿಮಗೆ ಯಾವ ದಿನ ಅನುಕೂಲಕರವೋ ಅಂದು ತಮ್ಮ ಹೈದರಾಬಾದ್ ನಿವಾಸಕ್ಕೆ ಬಂದು ವಿಚಾರಣೆ ನಡೆಸಬಹುದು ಎಂದು ಸಿಬಿಐಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
“ನಾನು ಕಾನೂನು ಪಾಲಿಸುವ ನಾಗರಿಕನಾಗಿದ್ದೇನೆ ಮತ್ತು ತನಿಖೆಗೆ ಸಹಕರಿಸುತ್ತೇನೆ. ತನಿಖೆಗೆ ಸಹಕರಿಸಲು ಮೇಲಿನ ಯಾವುದೇ ದಿನಾಂಕದಂದು ನಾನು ನಿಮ್ಮನ್ನು ಭೇಟಿಯಾಗುತ್ತೇನೆ. ಇದು ಕಾನೂನಿನಡಿಯಲ್ಲಿ ಲಭ್ಯವಿರುವ ನನ್ನ ಕಾನೂನು ಹಕ್ಕುಗಳಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.”
BIGG NEWS : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಉಗ್ರ ಶಾರಿಕ್ ಬಗ್ಗೆ `NIA’ಗೆ ಮತ್ತೊಂದು ಸ್ಪೋಟಕ ಮಾಹಿತಿ