ಬೆಂಗಳೂರು: ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಮಾಡಿರುವಂತ ಆರೋಪದಲ್ಲಿ ಯಾವುದೇ ಉರುಳಿಲ್ಲ. ಅವರ ಬಳಿಯಲ್ಲಿ ದಾಖಲೆಗಳಿದ್ದರೇ 7 ದಿನಗಳೊಳಗೆ ಲೋಕಾಯುಕ್ತಕ್ಕೆ ದೂರು ನೀಡಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹಾಗೂ ಕ್ರಿಮಿನಲ್ ಕೇಸ್ ದಾಖಲಿಸೋದಾಗಿ ತೋಟಗಾರಿಕೆ  ಸಚಿವ ಮುನಿರತ್ನ ( Minister Munirathna ) ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೆಲ್ಮೆಟ್ ಧರಿಸದ ಲೈನ್‌ಮ್ಯಾನ್‌ಗೆ ದಂಡ ವಿಧಿಸಿದ ಟ್ರಾಫಿಕ್‌ ಪೊಲೀಸ್ : ಠಾಣೆಯ ʻವಿದ್ಯುತ್‌ ಸಂಪರ್ಕ ಕಡಿತʼಗೊಳಿಸಿದ video viral | WATCH

ಈ ಕುರಿತಂತೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಕಮೀಷನ್ ಪಡೆದಿರೋ ಆರೋಪ ಹಾಗೂ ಬೆದರಿಕೆ ಮಾಡಿರೋದೆಲ್ಲಾ ಸುಳ್ಳಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವಂತ ಆರೋಪಗಳೆಲ್ಲ ಸುಳ್ಳು. ಅವರು ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬುದಾಗಿ ಕಿಡಿಕಾರಿದರು.

BIGG NEWS : ಬಿಜೆಪಿ ಸರ್ಕಾರ 40% ಕಮಿಷನ್ ಅನ್ನು 50% ಗೆ ಏರಿಸಿ ಭ್ರಷ್ಟಾಚಾರದಲ್ಲಿ ಪ್ರಮೋಷನ್ ಪಡೆದಿದೆ : ರಣದೀಪ್ ಸಿಂಗ್ ಸುರ್ಜೆವಾಲಾ

ಕೆಂಪಣ್ಣ ಮಾಡಿದಂತ ಆರೋಪಗಳ ಸಂಬಂಧ 7 ದಿನಗಳಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬೇಕು. ಇಲ್ಲವೇ ಆರೋಪದ ಬಗ್ಗೆ ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಕೆಂಪಣ್ಣ ಸೇರಿದಂತೆ ಗುತ್ತಿಗೆದಾರರ ಸಂಘದ ಸದಸ್ಯರೆಲ್ಲರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹಾಗೂ ಕ್ರಿಮಿನಲ್ ಕೇಸ್ ದಾಖಲಿಸೋದಾಗಿ ಎಚ್ಚರಿಕೆ ನೀಡಿದ್ದಾರೆ.

Share.
Exit mobile version