ಬೆಂಗಳೂರು :  ಮುಂದಿನ ದಿನಗಳಲ್ಲಿ ಲಾಲ್‌ಬಾಗ್‌ನಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಿಸುತ್ತೇವೆ ಎಂದು ದೇವನಹಳ್ಳಿಯಲ್ಲಿ ಸಿಎಂ  ಬೊಮ್ಮಾಯಿ ಘೋಷಣೆ ಮಾಡಿದ್ದಾರೆ

BREAKING NEWS : ಮಹದೇವಪುರದಲ್ಲಿ `ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ’ ಉದ್ಘಾಟಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ನಿರ್ಮಿಸುತ್ತಿರುವ ಕೆಂಪೇಗೌಡರ ಥೀಮ್​ ಪಾರ್ಕ್​​ಗೆ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಬೆಂಗಳೂರು ಕೆಂಪೇಗೌಡರ ಕಾಲದಲ್ಲೂ ವಾಣಿಜ್ಯ ಕೇಂದ್ರವಾಗಿತ್ತು. ಕೆಂಪೇಗೌಡರು ಬೆಂಗಳೂರಿಗಾಗಿ ಹಲವು ಸಾಧನೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಲಾಲ್‌ಬಾಗ್‌ನಲ್ಲೂ ಕೆಂಪೇ ಗೌಡ ಪ್ರತಿಮೆ ನಿರ್ಮಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

BREAKING NEWS : ಮಹದೇವಪುರದಲ್ಲಿ `ಧರ್ಮಸ್ಥಳ ನಿಸರ್ಗ ಚಿಕಿತ್ಸೆ, ಯೋಗ ಶಿಕ್ಷಣ ಸಂಸ್ಥೆ’ ಉದ್ಘಾಟಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಕಾರ್ಯಕ್ರಮದಲ್ಲಿ  ಸಚಿವರಾದ ಆರ್​​.ಅಶೋಕ್​​, ಡಾ.ಅಶ್ವಥ್​​ ನಾರಾಯಣ್​​, ಡಾ.ಕೆ.ಸುಧಾಕರ್​​, ಕೆ.ಗೋಪಾಲಯ್ಯ, ಸಂಸದರಾದ ಡಿ.ವಿ.ಸದಾನಂದಗೌಡ, ಪಿಸಿ ಮೋಹನ್​​, ಬಿಡಿಎ ಅಧ್ಯಕ್ಷ ಎಸ್​.ಆರ್​​​.ವಿಶ್ವನಾಥ್​​​, ರಾಜ್ಯ ಸಭೆ ಸದಸ್ಯ ಜಗ್ಗೇಶ್​, ಎಂಎಲ್​ಸಿ ವೈ. ನಾರಾಯಣಸ್ವಾಮಿ ಮತ್ತಿತರರು ಭಾಗಿಯಾಗಿದ್ದರು.

Share.
Exit mobile version