Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಇತ್ತ ಗಮನಿಸಿ : 1-19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ `ಜಂತುಹುಳು ನಿವಾರಣಾ ಮಾತ್ರೆ’ ತಪ್ಪದೇ ನೀಡಿ.!

12/02/2026 5:50 AM

BIG NEWS : ಸಾರ್ವಜನಿಕರೇ ಎಚ್ಚರ : `ವಂದೇಮಾತರಂ’ ಗೀತೆಗೆ ಅವಮಾನ ಮಾಡಿದ್ರೆ ಗರಿಷ್ಠ 3 ವರ್ಷ ಜೈಲು ಶಿಕ್ಷೆ ಫಿಕ್ಸ್.!

12/02/2026 5:45 AM

BIG NEWS : ಶಿಕ್ಷಕರಿಗೆ `ಬಡ್ತಿ’ ಬೇಕಾದರೆ `TET’ ಪಾಸಾಗಲೇಬೇಕು : ಸುಪ್ರೀಂಕೋರ್ಟ್ ಮಹತ್ವದ ಆದೇಶ

12/02/2026 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೇಯಸ್ ಜೊತೆ ದಿಲ್ ದಾರ್ ಅಖಾಡಕ್ಕಿಳಿದ ಕೀರ್ತಿ ಕೃಷ್ಣ!
FILM

ಶ್ರೇಯಸ್ ಜೊತೆ ದಿಲ್ ದಾರ್ ಅಖಾಡಕ್ಕಿಳಿದ ಕೀರ್ತಿ ಕೃಷ್ಣ!

By kannadanewsnow0913/01/2025 10:00 PM

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಟಿಸಿರುವ ಚಿತ್ರ `ದಿಲ್ ದಾರ್’. ಆರಂಭಿಕವಾಗಿ ಕೆಲ ಮಾಹಿತಿ ನೀಡಿದ್ದ ಚಿತ್ರತಂಡ ಯಾವ ಭರಾಟೆಗಳೂ ಇಲ್ಲದೆ ತಣ್ಣಗೆ ಈ ಚಿತ್ರದ ಚಿತ್ರೀಕರಣ ಮುಗಿಸಿಕೊಂಡಿದೆ. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಹಾಡೊಂದು ಮಾತ್ರವೇ ಸದ್ಯ ಬಾಕಿ ಉಳಿದುಕೊಂಡಿದೆ. ಈ ಹಂತ ದಾಟಿಕೊಂಡರೂ ಸದರಿ ಸಿನಿಮಾ ನಾಯಕಿಯ ಬಗ್ಗೆ ಚಿತ್ರತಂಡ ಗೌಪ್ಯತೆ ಕಾಪಾಡಿಕೊಂಡಿತ್ತು. ಕಡೆಗೂ ಕೀರ್ತಿ ಕೃಷ್ಣ ಶ್ರೇಯಸ್ ಗೆ ನಾಯಕಿಯಾಗಿ ನಟಿಸಿದ್ದಾರೆಂಬ ಅಧಿಕೃತ ಮಾಹಿತಿಯನ್ನು ಇದೀಗ ಜಾಹೀರು ಮಾಡಲಾಗಿದೆ!

ಕೀರ್ತಿ ಕೃಷ್ಣ ಇತ್ತೀಚೆಗಷ್ಟೇ ಚಿತ್ರರಂಗದಲ್ಲಿ ಮೆಲುವಾಗಿ ಕೇಳಿಸುತ್ತಿರೋ ಹೆಸರು. ವಿಶೇಷವೆಂದರೆ, ಈಕೆ ನಟ ಶರಣ್ ಅವರ ಸೊಸೆ. ಅವರ ತಂಗಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ. ಸಿಂಪಲ್ ಸುನಿ ಮುಂಬರುವ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿರುವ ಕೀರ್ತಿ, ಈಗಾಗಲೇ ದಿಲ್ ದಾರ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಒಂದೊಳ್ಳೆ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆಂಬ ಮೆಚ್ಚುಗೆ ಚಿತ್ರತಂಡದಲ್ಲಿದೆ. ಒಂದು ವಿರಳ ಪ್ರೇಮ ಕಥೆಗೆ ನಿರ್ದೇಶಕರಿಲ್ಲಿ ದೃಷ್ಯ ಬರೂಪ ಕೊಟ್ಟಿದ್ದಾರಂತೆ. ಈ ಮೂಲಕ ಶ್ರೇಯಸ್ ಗೆ ಜೋಡಿಯಾಗಿ ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಖುಷಿಯಲ್ಲಿದ್ದಾರೆ.

ಪ್ರೇಮಕಥೆ ಅಂದಾಕ್ಷಣ ಒಂದು ಸಿದ್ಧಸೂತ್ರಕ್ಕಮಟಿಕೊಂಡ ಕಲ್ಪನೆ ಮೂಡಿಕೊಳ್ಳೋದು ಸಹಜ. ಆದರೆ, ಚಿತ್ರರಂಗದಲ್ಲಿ ದಶಕಗಳ ಕಾಲ ಪಳಗಿಕೊಂಡಿರುವ ಮಧುಗೌಡ ಚೌಕಟ್ಟಿನಾಚೆ ಹಬ್ಬಿಕೊಂಡ ಚೆಂದದ ಕಥೆಯೊಂದಿಗೆ ಈ ಸಿನಿಮಾವನ್ನು ರೂಪಿಸಿದ್ದಾರಂತೆ. ಶ್ರೇಯಸ್ ಮಂಜು ಕೂಡಾ ಅತ್ಯಂತ ಖುಷಿಯಿಂದಲೇ ಸದರಿ ಕಥೆಯನ್ನು ಒಪ್ಪಿಕೊಂಡಿದ್ದಾರೆ. ವೇಗವಾಗಿ ಚಿತ್ರೀಕರಣ ಮುಗಿಸಿಕೊಂಡಿರುವ ಚಿತ್ರತಂಡ ಸದ್ಯ ಒಂದು ಹಾಡನ್ನಷ್ಟೇ ಬಾಕಿ ಉಳಿಸಿಕೊಂಡಿದೆ. ಅತ್ಯಂತ ಅದ್ಧೂರಿಯಾಗಿ, ವಿಶೇಷವಾಗಿ ಆ ಹಾಡನ್ನು ಸೆರೆ ಹಿಡಿಯಲು ನಿರ್ದೇಶಕರು ತಯಾರಾಗಿದ್ದಾರೆ. ಈಗಾಗಲೇ ಅರ್ಜುನ್ ಜನ್ಯಾ ಸ್ಪೆಷಲ್ ಹಾಡೊಂದನ್ನು ಕಂಪೋಸ್ ಮಾಡಿ ಕೊಟ್ಟಿದ್ದಾರೆ. ಅದಕ್ಕೆ ತಕ್ಕುಗಾದ ನೃತ್ಯ ಸಂಯೋನೆಯೂ ನಡೆದಿದೆ. ಅಪ್ಪು ನಿರ್ಗಮನದ ನಂತರ ಆ ಪರಿಯ ನೃತ್ಯ ವೈಭವ ಮರೆಯಾದಂತಿದೆ. ಆದರೆ, ಈ ಹಾಡಿನಲ್ಲಿ ವಿಭಿನ್ನ ನೃತ್ಯಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ನಾಯಕ ನಟ ಶ್ರೇಯಸ್ ಇದಕ್ಕಾಗಿ ಶ್ರಮಪಟ್ಟು ಕಲಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಒಂದಿಡೀ ಚಿತ್ರತಂಡವೀಗ ಆ ಹಾಡಿಗಾಗಿ ತಾಲೀಮು ನಡೆಸುತ್ತಿದೆ.

ಆ ಹಾಡಿನ ಚಿತ್ರೀಕರಣದೊಂದಿಗೆ ಎಲ್ಲವೂ ಮುಕ್ತಾಯಗೊಳ್ಳಲಿದೆ. ಅಂದುಕೊಂಡಂತೆಯೇ ಎಲ್ಲ ನಡೆದರೆ ಇದೇ ಯುಗಾದಿಯ ಆಸುಪಾಸಲ್ಲಿ ದಿಲ್ ದಾರ್ ಚಿತ್ರ ತೆರೆಗಾಣಲಿದೆ. ಇಂಥಾ ಚಿತ್ರದ ಮೂಲಕ ಕೀರ್ತಿ ಕೃಷ್ಣ ಅವರಿಗೂ ಬಹುದೊಡ್ಡ ಬ್ರೇಕ್ ಸಿಗುವ ನಿರೀಕ್ಷೆಗಳಿವೆ. ಎಲ್ಲಾ ವರ್ಗಕ್ಕೂ ಹಿಡಿಸುವಂತೆ ರೂಪುಗೊಂಡಿರುವ ಈ ಸಿನಿಮಾದಲ್ಲಿ ಭರಪೂರ ಮನೋರಂಜನೆಯೂ ಇರಲಿದೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಸೀನುಗಳಲ್ಲಿ ಶ್ರೇಯಸ್ ಮಂಜು ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಲಿದ್ದಾರೆಂಬುದು ಚಿತ್ರತಂಡದ ಭರವಸೆ.

ಸಾಗರ ಜನತೆ ಸಮಸ್ಯೆ ಪರಿಹಾರಕ್ಕೆ ‘ದೇಶಿ ಸೇವಾ ಬ್ರಿಗೇಡ್’ ಮೂಲಕ ಹೋರಾಟ: ಅಧ್ಯಕ್ಷ ಎಂ.ಶ್ರೀಧರ ಮೂರ್ತಿ

BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ

Share. Facebook Twitter LinkedIn WhatsApp Email

Related Posts

‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಟೀಸರ್ ಬಿಡುಗಡೆ | The Kerala Story 2 Teaser

30/01/2026 2:13 PM1 Min Read

BREAKING : ಬಾಲಿವುಡ್ ನ `ದಿ ಕೇರಳ ಸ್ಟೋರಿ-2’ ಚಿತ್ರದ ಟೀಸರ್ ರಿಲೀಸ್ | WATCH VIDEO

30/01/2026 1:19 PM1 Min Read

BBK12: ಬಿಗ್​​ಬಾಸ್ ಕನ್ನಡ-12 ಗೆಲ್ಲಲಿರುವ ಸ್ಪರ್ಧಿಗೆ ಬಂದಿವೆ 37 ಕೋಟಿ ವೋಟ್!

17/01/2026 8:14 PM1 Min Read
Recent News

ಪೋಷಕರೇ ಇತ್ತ ಗಮನಿಸಿ : 1-19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ `ಜಂತುಹುಳು ನಿವಾರಣಾ ಮಾತ್ರೆ’ ತಪ್ಪದೇ ನೀಡಿ.!

12/02/2026 5:50 AM

BIG NEWS : ಸಾರ್ವಜನಿಕರೇ ಎಚ್ಚರ : `ವಂದೇಮಾತರಂ’ ಗೀತೆಗೆ ಅವಮಾನ ಮಾಡಿದ್ರೆ ಗರಿಷ್ಠ 3 ವರ್ಷ ಜೈಲು ಶಿಕ್ಷೆ ಫಿಕ್ಸ್.!

12/02/2026 5:45 AM

BIG NEWS : ಶಿಕ್ಷಕರಿಗೆ `ಬಡ್ತಿ’ ಬೇಕಾದರೆ `TET’ ಪಾಸಾಗಲೇಬೇಕು : ಸುಪ್ರೀಂಕೋರ್ಟ್ ಮಹತ್ವದ ಆದೇಶ

12/02/2026 5:40 AM

ರಾಜ್ಯ ಸರ್ಕಾರದಿಂದ `HRMS-2’ ಸಮಸ್ಯೆಗಳ ಪರಿಹಾರಕ್ಕೆ ಹೊಸ ಮಾರ್ಗಸೂಚಿ : ನೇರವಾಗಿ ಕಚೇರಿಗೆ ಬರುವಂತಿಲ್ಲ ಸಿಬ್ಬಂದಿ!

12/02/2026 5:25 AM
State News
KARNATAKA

ಪೋಷಕರೇ ಇತ್ತ ಗಮನಿಸಿ : 1-19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ `ಜಂತುಹುಳು ನಿವಾರಣಾ ಮಾತ್ರೆ’ ತಪ್ಪದೇ ನೀಡಿ.!

By kannadanewsnow5712/02/2026 5:50 AM KARNATAKA 3 Mins Read

ಬೆಂಗಳೂರು : ಪ್ರತಿ ವರ್ಷ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಿಸಲಾಗುತ್ತದೆ. 1 ರಿಂದ 19…

ರಾಜ್ಯ ಸರ್ಕಾರದಿಂದ `HRMS-2’ ಸಮಸ್ಯೆಗಳ ಪರಿಹಾರಕ್ಕೆ ಹೊಸ ಮಾರ್ಗಸೂಚಿ : ನೇರವಾಗಿ ಕಚೇರಿಗೆ ಬರುವಂತಿಲ್ಲ ಸಿಬ್ಬಂದಿ!

12/02/2026 5:25 AM

ಗಮನಿಸಿ : ಕೈಯಲ್ಲಿ ತೆಂಗಿನ ಕಾಯಿ ಹಿಡಿದು `ಬೋರ್ ವೆಲ್ ಪಾಯಿಂಟ್’ ಗುರುತಿಸಬಹುದಾ? ವಿಜ್ಞಾನ ಹೇಳುವ ಈ ಸತ್ಯ ತಿಳಿಯಿರಿ.!

12/02/2026 5:15 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ` HRMS-2’ ಸಮಸ್ಯೆ ಪರಿಹಾರಕ್ಕೆ ಸರ್ಕಾರದಿಂದ ಮಹತ್ವದ ಆದೇಶ

12/02/2026 5:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.